Homeಅಂತರಾಷ್ಟ್ರೀಯ'ನರಹಂತಕ' ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂದರ್ಶನಕ್ಕೆ ವಿರೋಧ: ಫ್ರಾನ್ಸ್‌ನ ಮಾದ್ಯಮ ಕಚೇರಿ ಹೊರಗೆ ಪ್ರತಿಭಟನೆ

‘ನರಹಂತಕ’ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂದರ್ಶನಕ್ಕೆ ವಿರೋಧ: ಫ್ರಾನ್ಸ್‌ನ ಮಾದ್ಯಮ ಕಚೇರಿ ಹೊರಗೆ ಪ್ರತಿಭಟನೆ

- Advertisement -
- Advertisement -

ಗಾಝಾ ಹತ್ಯಾಕಾಂಡದ ರುವಾರಿ, ನರಹಂತಕ ಇಸ್ರೇಲ್‌ ಪ್ರಧಾನಿ ಬೆಂಜಮನ್‌ ನೆತನ್ಯಾಹು ಸಂದರ್ಶನ ನಡೆಯುತ್ತಿದ್ದ ಪಶ್ಚಿಮ ಪ್ಯಾರಿಸ್ ಉಪನಗರದ ಫ್ರಾನ್ಸ್‌ನ ಖಾಸಗಿ ಬ್ರಾಡ್‌ಕಾಸ್ಟರ್ ‘TF1’ ಕಚೇರಿ ಹೊರಗೆ ಸಾವಿರಾರು ಮಂದಿ ಸೇರಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಭಾರೀ ಪೊಲೀಸ್ ಭದ್ರತೆಯಿದ್ದ ಮಾದ್ಯಮ ಕಟ್ಟಡದ ಬಳಿ ಪ್ರತಿಭಟನಾಕಾರರು ಪ್ಯಾಲೆಸ್ತೀನ್‌ ಧ್ವಜಗಳನ್ನು ಹಿಡಿದುಕೊಂಡು ಪ್ರತಿಭಟನೆ ಮಾಡಿದ್ದಾರೆ. “ಗಾಝಾ, ಪ್ಯಾರಿಸ್ ನಿಮ್ಮೊಂದಿಗೆ ಇದೆ”, ತಕ್ಷಣದ ಕದನ ವಿರಾಮ ಮಾಡಬೇಕು ಮತ್ತು ‘ಇಸ್ರೇಲ್’- ಕೊಲೆಗಾರ ಎಂದು ಘೋಷಣೆಯನ್ನು ಕೂಗಿದ್ದರೆ.

TF1 ಸುದ್ದಿ ಚಾನೆಲ್‌ನಲ್ಲಿ ಪ್ರಸಾರವಾದ ಸಂದರ್ಶನದಲ್ಲಿ, ನೆತನ್ಯಾಹು ಗಾಝಾದ ಮೇಲಿನ ಯುದ್ಧವನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ನಾಗರಿಕರ ಸಾವಿನ ಸಂಖ್ಯೆಯು ಅತ್ಯಂತ ಕಡಿಮೆ ದರದಲ್ಲಿದೆ ಎಂದು ಹೇಳಿದ್ದಾರೆ. ಇಸ್ರೇಲ್ ನಾಗರಿಕರನ್ನು ಗುರಿಯಾಗಿಸಿಕೊಂಡಿಲ್ಲ ಅಥವಾ ಉದ್ದೇಶಪೂರ್ವಕವಾಗಿ ಕ್ಷಾಮವನ್ನು ಉಂಟುಮಾಡಲು ಪ್ರಯತ್ನಿಸುತ್ತಿಲ್ಲ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ.

ಯುಎನ್ ಏಜೆನ್ಸಿಗಳು, ನೆರವು ಗುಂಪುಗಳು ಗಾಝಾ ಭೂಪ್ರದೇಶವನ್ನು ಪ್ರವೇಶಿಸುವ ಮಾನವೀಯ ನೆರವಿನ ಮೇಲೆ ಇಸ್ರೇಲ್ ನಿರ್ಬಂಧಗಳ ಪರಿಣಾಮವಾಗಿ ಗಾಝಾವು ಕ್ಷಾಮವನ್ನು ಅನುಭವಿಸುತ್ತಿದೆ ಎಂದು ಹೇಳುತ್ತಿದೆ, ಗಾಝಾದ ಮಕ್ಕಳ ಅನ್ನ, ನೀರು, ಆಹಾರ ಸೇರಿ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ.

