Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕ್ಷಮಾಪಣೆ ಕೊಟ್ಟಿದ್ದಕ್ಕೆ ಹಂಗೇರಿ ಅಧ್ಯಕ್ಷೆ ರಾಜೀನಾಮೆ: ಭಾರತದಲ್ಲಿ ಹುಟ್ಟು ಹಾಕಿದ ಚರ್ಚೆ..

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕ್ಷಮಾಪಣೆ ಕೊಟ್ಟಿದ್ದಕ್ಕೆ ಹಂಗೇರಿ ಅಧ್ಯಕ್ಷೆ ರಾಜೀನಾಮೆ: ಭಾರತದಲ್ಲಿ ಹುಟ್ಟು ಹಾಕಿದ ಚರ್ಚೆ..

- Advertisement -
- Advertisement -

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಹಂಗೇರಿ ಅಧ್ಯಕ್ಷೆ ಕಟಲಿನ್ ನೊವಾಕ್ ಅವರು ಶನಿವಾರ ರಾಜೀನಾಮೆ ನೀಡಿದ್ದಾರೆ. ಕಟಲಿನ್ ನೊವಾಕ್ ಅವರು ಪ್ರಧಾನಿ ವಿಕ್ಟರ್ ಓರ್ಬನ್ ಅವರ ಆಪ್ತರು ಕೂಡ ಆಗಿದ್ದಾರೆ. ಹಂಗೇರಿ ಅಧ್ಯಕ್ಷರ ರಾಜೀನಾಮೆ ಭಾರತದಲ್ಲಿ ಕೂಡ ಚರ್ಚೆಗೆ ಗ್ರಾಸವಾಗಿದ್ದು, ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರದ ಆರೋಪಿಗಳಿಗೆ ಕ್ಷಮಾಧಾನ ನೀಡಿದ್ದಕ್ಕೆ ಭಾರತದಲ್ಲಿ ಜವಾಬ್ಧಾರಿಯುತ ಸ್ಥಾನದಲ್ಲಿರುವವರು ತಲೆಕೆಡಿಸಿಕೊಂಡಿರಲಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.

ಕಟಲಿನ್ ನೊವಾಕ್ ಅಲ್ಲದೆ ಮಾಜಿ ಸಚಿವೆ ಜುಡಿಟ್ ವರ್ಗಾ ಅವರು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ಅಧ್ಯಕ್ಷೀಯ ಭವನದ ಹೊರಗೆ ವಿರೋಧ ಪಕ್ಷದ ನಾಯಕರ ಪ್ರತಿಭಟನೆಗಳು ಹೆಚ್ಚುತ್ತಿರುವ ಮಧ್ಯೆ ಈ ಬೆಳವಣಿಗೆಗಳು ನಡೆದಿದೆ.

ನಾನು ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು 46ರ ಹರೆಯದ ನೊವಾಕ್ ಅವರು ಘೋಷಿಸಿದ್ದು, ಕ್ಷಮಾಧಾನ ವಿಚಾರದಲ್ಲಿ ತಪ್ಪು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ನಾನು ನೋಯಿಸಿದವರಿಗೆ ಮತ್ತು ನಾನು ಅವರನ್ನು ಬೆಂಬಲಿಸಲಿಲ್ಲ ಎಂಬ ಅನಿಸಿಕೆ ಹೊಂದಿರುವ ಎಲ್ಲಾ ಸಂತ್ರಸ್ತರಿಗೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ನೊವಾಕ್ ಅವರು ಮಾರ್ಚ್ 2022ರಲ್ಲಿ ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕರಿಸಿದ್ದರು. ಅವರು ಹಂಗೇರಿಯ ಅಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡ ಮೊದಲ ಮಹಿಳೆಯಾಗಿದ್ದರು.

ಮಕ್ಕಳ ಗೃಹವೊಂದರ ಮಾಜಿ ಉಪನಿರ್ದೇಶಕರಿಗೆ ಕ್ಷಮಾದಾನ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು.  ಕಳೆದ ಏಪ್ರಿಲ್‌ನಲ್ಲಿ ಪೋಪ್ ಫ್ರಾನ್ಸಿಸ್ ಅವರು ಬುಡಾಪೆಸ್ಟ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸ್ವತಂತ್ರ ಸುದ್ದಿ ತಾಣ 444 ಕಳೆದ ವಾರ ಈ ಬಗ್ಗೆ ವರದಿ ಮಾಡಿದ ನಂತರ ಪ್ರತಿಪಕ್ಷಗಳು ನೋವಾಕ್ ಅವರ ರಾಜೀನಾಮೆಗೆ ಕರೆ ನೀಡಿದ್ದವು. ಶುಕ್ರವಾರ ಸಂಜೆ ಪ್ರತಿಭಟನಾಕಾರರು ಅಧ್ಯಕ್ಷೀಯ ಭವನದ ಹೊರಗೆ ಜಮಾಯಿಸಿ ಪ್ರತಿಭಟನೆಯನ್ನು ನಡೆಸಿದ್ದರು.

