Homeಅಂತರಾಷ್ಟ್ರೀಯಹಂಗೇರಿಯನ್ ಕಾದಂಬರಿಕಾರ ಲಾಸ್ಲೋ ಕ್ರಾಸ್ನಾಹೊರ್ಕಾಯ್‌ಗೆ 2025ರ ಸಾಹಿತ್ಯ ನೊಬೆಲ್‌ ಪ್ರಶಸ್ತಿ

ಹಂಗೇರಿಯನ್ ಕಾದಂಬರಿಕಾರ ಲಾಸ್ಲೋ ಕ್ರಾಸ್ನಾಹೊರ್ಕಾಯ್‌ಗೆ 2025ರ ಸಾಹಿತ್ಯ ನೊಬೆಲ್‌ ಪ್ರಶಸ್ತಿ

- Advertisement -
- Advertisement -

ಹಂಗೇರಿಯ ಪ್ರಸಿದ್ಧ ಕಾದಂಬರಿಕಾರ ಲಾಸ್ಲೊ ಕ್ರಾಸ್ನಾಹೊರ್ಕಾಯ್ ತಮ್ಮ ತಾತ್ವಿಕ, ದು:ಖಮಯ ಹಾಸ್ಯ ಮತ್ತು ವಿಶಿಷ್ಟ ಶೈಲಿಯ ಕೃತಿಗಳಿಗಾಗಿ 2025ರ ಸಾಹಿತ್ಯದ ನೊಬೆಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಸ್ಟಾಕ್‌ಹೋಮ್‌ನಲ್ಲಿ ಗುರುವಾರ (ಅ.9) ಪ್ರಶಸ್ತಿ ಘೋಷಣೆಯಾಗಿದ್ದು, ಕ್ರಾಸ್ನಾಹೊರ್ಕಾಯ್ ಅವರ ‘ಪ್ರೇರಕ ಮತ್ತು ದೂರದೃಷ್ಟಿಯ ಕೃತಿಗಳಿಗಾಗಿ (compelling and visionary oeuvre)ಈ ಗೌರವವನ್ನು ನೀಡಲಾಗಿದೆ ಎಂದು ಸ್ವೀಡಿಷ್ ಅಕಾಡೆಮಿ ತಿಳಿಸಿದೆ.

ಕ್ರಾಸ್ನಾಹೊರ್ಕಾಯ್ ಅವರ “Herscht 07769” ಕಾದಂಬರಿಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಎಂದು ವರದಿಯಾಗಿದೆ.

1954 ಜನವರಿ 5 ರಂದು ಹಂಗೇರಿಯ ಜಿಯುಲಾದಲ್ಲಿ ಜನಿಸಿದ ಕ್ರಾಸ್ನಾಹೊರ್ಕಾಯ್ ಅವರ ಕಾದಂಬರಿಗಳು ಒಂದೇ ಉದ್ದನೆಯ, ಸಂಕೀರ್ಣವಾದ ವಾಕ್ಯಗಳಲ್ಲಿ ರಚಿತವಾಗಿರುತ್ತವೆ. ಇದು ಅವರನ್ನು ವಿಶಿಷ್ಟ ಬರಹಗಾರನನ್ನಾಗಿ ಮಾಡಿದೆ. ಅವರ ಕೃತಿಗಳು ತಾತ್ವಿಕ ಚಿಂತನೆ, ದು:ಖದ ಹಾಸ್ಯ, ಮತ್ತು ಮಾನವ ಸ್ಥಿತಿಯ ಆಳವಾದ ಚಿತ್ರಣವನ್ನು ಒಳಗೊಂಡಿರುತ್ತವೆ.

ಕ್ರಾಸ್ನಾಹೊರ್ಕಾಯ್ ಅವರ ಕೃತಿಗಳು ಜಾಗತಿಕ ಸಾಹಿತ್ಯದಲ್ಲಿ ಮಹತ್ವದ ಸ್ಥಾನವನ್ನು ಹೊಂದಿವೆ. ಅವರ ಕಾದಂಬರಿಗಳು ಹಂಗೇರಿಯ ಸಾಮಾಜಿಕ-ಸಾಂಸ್ಕೃತಿಕ ಸನ್ನಿವೇಶಗಳನ್ನು ಚಿತ್ರಿಸುವುದರ ಜೊತೆಗೆ, ಸಾರ್ವತ್ರಿಕ ಮಾನವೀಯ ವಿಷಯಗಳನ್ನು ಸ್ಪರ್ಶಿಸುತ್ತವೆ.

ಸ್ವೀಡಿಷ್ ಅಕಾಡೆಮಿಯು ಕ್ರಾಸ್ನಾಹೊರ್ಕಾಯ್ ಅವರ ಕೃತಿಗಳ “ದೀರ್ಘವಾದ, ಆಕರ್ಷಕವಾದ ವಾಕ್ಯಗಳ ಮೂಲಕ ಓದುಗರನ್ನು ತಮ್ಮ ಕಾಲ್ಪನಿಕ ಜಗತ್ತಿಗೆ ಕರೆದೊಯ್ಯುವ” ಶಕ್ತಿಯನ್ನು ಶ್ಲಾಘಿಸಿದೆ.

ಈ ಬಾರಿ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾರತದ ಅಮಿತಾವ್ ಘೋಷ್ ಹಾಗೂ ಸಲ್ಮಾನ್ ರುಶ್ದಿ ಕೂಡ ಇದ್ದರು. ಇಬ್ಬರೂ ದೀರ್ಘಕಾಲದಿಂದಲೇ ವಿಶ್ವ ಸಾಹಿತ್ಯ ವೇದಿಕೆಯಲ್ಲಿ ಪ್ರಭಾವ ಬೀರಿದ ಲೇಖಕರು.

ಘೋಷ್ ಅವರ “The Shadow Lines, The Hungry Tide”ಮುಂತಾದ ಕೃತಿಗಳು ಭಾರತೀಯ ಇತಿಹಾಸ, ವಲಸೆ, ಮತ್ತು ಪರಿಸರ ಚಿಂತನೆಗಳ ಕುರಿತ ಆಳವಾದ ಅನ್ವೇಷಣೆಗೆ ಹೆಸರುವಾಸಿಯಾಗಿವೆ. ರಶ್ದಿ ಅವರ “Midnight’s Children” ಮತ್ತು “The Satanic Verses” ಕೃತಿಗಳು ಭಾರತೀಯ ಇಂಗ್ಲಿಷ್ ಸಾಹಿತ್ಯದ ದಿಕ್ಕು ತೋರಿಸಿದ ಕೃತಿಗಳೆಂದು ಪರಿಗಣಿಸಲಾಗುತ್ತದೆ.

ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...