ಇಸ್ರೇಲ್‌ ಯುದ್ಧ ಘೋಷಿಸಿ ಅ.7ರಂದು ಗಾಝಾ ಮೇಲೆ ದಾಳಿ ಪ್ರಾರಂಭಿಸಿದ ಬಳಿಕ ಕನಿಷ್ಠ 36,224 ಪ್ಯಾಲೆಸ್ತೀನಿಯನ್ನರು  ಕೊಲ್ಲಲ್ಪಟ್ಟರು ಮತ್ತು 81,777 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಜಾಗತಿಕ ಖಂಡನೆ ಮತ್ತು ಹೇಗ್‌ನಲ್ಲಿರುವ ಅಂತರಾಷ್ಟ್ರೀಯ ನ್ಯಾಯಾಲಯವು ತಕ್ಷಣವೇ ನಗರದಿಂದ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದರೂ ಇಸ್ರೇಲ್ ರಾಫಾದ ಮೇಲೆ ಆಕ್ರಮಣವನ್ನು ಮುಂದುವರೆಸುತ್ತಿರುವುದರಿಂದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ರಫಾದಿಂದ ಸ್ಥಳಾಂತರಗೊಂಡಿದ್ದಾರೆ.

 

ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರೆವೈದ್ಯಕೀಯ ಸಿಬ್ಬಂದಿಗಳ ಹತ್ಯೆ

ರಫಾದಲ್ಲಿ ಇಸ್ರೇಲ್‌ ಪಡೆಗಳಿಂದ ಕೊಲ್ಲಲ್ಪಟ್ಟ ಇಬ್ಬರು ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ (PRCS) ಅರೆವೈದ್ಯರ ಕುಟುಂಬಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ತನ್ನ ಸಂತಾಪವನ್ನು ವ್ಯಕ್ತಪಡಿಸಿದೆ.

ರಾಫಾದ ತಾಲ್ ಅಸ್-ಸುಲ್ತಾನ್ ಪ್ರದೇಶದಲ್ಲಿ ಹೈಥಮ್ ತುಬಾಸಿ ಮತ್ತು ಸುಹೇಲ್ ಹಸ್ಸೌನಾ ಅವರು ತಮ್ಮ ಆಂಬ್ಯುಲೆನ್ಸ್‌ನಲ್ಲಿ ಜನರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದಾಗಿ ಇಸ್ರೇಲ್ ಉದ್ದೇಶಪೂರಕವಾಗಿ ದಾಳಿ ನಡೆಸಿ ಇಬ್ಬರು ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ ಸಿಬ್ಬಂದಿಗಳನ್ನು ಹತ್ಯೆ ಮಾಡಿದೆ ಎಂದು ಹೇಳಿಕೊಂಡಿದೆ. ಈವರೆಗೆ 19 ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ ಸಿಬ್ಬಂದಿಗಳು ಇಸ್ರೇಲ್‌ ದಾಳಿಗೆ ಬಲಿಯಾಗಿದ್ದಾರೆ.

ಗಾಝಾದ ನುಸಿರಾತ್ ನಿರಾಶ್ರಿತರ ಶಿಬಿರವನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ಮತ್ತೆ ನಡೆಸಿದ ದಾಳಿಗೆ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಗಾಝಾದ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದಾಗ ಸುರಕ್ಷಿತ ಸ್ಥಳವೆಂದು ನಾಗರಿಕರು ತಾತ್ಕಾಲಿಕ ನೆಲೆ ಕಂಡುಕೊಂಡಿದ್ದ ರಫಾ ಮೇಲೆ ಇಸ್ರೇಲ್‌ ದಾಳಿಯನ್ನು ಪ್ರಾರಂಭಿಸಿದೆ. ಮೂಲಗಳ ಪ್ರಕಾರ ಈ ನಗರದಲ್ಲಿ ಈವರೆಗೆ 60ಕ್ಕೂ ಅಧಿಕ ಮಂದಿಯ ಹತ್ಯೆ ನಡೆದಿದೆ. ಅಲ್ಲಿನ ನಾಗರಿಕರ ಕೊನೆಯ ಆಶ್ರಯದ ಮೇಲಿನ ದಾಳಿಗೆ ಜಗತ್ತಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೆ ಇಸ್ರೇಲ್‌ ತನ್ನ ಕ್ರೌರ್ಯವನ್ನು ಸಮರ್ಥಿಸಿಕೊಳ್ಳುತ್ತಿದೆ.

ಇದನ್ನು ಓದಿ: ಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...