Homeಅಂತರಾಷ್ಟ್ರೀಯ'ನರಹಂತಕ' ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂದರ್ಶನಕ್ಕೆ ವಿರೋಧ: ಫ್ರಾನ್ಸ್‌ನ ಮಾದ್ಯಮ ಕಚೇರಿ ಹೊರಗೆ ಪ್ರತಿಭಟನೆ

‘ನರಹಂತಕ’ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂದರ್ಶನಕ್ಕೆ ವಿರೋಧ: ಫ್ರಾನ್ಸ್‌ನ ಮಾದ್ಯಮ ಕಚೇರಿ ಹೊರಗೆ ಪ್ರತಿಭಟನೆ

- Advertisement -
- Advertisement -

ಗಾಝಾ ಹತ್ಯಾಕಾಂಡದ ರುವಾರಿ, ನರಹಂತಕ ಇಸ್ರೇಲ್‌ ಪ್ರಧಾನಿ ಬೆಂಜಮನ್‌ ನೆತನ್ಯಾಹು ಸಂದರ್ಶನ ನಡೆಯುತ್ತಿದ್ದ ಪಶ್ಚಿಮ ಪ್ಯಾರಿಸ್ ಉಪನಗರದ ಫ್ರಾನ್ಸ್‌ನ ಖಾಸಗಿ ಬ್ರಾಡ್‌ಕಾಸ್ಟರ್ ‘TF1’ ಕಚೇರಿ ಹೊರಗೆ ಸಾವಿರಾರು ಮಂದಿ ಸೇರಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಭಾರೀ ಪೊಲೀಸ್ ಭದ್ರತೆಯಿದ್ದ ಮಾದ್ಯಮ ಕಟ್ಟಡದ ಬಳಿ ಪ್ರತಿಭಟನಾಕಾರರು ಪ್ಯಾಲೆಸ್ತೀನ್‌ ಧ್ವಜಗಳನ್ನು ಹಿಡಿದುಕೊಂಡು ಪ್ರತಿಭಟನೆ ಮಾಡಿದ್ದಾರೆ. “ಗಾಝಾ, ಪ್ಯಾರಿಸ್ ನಿಮ್ಮೊಂದಿಗೆ ಇದೆ”, ತಕ್ಷಣದ ಕದನ ವಿರಾಮ ಮಾಡಬೇಕು ಮತ್ತು ‘ಇಸ್ರೇಲ್’- ಕೊಲೆಗಾರ ಎಂದು ಘೋಷಣೆಯನ್ನು ಕೂಗಿದ್ದರೆ.

TF1 ಸುದ್ದಿ ಚಾನೆಲ್‌ನಲ್ಲಿ ಪ್ರಸಾರವಾದ ಸಂದರ್ಶನದಲ್ಲಿ, ನೆತನ್ಯಾಹು ಗಾಝಾದ ಮೇಲಿನ ಯುದ್ಧವನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ನಾಗರಿಕರ ಸಾವಿನ ಸಂಖ್ಯೆಯು ಅತ್ಯಂತ ಕಡಿಮೆ ದರದಲ್ಲಿದೆ ಎಂದು ಹೇಳಿದ್ದಾರೆ. ಇಸ್ರೇಲ್ ನಾಗರಿಕರನ್ನು ಗುರಿಯಾಗಿಸಿಕೊಂಡಿಲ್ಲ ಅಥವಾ ಉದ್ದೇಶಪೂರ್ವಕವಾಗಿ ಕ್ಷಾಮವನ್ನು ಉಂಟುಮಾಡಲು ಪ್ರಯತ್ನಿಸುತ್ತಿಲ್ಲ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ.

ಯುಎನ್ ಏಜೆನ್ಸಿಗಳು, ನೆರವು ಗುಂಪುಗಳು ಗಾಝಾ ಭೂಪ್ರದೇಶವನ್ನು ಪ್ರವೇಶಿಸುವ ಮಾನವೀಯ ನೆರವಿನ ಮೇಲೆ ಇಸ್ರೇಲ್ ನಿರ್ಬಂಧಗಳ ಪರಿಣಾಮವಾಗಿ ಗಾಝಾವು ಕ್ಷಾಮವನ್ನು ಅನುಭವಿಸುತ್ತಿದೆ ಎಂದು ಹೇಳುತ್ತಿದೆ, ಗಾಝಾದ ಮಕ್ಕಳ ಅನ್ನ, ನೀರು, ಆಹಾರ ಸೇರಿ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ.

