Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕ್ಷಮಾಪಣೆ ಕೊಟ್ಟಿದ್ದಕ್ಕೆ ಹಂಗೇರಿ ಅಧ್ಯಕ್ಷೆ ರಾಜೀನಾಮೆ: ಭಾರತದಲ್ಲಿ ಹುಟ್ಟು ಹಾಕಿದ ಚರ್ಚೆ..

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕ್ಷಮಾಪಣೆ ಕೊಟ್ಟಿದ್ದಕ್ಕೆ ಹಂಗೇರಿ ಅಧ್ಯಕ್ಷೆ ರಾಜೀನಾಮೆ: ಭಾರತದಲ್ಲಿ ಹುಟ್ಟು ಹಾಕಿದ ಚರ್ಚೆ..

- Advertisement -
- Advertisement -

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಹಂಗೇರಿ ಅಧ್ಯಕ್ಷೆ ಕಟಲಿನ್ ನೊವಾಕ್ ಅವರು ಶನಿವಾರ ರಾಜೀನಾಮೆ ನೀಡಿದ್ದಾರೆ. ಕಟಲಿನ್ ನೊವಾಕ್ ಅವರು ಪ್ರಧಾನಿ ವಿಕ್ಟರ್ ಓರ್ಬನ್ ಅವರ ಆಪ್ತರು ಕೂಡ ಆಗಿದ್ದಾರೆ. ಹಂಗೇರಿ ಅಧ್ಯಕ್ಷರ ರಾಜೀನಾಮೆ ಭಾರತದಲ್ಲಿ ಕೂಡ ಚರ್ಚೆಗೆ ಗ್ರಾಸವಾಗಿದ್ದು, ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರದ ಆರೋಪಿಗಳಿಗೆ ಕ್ಷಮಾಧಾನ ನೀಡಿದ್ದಕ್ಕೆ ಭಾರತದಲ್ಲಿ ಜವಾಬ್ಧಾರಿಯುತ ಸ್ಥಾನದಲ್ಲಿರುವವರು ತಲೆಕೆಡಿಸಿಕೊಂಡಿರಲಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.

ಕಟಲಿನ್ ನೊವಾಕ್ ಅಲ್ಲದೆ ಮಾಜಿ ಸಚಿವೆ ಜುಡಿಟ್ ವರ್ಗಾ ಅವರು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ಅಧ್ಯಕ್ಷೀಯ ಭವನದ ಹೊರಗೆ ವಿರೋಧ ಪಕ್ಷದ ನಾಯಕರ ಪ್ರತಿಭಟನೆಗಳು ಹೆಚ್ಚುತ್ತಿರುವ ಮಧ್ಯೆ ಈ ಬೆಳವಣಿಗೆಗಳು ನಡೆದಿದೆ.

ನಾನು ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು 46ರ ಹರೆಯದ ನೊವಾಕ್ ಅವರು ಘೋಷಿಸಿದ್ದು, ಕ್ಷಮಾಧಾನ ವಿಚಾರದಲ್ಲಿ ತಪ್ಪು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ನಾನು ನೋಯಿಸಿದವರಿಗೆ ಮತ್ತು ನಾನು ಅವರನ್ನು ಬೆಂಬಲಿಸಲಿಲ್ಲ ಎಂಬ ಅನಿಸಿಕೆ ಹೊಂದಿರುವ ಎಲ್ಲಾ ಸಂತ್ರಸ್ತರಿಗೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ನೊವಾಕ್ ಅವರು ಮಾರ್ಚ್ 2022ರಲ್ಲಿ ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕರಿಸಿದ್ದರು. ಅವರು ಹಂಗೇರಿಯ ಅಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡ ಮೊದಲ ಮಹಿಳೆಯಾಗಿದ್ದರು.

ಮಕ್ಕಳ ಗೃಹವೊಂದರ ಮಾಜಿ ಉಪನಿರ್ದೇಶಕರಿಗೆ ಕ್ಷಮಾದಾನ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು.  ಕಳೆದ ಏಪ್ರಿಲ್‌ನಲ್ಲಿ ಪೋಪ್ ಫ್ರಾನ್ಸಿಸ್ ಅವರು ಬುಡಾಪೆಸ್ಟ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸ್ವತಂತ್ರ ಸುದ್ದಿ ತಾಣ 444 ಕಳೆದ ವಾರ ಈ ಬಗ್ಗೆ ವರದಿ ಮಾಡಿದ ನಂತರ ಪ್ರತಿಪಕ್ಷಗಳು ನೋವಾಕ್ ಅವರ ರಾಜೀನಾಮೆಗೆ ಕರೆ ನೀಡಿದ್ದವು. ಶುಕ್ರವಾರ ಸಂಜೆ ಪ್ರತಿಭಟನಾಕಾರರು ಅಧ್ಯಕ್ಷೀಯ ಭವನದ ಹೊರಗೆ ಜಮಾಯಿಸಿ ಪ್ರತಿಭಟನೆಯನ್ನು ನಡೆಸಿದ್ದರು.