ಶುಕ್ರವಾರ ನಡೆದ ವಿಶ್ವ ವಾಟರ್ ಪೋಲೊ ಚಾಂಪಿಯನ್‌ಶಿಪ್‌ನಲ್ಲಿ ಕಜಕಿಸ್ತಾನ್ ವಿರುದ್ಧದ ಹಂಗೇರಿಯ ಪಂದ್ಯದಲ್ಲಿ ಪಾಲ್ಗೊಳ್ಳಲು ಕತಾರ್‌ಗೆ ಬಂದಿದ್ದ ನೊವಾಕ್ ಬುಡಾಪೆಸ್ಟ್‌ಗೆ ಮರಳಿ ತನ್ನ ರಾಜೀನಾಮೆಯನ್ನು ಘೋಷಿಸಿದ್ದಾರೆ.

ಕಟಲಿನ್ ನೊವಾಕ್ ಅವರ ರಾಜೀನಾಮೆ ಘೋಷಣೆಯ ಕೆಲವೇ ನಿಮಿಷಗಳಲ್ಲಿ ಆರ್ಬನ್‌ನ ಮತ್ತೊಬ್ಬ ಮಿತ್ರ ಜುಡಿಟ್ ವರ್ಗಾ ಕೂಡ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ನಾನು ಸಂಸದರಾಗಿ ಮತ್ತು ಯುರೋಪಿಯನ್ ಪಾರ್ಲಿಮೆಂಟ್‌ ಪಟ್ಟಿಯ ಮುಖ್ಯಸ್ಥಳಾಗಿ ನನ್ನ ಸ್ಥಾನವನ್ನು ತ್ಯಜಿಸುತ್ತೇನೆ ಎಂದು ಅವರು ಫೇಸ್‌ಬುಕ್‌ನಲ್ಲಿ ಹೇಳಿದ್ದಾರೆ.

ವಿಕ್ಟರ್ ಓರ್ಬನ್ ಅವರ ಅನುಮೋದನೆಯಿಲ್ಲದೆ ಹಂಗೇರಿಯಲ್ಲಿ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ನಮಗೆ ತಿಳಿದಿದೆ ಎಂದು ಲಿಬರಲ್ ಮೊಮೆಂಟಮ್ ಪಕ್ಷದ ಸದಸ್ಯ ಡೊನಾತ್ ಫೇಸ್‌ಬುಕ್‌ನಲ್ಲಿ ಹೇಳಿದ್ದು, ಈ ಕ್ಷಮಾಧಾನಕ್ಕೆ ಅವರು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತು ಏನಾಯಿತು ಎಂದು ವಿವರಿಸಬೇಕು ಎಂದು ಹೇಳಿದ್ದಾರೆ.