ಇಸ್ರೇಲ್‌ ಯುದ್ಧ ಘೋಷಿಸಿ ಅ.7ರಂದು ಗಾಝಾ ಮೇಲೆ ದಾಳಿ ಪ್ರಾರಂಭಿಸಿದ ಬಳಿಕ ಕನಿಷ್ಠ 36,224 ಪ್ಯಾಲೆಸ್ತೀನಿಯನ್ನರು  ಕೊಲ್ಲಲ್ಪಟ್ಟರು ಮತ್ತು 81,777 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಜಾಗತಿಕ ಖಂಡನೆ ಮತ್ತು ಹೇಗ್‌ನಲ್ಲಿರುವ ಅಂತರಾಷ್ಟ್ರೀಯ ನ್ಯಾಯಾಲಯವು ತಕ್ಷಣವೇ ನಗರದಿಂದ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದರೂ ಇಸ್ರೇಲ್ ರಾಫಾದ ಮೇಲೆ ಆಕ್ರಮಣವನ್ನು ಮುಂದುವರೆಸುತ್ತಿರುವುದರಿಂದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ರಫಾದಿಂದ ಸ್ಥಳಾಂತರಗೊಂಡಿದ್ದಾರೆ.

 

ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರೆವೈದ್ಯಕೀಯ ಸಿಬ್ಬಂದಿಗಳ ಹತ್ಯೆ

ರಫಾದಲ್ಲಿ ಇಸ್ರೇಲ್‌ ಪಡೆಗಳಿಂದ ಕೊಲ್ಲಲ್ಪಟ್ಟ ಇಬ್ಬರು ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ (PRCS) ಅರೆವೈದ್ಯರ ಕುಟುಂಬಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ತನ್ನ ಸಂತಾಪವನ್ನು ವ್ಯಕ್ತಪಡಿಸಿದೆ.

ರಾಫಾದ ತಾಲ್ ಅಸ್-ಸುಲ್ತಾನ್ ಪ್ರದೇಶದಲ್ಲಿ ಹೈಥಮ್ ತುಬಾಸಿ ಮತ್ತು ಸುಹೇಲ್ ಹಸ್ಸೌನಾ ಅವರು ತಮ್ಮ ಆಂಬ್ಯುಲೆನ್ಸ್‌ನಲ್ಲಿ ಜನರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದಾಗಿ ಇಸ್ರೇಲ್ ಉದ್ದೇಶಪೂರಕವಾಗಿ ದಾಳಿ ನಡೆಸಿ ಇಬ್ಬರು ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ ಸಿಬ್ಬಂದಿಗಳನ್ನು ಹತ್ಯೆ ಮಾಡಿದೆ ಎಂದು ಹೇಳಿಕೊಂಡಿದೆ. ಈವರೆಗೆ 19 ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ ಸಿಬ್ಬಂದಿಗಳು ಇಸ್ರೇಲ್‌ ದಾಳಿಗೆ ಬಲಿಯಾಗಿದ್ದಾರೆ.

ಗಾಝಾದ ನುಸಿರಾತ್ ನಿರಾಶ್ರಿತರ ಶಿಬಿರವನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ಮತ್ತೆ ನಡೆಸಿದ ದಾಳಿಗೆ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಗಾಝಾದ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದಾಗ ಸುರಕ್ಷಿತ ಸ್ಥಳವೆಂದು ನಾಗರಿಕರು ತಾತ್ಕಾಲಿಕ ನೆಲೆ ಕಂಡುಕೊಂಡಿದ್ದ ರಫಾ ಮೇಲೆ ಇಸ್ರೇಲ್‌ ದಾಳಿಯನ್ನು ಪ್ರಾರಂಭಿಸಿದೆ. ಮೂಲಗಳ ಪ್ರಕಾರ ಈ ನಗರದಲ್ಲಿ ಈವರೆಗೆ 60ಕ್ಕೂ ಅಧಿಕ ಮಂದಿಯ ಹತ್ಯೆ ನಡೆದಿದೆ. ಅಲ್ಲಿನ ನಾಗರಿಕರ ಕೊನೆಯ ಆಶ್ರಯದ ಮೇಲಿನ ದಾಳಿಗೆ ಜಗತ್ತಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೆ ಇಸ್ರೇಲ್‌ ತನ್ನ ಕ್ರೌರ್ಯವನ್ನು ಸಮರ್ಥಿಸಿಕೊಳ್ಳುತ್ತಿದೆ.

ಇದನ್ನು ಓದಿ: ಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...