Homeಅಂತರಾಷ್ಟ್ರೀಯಹಂಗೇರಿಯನ್ ಕಾದಂಬರಿಕಾರ ಲಾಸ್ಲೋ ಕ್ರಾಸ್ನಾಹೊರ್ಕಾಯ್‌ಗೆ 2025ರ ಸಾಹಿತ್ಯ ನೊಬೆಲ್‌ ಪ್ರಶಸ್ತಿ

ಹಂಗೇರಿಯನ್ ಕಾದಂಬರಿಕಾರ ಲಾಸ್ಲೋ ಕ್ರಾಸ್ನಾಹೊರ್ಕಾಯ್‌ಗೆ 2025ರ ಸಾಹಿತ್ಯ ನೊಬೆಲ್‌ ಪ್ರಶಸ್ತಿ

- Advertisement -
- Advertisement -

ಹಂಗೇರಿಯ ಪ್ರಸಿದ್ಧ ಕಾದಂಬರಿಕಾರ ಲಾಸ್ಲೊ ಕ್ರಾಸ್ನಾಹೊರ್ಕಾಯ್ ತಮ್ಮ ತಾತ್ವಿಕ, ದು:ಖಮಯ ಹಾಸ್ಯ ಮತ್ತು ವಿಶಿಷ್ಟ ಶೈಲಿಯ ಕೃತಿಗಳಿಗಾಗಿ 2025ರ ಸಾಹಿತ್ಯದ ನೊಬೆಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಸ್ಟಾಕ್‌ಹೋಮ್‌ನಲ್ಲಿ ಗುರುವಾರ (ಅ.9) ಪ್ರಶಸ್ತಿ ಘೋಷಣೆಯಾಗಿದ್ದು, ಕ್ರಾಸ್ನಾಹೊರ್ಕಾಯ್ ಅವರ ‘ಪ್ರೇರಕ ಮತ್ತು ದೂರದೃಷ್ಟಿಯ ಕೃತಿಗಳಿಗಾಗಿ (compelling and visionary oeuvre)ಈ ಗೌರವವನ್ನು ನೀಡಲಾಗಿದೆ ಎಂದು ಸ್ವೀಡಿಷ್ ಅಕಾಡೆಮಿ ತಿಳಿಸಿದೆ.

ಕ್ರಾಸ್ನಾಹೊರ್ಕಾಯ್ ಅವರ “Herscht 07769” ಕಾದಂಬರಿಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಎಂದು ವರದಿಯಾಗಿದೆ.

1954 ಜನವರಿ 5 ರಂದು ಹಂಗೇರಿಯ ಜಿಯುಲಾದಲ್ಲಿ ಜನಿಸಿದ ಕ್ರಾಸ್ನಾಹೊರ್ಕಾಯ್ ಅವರ ಕಾದಂಬರಿಗಳು ಒಂದೇ ಉದ್ದನೆಯ, ಸಂಕೀರ್ಣವಾದ ವಾಕ್ಯಗಳಲ್ಲಿ ರಚಿತವಾಗಿರುತ್ತವೆ. ಇದು ಅವರನ್ನು ವಿಶಿಷ್ಟ ಬರಹಗಾರನನ್ನಾಗಿ ಮಾಡಿದೆ. ಅವರ ಕೃತಿಗಳು ತಾತ್ವಿಕ ಚಿಂತನೆ, ದು:ಖದ ಹಾಸ್ಯ, ಮತ್ತು ಮಾನವ ಸ್ಥಿತಿಯ ಆಳವಾದ ಚಿತ್ರಣವನ್ನು ಒಳಗೊಂಡಿರುತ್ತವೆ.

ಕ್ರಾಸ್ನಾಹೊರ್ಕಾಯ್ ಅವರ ಕೃತಿಗಳು ಜಾಗತಿಕ ಸಾಹಿತ್ಯದಲ್ಲಿ ಮಹತ್ವದ ಸ್ಥಾನವನ್ನು ಹೊಂದಿವೆ. ಅವರ ಕಾದಂಬರಿಗಳು ಹಂಗೇರಿಯ ಸಾಮಾಜಿಕ-ಸಾಂಸ್ಕೃತಿಕ ಸನ್ನಿವೇಶಗಳನ್ನು ಚಿತ್ರಿಸುವುದರ ಜೊತೆಗೆ, ಸಾರ್ವತ್ರಿಕ ಮಾನವೀಯ ವಿಷಯಗಳನ್ನು ಸ್ಪರ್ಶಿಸುತ್ತವೆ.

ಸ್ವೀಡಿಷ್ ಅಕಾಡೆಮಿಯು ಕ್ರಾಸ್ನಾಹೊರ್ಕಾಯ್ ಅವರ ಕೃತಿಗಳ “ದೀರ್ಘವಾದ, ಆಕರ್ಷಕವಾದ ವಾಕ್ಯಗಳ ಮೂಲಕ ಓದುಗರನ್ನು ತಮ್ಮ ಕಾಲ್ಪನಿಕ ಜಗತ್ತಿಗೆ ಕರೆದೊಯ್ಯುವ” ಶಕ್ತಿಯನ್ನು ಶ್ಲಾಘಿಸಿದೆ.

ಈ ಬಾರಿ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾರತದ ಅಮಿತಾವ್ ಘೋಷ್ ಹಾಗೂ ಸಲ್ಮಾನ್ ರುಶ್ದಿ ಕೂಡ ಇದ್ದರು. ಇಬ್ಬರೂ ದೀರ್ಘಕಾಲದಿಂದಲೇ ವಿಶ್ವ ಸಾಹಿತ್ಯ ವೇದಿಕೆಯಲ್ಲಿ ಪ್ರಭಾವ ಬೀರಿದ ಲೇಖಕರು.

ಘೋಷ್ ಅವರ “The Shadow Lines, The Hungry Tide”ಮುಂತಾದ ಕೃತಿಗಳು ಭಾರತೀಯ ಇತಿಹಾಸ, ವಲಸೆ, ಮತ್ತು ಪರಿಸರ ಚಿಂತನೆಗಳ ಕುರಿತ ಆಳವಾದ ಅನ್ವೇಷಣೆಗೆ ಹೆಸರುವಾಸಿಯಾಗಿವೆ. ರಶ್ದಿ ಅವರ “Midnight’s Children” ಮತ್ತು “The Satanic Verses” ಕೃತಿಗಳು ಭಾರತೀಯ ಇಂಗ್ಲಿಷ್ ಸಾಹಿತ್ಯದ ದಿಕ್ಕು ತೋರಿಸಿದ ಕೃತಿಗಳೆಂದು ಪರಿಗಣಿಸಲಾಗುತ್ತದೆ.

ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...