ಈ ಘಟನೆ ಬೆನ್ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಕೀಸ್‌ ಬಾನು ಪ್ರಕರಣ ಸದ್ದು ಮಾಡಿದೆ. ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಹಂಗೇರಿಯನ್ ಅಧ್ಯಕ್ಷೆ ರಾಜೀನಾಮೆ ನೀಡಿದ್ದಾರೆ. ಆದರೆ ಭಾರತದಲ್ಲಿ 2002ರ ಗುಜರಾತ್‌ ಗಲಭೆಯ ವೇಳೆ ಬಲ್ಕೀಸ್‌ ಬಾನು ಸಾಮೂಹಿಕ ಅತ್ಯಚಾರ ಮತ್ತು ಆಕೆಯ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ್ದ ಪ್ರಕರಣದ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡಲಾಗಿತ್ತು. ಆದರೆ ಈ ಬಗ್ಗೆ ಭಾರತದಲ್ಲಿ ಸರಕಾರದ ಭಾಗವಾಗಿರುವ ಯಾರೂ ಕೂಡ ತಲೆ ಕೆಡಿಸಿಕೊಂಡಿರಲಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಇತ್ತೀಚೆಗೆ ಸುಪ್ರೀಂಕೋರ್ಟ್‌ ಬಿಲ್ಕೀಸ್‌ ಬಾನು ಪ್ರಕರಣದಲ್ಲಿ ಆರೋಪಿಗಳಿಗೆ ಕ್ಷಮಾಧಾನ ನೀಡಿ ಅವಧಿ ಪೂರ್ವವಾಗಿ ಬಿಡುಗಡೆ ಮಾಡಿರುವುದನ್ನು ರದ್ದುಗೊಳಿಸಿತ್ತು.ಜನವರಿಯಲ್ಲಿ, 11 ಅಪರಾಧಿಗಳಿಗೆ ಅವಧಿ ಪೂರ್ವ ಬಿಡುಗಡೆಯನ್ನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಗುಜರಾತ್ ರಾಜ್ಯವು “ಅಪರಾಧಿಗಳೊಂದಿಗೆ ಸಹಕರಿಸಿದೆ” ಎಂದು ಪೀಠ ಹೇಳಿತ್ತು. ಈ ಭಯದಿಂದಲೇ ನ್ಯಾಯಾಲಯವು ಬಿಲ್ಕಿಸ್ ಬಾನು ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮಹಾರಾಷ್ಟ್ರಕ್ಕೆ ವರ್ಗಾಯಿಸಿದ್ದು ಎಂದು ಹೇಳಿತ್ತು.

ಬಿಲ್ಕಿಸ್‌ ಬಾನು ಅತ್ಯಾಚಾರ ನಡೆಯುವಾಗ 2002ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರವಿತ್ತು. ಎಲ್ಲಾ 11 ಅತ್ಯಾಚಾರಿಗಳನ್ನು ಸನ್ನಡೆತೆಯ ಕಾರಣ ನೀಡಿ 2022ರ ಆಗಸ್ಟ್ 15 ರಂದು ಬಿಜೆಪಿ ಸರ್ಕಾರವೇ ಬಿಡುಗಡೆ ಮಾಡಿತ್ತು. ಅತ್ಯಾಚಾರ ಅಪರಾಧಿಗಳು ಎಲ್ಲರೂ ಬಿಜೆಪಿ ಸದಸ್ಯರು ಅಥವಾ ಅದರೊಂದಿಗೆ ಸಂಪರ್ಕ ಇರುವವರು ಎಂದು ಹೇಳಲಾಗ್ತಿದೆ. ಈ ಹಿಂದೆ ತಾತ್ಕಾಲಿಕ ಪೆರೋಲ್ ಮೇಲೆ ಇದ್ದಾಗ ಅಪರಾಧಿಗಳು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು ಎಂಬ ಆರೋಪವೂ ಇದೆ. ಅಪರಾಧಿಗಳ ಬಿಡುಗಡೆ ಕುರಿತು ನಿರ್ಧಿರಿಸಲು ಸರ್ಕಾರ ರಚಿಸಿದ್ದ ಸಮಿತಿ ಸದಸ್ಯರಲ್ಲಿ ಒಬ್ಬರಾದ ಬಿಜೆಪಿ ಶಾಸಕ “ಅತ್ಯಾಚಾರಿಗಳು ಬಿಡುಗಡೆಗೆ ಅರ್ಹರು, ಏಕೆಂದರೆ ಅವರೆಲ್ಲ ಉತ್ತಮ ಸಂಸ್ಕಾರ ಅಥವಾ ಮೌಲ್ಯಗಳನ್ನು ಹೊಂದಿರುವ ಬ್ರಾಹ್ಮಣರು” ಎಂದಿದ್ದರು.

 

ಕ್ಲಿಪಟ್ನ ಡಿ ರೊಝಾರಿಯೋ ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಹಂಗೇರಿಯನ್ ಅಧ್ಯಕ್ಷೆ, ಪ್ರಧಾನಿ ವಿಕ್ಟರ್ ಓರ್ಬನ್ ಅವರ ಆಪ್ತ ಮಿತ್ರ ಕಟಲಿನ್ ನೊವಾಕ್ ಶನಿವಾರ ರಾಜೀನಾಮೆ ಘೋಷಿಸಿದ್ದಾರೆ.
ಆದರೆ ಭಾರತದಲ್ಲಿ ಬಿಲ್ಕಿಸ್ ಪ್ರಕರಣದಲ್ಲಿ ಯಾರೂ ತಲೆ ಕೆಡಿಸಿಕೊಂಡಿಲ್ಲ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...