ಶುಕ್ರವಾರ ನಡೆದ ವಿಶ್ವ ವಾಟರ್ ಪೋಲೊ ಚಾಂಪಿಯನ್‌ಶಿಪ್‌ನಲ್ಲಿ ಕಜಕಿಸ್ತಾನ್ ವಿರುದ್ಧದ ಹಂಗೇರಿಯ ಪಂದ್ಯದಲ್ಲಿ ಪಾಲ್ಗೊಳ್ಳಲು ಕತಾರ್‌ಗೆ ಬಂದಿದ್ದ ನೊವಾಕ್ ಬುಡಾಪೆಸ್ಟ್‌ಗೆ ಮರಳಿ ತನ್ನ ರಾಜೀನಾಮೆಯನ್ನು ಘೋಷಿಸಿದ್ದಾರೆ.

ಕಟಲಿನ್ ನೊವಾಕ್ ಅವರ ರಾಜೀನಾಮೆ ಘೋಷಣೆಯ ಕೆಲವೇ ನಿಮಿಷಗಳಲ್ಲಿ ಆರ್ಬನ್‌ನ ಮತ್ತೊಬ್ಬ ಮಿತ್ರ ಜುಡಿಟ್ ವರ್ಗಾ ಕೂಡ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ನಾನು ಸಂಸದರಾಗಿ ಮತ್ತು ಯುರೋಪಿಯನ್ ಪಾರ್ಲಿಮೆಂಟ್‌ ಪಟ್ಟಿಯ ಮುಖ್ಯಸ್ಥಳಾಗಿ ನನ್ನ ಸ್ಥಾನವನ್ನು ತ್ಯಜಿಸುತ್ತೇನೆ ಎಂದು ಅವರು ಫೇಸ್‌ಬುಕ್‌ನಲ್ಲಿ ಹೇಳಿದ್ದಾರೆ.

ವಿಕ್ಟರ್ ಓರ್ಬನ್ ಅವರ ಅನುಮೋದನೆಯಿಲ್ಲದೆ ಹಂಗೇರಿಯಲ್ಲಿ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ನಮಗೆ ತಿಳಿದಿದೆ ಎಂದು ಲಿಬರಲ್ ಮೊಮೆಂಟಮ್ ಪಕ್ಷದ ಸದಸ್ಯ ಡೊನಾತ್ ಫೇಸ್‌ಬುಕ್‌ನಲ್ಲಿ ಹೇಳಿದ್ದು, ಈ ಕ್ಷಮಾಧಾನಕ್ಕೆ ಅವರು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತು ಏನಾಯಿತು ಎಂದು ವಿವರಿಸಬೇಕು ಎಂದು ಹೇಳಿದ್ದಾರೆ.

