Homeಅಂತರಾಷ್ಟ್ರೀಯಹಂಗೇರಿಯನ್ ಕಾದಂಬರಿಕಾರ ಲಾಸ್ಲೋ ಕ್ರಾಸ್ನಾಹೊರ್ಕಾಯ್‌ಗೆ 2025ರ ಸಾಹಿತ್ಯ ನೊಬೆಲ್‌ ಪ್ರಶಸ್ತಿ

ಹಂಗೇರಿಯನ್ ಕಾದಂಬರಿಕಾರ ಲಾಸ್ಲೋ ಕ್ರಾಸ್ನಾಹೊರ್ಕಾಯ್‌ಗೆ 2025ರ ಸಾಹಿತ್ಯ ನೊಬೆಲ್‌ ಪ್ರಶಸ್ತಿ

- Advertisement -
- Advertisement -

ಹಂಗೇರಿಯ ಪ್ರಸಿದ್ಧ ಕಾದಂಬರಿಕಾರ ಲಾಸ್ಲೊ ಕ್ರಾಸ್ನಾಹೊರ್ಕಾಯ್ ತಮ್ಮ ತಾತ್ವಿಕ, ದು:ಖಮಯ ಹಾಸ್ಯ ಮತ್ತು ವಿಶಿಷ್ಟ ಶೈಲಿಯ ಕೃತಿಗಳಿಗಾಗಿ 2025ರ ಸಾಹಿತ್ಯದ ನೊಬೆಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಸ್ಟಾಕ್‌ಹೋಮ್‌ನಲ್ಲಿ ಗುರುವಾರ (ಅ.9) ಪ್ರಶಸ್ತಿ ಘೋಷಣೆಯಾಗಿದ್ದು, ಕ್ರಾಸ್ನಾಹೊರ್ಕಾಯ್ ಅವರ ‘ಪ್ರೇರಕ ಮತ್ತು ದೂರದೃಷ್ಟಿಯ ಕೃತಿಗಳಿಗಾಗಿ (compelling and visionary oeuvre)ಈ ಗೌರವವನ್ನು ನೀಡಲಾಗಿದೆ ಎಂದು ಸ್ವೀಡಿಷ್ ಅಕಾಡೆಮಿ ತಿಳಿಸಿದೆ.

ಕ್ರಾಸ್ನಾಹೊರ್ಕಾಯ್ ಅವರ “Herscht 07769” ಕಾದಂಬರಿಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಎಂದು ವರದಿಯಾಗಿದೆ.

1954 ಜನವರಿ 5 ರಂದು ಹಂಗೇರಿಯ ಜಿಯುಲಾದಲ್ಲಿ ಜನಿಸಿದ ಕ್ರಾಸ್ನಾಹೊರ್ಕಾಯ್ ಅವರ ಕಾದಂಬರಿಗಳು ಒಂದೇ ಉದ್ದನೆಯ, ಸಂಕೀರ್ಣವಾದ ವಾಕ್ಯಗಳಲ್ಲಿ ರಚಿತವಾಗಿರುತ್ತವೆ. ಇದು ಅವರನ್ನು ವಿಶಿಷ್ಟ ಬರಹಗಾರನನ್ನಾಗಿ ಮಾಡಿದೆ. ಅವರ ಕೃತಿಗಳು ತಾತ್ವಿಕ ಚಿಂತನೆ, ದು:ಖದ ಹಾಸ್ಯ, ಮತ್ತು ಮಾನವ ಸ್ಥಿತಿಯ ಆಳವಾದ ಚಿತ್ರಣವನ್ನು ಒಳಗೊಂಡಿರುತ್ತವೆ.

ಕ್ರಾಸ್ನಾಹೊರ್ಕಾಯ್ ಅವರ ಕೃತಿಗಳು ಜಾಗತಿಕ ಸಾಹಿತ್ಯದಲ್ಲಿ ಮಹತ್ವದ ಸ್ಥಾನವನ್ನು ಹೊಂದಿವೆ. ಅವರ ಕಾದಂಬರಿಗಳು ಹಂಗೇರಿಯ ಸಾಮಾಜಿಕ-ಸಾಂಸ್ಕೃತಿಕ ಸನ್ನಿವೇಶಗಳನ್ನು ಚಿತ್ರಿಸುವುದರ ಜೊತೆಗೆ, ಸಾರ್ವತ್ರಿಕ ಮಾನವೀಯ ವಿಷಯಗಳನ್ನು ಸ್ಪರ್ಶಿಸುತ್ತವೆ.

ಸ್ವೀಡಿಷ್ ಅಕಾಡೆಮಿಯು ಕ್ರಾಸ್ನಾಹೊರ್ಕಾಯ್ ಅವರ ಕೃತಿಗಳ “ದೀರ್ಘವಾದ, ಆಕರ್ಷಕವಾದ ವಾಕ್ಯಗಳ ಮೂಲಕ ಓದುಗರನ್ನು ತಮ್ಮ ಕಾಲ್ಪನಿಕ ಜಗತ್ತಿಗೆ ಕರೆದೊಯ್ಯುವ” ಶಕ್ತಿಯನ್ನು ಶ್ಲಾಘಿಸಿದೆ.

ಈ ಬಾರಿ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾರತದ ಅಮಿತಾವ್ ಘೋಷ್ ಹಾಗೂ ಸಲ್ಮಾನ್ ರುಶ್ದಿ ಕೂಡ ಇದ್ದರು. ಇಬ್ಬರೂ ದೀರ್ಘಕಾಲದಿಂದಲೇ ವಿಶ್ವ ಸಾಹಿತ್ಯ ವೇದಿಕೆಯಲ್ಲಿ ಪ್ರಭಾವ ಬೀರಿದ ಲೇಖಕರು.

ಘೋಷ್ ಅವರ “The Shadow Lines, The Hungry Tide”ಮುಂತಾದ ಕೃತಿಗಳು ಭಾರತೀಯ ಇತಿಹಾಸ, ವಲಸೆ, ಮತ್ತು ಪರಿಸರ ಚಿಂತನೆಗಳ ಕುರಿತ ಆಳವಾದ ಅನ್ವೇಷಣೆಗೆ ಹೆಸರುವಾಸಿಯಾಗಿವೆ. ರಶ್ದಿ ಅವರ “Midnight’s Children” ಮತ್ತು “The Satanic Verses” ಕೃತಿಗಳು ಭಾರತೀಯ ಇಂಗ್ಲಿಷ್ ಸಾಹಿತ್ಯದ ದಿಕ್ಕು ತೋರಿಸಿದ ಕೃತಿಗಳೆಂದು ಪರಿಗಣಿಸಲಾಗುತ್ತದೆ.

ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...