ಈ ಘಟನೆ ಬೆನ್ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಕೀಸ್‌ ಬಾನು ಪ್ರಕರಣ ಸದ್ದು ಮಾಡಿದೆ. ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಹಂಗೇರಿಯನ್ ಅಧ್ಯಕ್ಷೆ ರಾಜೀನಾಮೆ ನೀಡಿದ್ದಾರೆ. ಆದರೆ ಭಾರತದಲ್ಲಿ 2002ರ ಗುಜರಾತ್‌ ಗಲಭೆಯ ವೇಳೆ ಬಲ್ಕೀಸ್‌ ಬಾನು ಸಾಮೂಹಿಕ ಅತ್ಯಚಾರ ಮತ್ತು ಆಕೆಯ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ್ದ ಪ್ರಕರಣದ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡಲಾಗಿತ್ತು. ಆದರೆ ಈ ಬಗ್ಗೆ ಭಾರತದಲ್ಲಿ ಸರಕಾರದ ಭಾಗವಾಗಿರುವ ಯಾರೂ ಕೂಡ ತಲೆ ಕೆಡಿಸಿಕೊಂಡಿರಲಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಇತ್ತೀಚೆಗೆ ಸುಪ್ರೀಂಕೋರ್ಟ್‌ ಬಿಲ್ಕೀಸ್‌ ಬಾನು ಪ್ರಕರಣದಲ್ಲಿ ಆರೋಪಿಗಳಿಗೆ ಕ್ಷಮಾಧಾನ ನೀಡಿ ಅವಧಿ ಪೂರ್ವವಾಗಿ ಬಿಡುಗಡೆ ಮಾಡಿರುವುದನ್ನು ರದ್ದುಗೊಳಿಸಿತ್ತು.ಜನವರಿಯಲ್ಲಿ, 11 ಅಪರಾಧಿಗಳಿಗೆ ಅವಧಿ ಪೂರ್ವ ಬಿಡುಗಡೆಯನ್ನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಗುಜರಾತ್ ರಾಜ್ಯವು “ಅಪರಾಧಿಗಳೊಂದಿಗೆ ಸಹಕರಿಸಿದೆ” ಎಂದು ಪೀಠ ಹೇಳಿತ್ತು. ಈ ಭಯದಿಂದಲೇ ನ್ಯಾಯಾಲಯವು ಬಿಲ್ಕಿಸ್ ಬಾನು ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮಹಾರಾಷ್ಟ್ರಕ್ಕೆ ವರ್ಗಾಯಿಸಿದ್ದು ಎಂದು ಹೇಳಿತ್ತು.

ಬಿಲ್ಕಿಸ್‌ ಬಾನು ಅತ್ಯಾಚಾರ ನಡೆಯುವಾಗ 2002ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರವಿತ್ತು. ಎಲ್ಲಾ 11 ಅತ್ಯಾಚಾರಿಗಳನ್ನು ಸನ್ನಡೆತೆಯ ಕಾರಣ ನೀಡಿ 2022ರ ಆಗಸ್ಟ್ 15 ರಂದು ಬಿಜೆಪಿ ಸರ್ಕಾರವೇ ಬಿಡುಗಡೆ ಮಾಡಿತ್ತು. ಅತ್ಯಾಚಾರ ಅಪರಾಧಿಗಳು ಎಲ್ಲರೂ ಬಿಜೆಪಿ ಸದಸ್ಯರು ಅಥವಾ ಅದರೊಂದಿಗೆ ಸಂಪರ್ಕ ಇರುವವರು ಎಂದು ಹೇಳಲಾಗ್ತಿದೆ. ಈ ಹಿಂದೆ ತಾತ್ಕಾಲಿಕ ಪೆರೋಲ್ ಮೇಲೆ ಇದ್ದಾಗ ಅಪರಾಧಿಗಳು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು ಎಂಬ ಆರೋಪವೂ ಇದೆ. ಅಪರಾಧಿಗಳ ಬಿಡುಗಡೆ ಕುರಿತು ನಿರ್ಧಿರಿಸಲು ಸರ್ಕಾರ ರಚಿಸಿದ್ದ ಸಮಿತಿ ಸದಸ್ಯರಲ್ಲಿ ಒಬ್ಬರಾದ ಬಿಜೆಪಿ ಶಾಸಕ “ಅತ್ಯಾಚಾರಿಗಳು ಬಿಡುಗಡೆಗೆ ಅರ್ಹರು, ಏಕೆಂದರೆ ಅವರೆಲ್ಲ ಉತ್ತಮ ಸಂಸ್ಕಾರ ಅಥವಾ ಮೌಲ್ಯಗಳನ್ನು ಹೊಂದಿರುವ ಬ್ರಾಹ್ಮಣರು” ಎಂದಿದ್ದರು.

 

ಕ್ಲಿಪಟ್ನ ಡಿ ರೊಝಾರಿಯೋ ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಹಂಗೇರಿಯನ್ ಅಧ್ಯಕ್ಷೆ, ಪ್ರಧಾನಿ ವಿಕ್ಟರ್ ಓರ್ಬನ್ ಅವರ ಆಪ್ತ ಮಿತ್ರ ಕಟಲಿನ್ ನೊವಾಕ್ ಶನಿವಾರ ರಾಜೀನಾಮೆ ಘೋಷಿಸಿದ್ದಾರೆ.
ಆದರೆ ಭಾರತದಲ್ಲಿ ಬಿಲ್ಕಿಸ್ ಪ್ರಕರಣದಲ್ಲಿ ಯಾರೂ ತಲೆ ಕೆಡಿಸಿಕೊಂಡಿಲ್ಲ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...