Homeಮುಖಪುಟಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

- Advertisement -
- Advertisement -

ಜಾಗತಿಕ ಹಸಿವು ಸೂಚ್ಯಂಕ (GHI)ದಲ್ಲಿ ಭಾರತವು ವಿಶ್ವದ 127 ದೇಶಗಳಲ್ಲಿ 105 ನೇ ಸ್ಥಾನದಲ್ಲಿದೆ ಎಂದು 2024ರ 19ನೇ ಹಸಿವು ಸೂಚ್ಯಂತ ವರದಿ ಹೇಳಿದೆ. ಭಾರತವು ‘ಗಂಭೀರ’ ಹಸಿವಿನ ಸಮಸ್ಯೆಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿದ್ದು, ತನ್ನ ನೆರೆಯ ರಾಷ್ಟ್ರಗಳಾದ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಕ್ಕಿಂತ ಹಿಂದುಳಿದಿದೆ ಎಂದು ವರದಿ ಹೇಳಿದೆ. ಭಾರತದಲ್ಲಿ ಗಂಭೀರ ಹಸಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಕನ್ಸರ್ನ್ ವರ್ಲ್ಡ್‌ವೈಡ್’ ಮತ್ತು ‘ವೆಲ್ತ್‌ಹಂಗರ್‌ಹಿಲ್ಫ್’ ಜಂಟಿಯಾಗಿ ಪ್ರಕಟಿಸುತ್ತಿರುವ GHI ವರದಿಯ ಸರಣಿಯು ವಿಶ್ವಾದ್ಯಂತ ಹಸಿವನ್ನು ಟ್ರ್ಯಾಕ್ ಮಾಡುತ್ತದೆ ಮತ್ತು ತುರ್ತು ಕ್ರಮ ಅಗತ್ಯವಿರುವ ಪ್ರದೇಶಗಳ ಮೇಲೆ ಕೇಂದ್ರೀಕರಿಸುತ್ತದೆ.ಅದಾಗ್ಯೂ, ಭಾರತವು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಕ್ಕಿಂತ ಸ್ವಲ್ಪ ಮೇಲಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನವೆಂಬರ್ 1 ರಂದು ಎಲ್ಲಾ ಕಂಪನಿ, ಶಿಕ್ಷಣ ಕೇಂದ್ರಗಳಲ್ಲಿ ಕರ್ನಾಟಕ ಧ್ವಜಾರೋಹಣ ಕಡ್ಡಾಯ: ಡಿಕೆ ಶಿವಕುಮಾರ್

2024 ರ ವರದಿಯಲ್ಲಿ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಕೋರ್ 27.3 ಇದ್ದು, ಇದು ಹಸಿವಿನ ಗಂಭೀರ ಮಟ್ಟವನ್ನು ಪ್ರತಿಬಿಂಬಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಅಪೌಷ್ಟಿಕತೆಯ ಹರಡುವಿಕೆ ಸ್ವಲ್ಪ ಹೆಚ್ಚಳವಾಗಿದೆ ಎಂದು ವರದಿಯು ಹೇಳಿದೆ.

ಭಾರತದ 2016ರ GHI ಸ್ಕೋರ್‌ 29.3ಕ್ಕೆ ಹೋಲಿಸಿದರೆ 2024 ಸ್ಕೋರ್‌ ಸ್ವಲ್ಪ ಸುಧಾರಣೆಯಾಗಿದೆ. ಅದಾಗ್ಯೂ, ಈ ಸ್ಕೋರ್‌ ‘ಗಂಭೀರ ಹಸಿವು’ ವರ್ಗದ ಅಡಿಯಲ್ಲಿ ಬರುತ್ತದೆ. 2000 ಮತ್ತು 2008 ರಲ್ಲಿ ಕ್ರಮವಾಗಿ 38.4 ಮತ್ತು 35.2 ಅಂಕಗಳಿಗೆ ಹೋಲಿಸಿದರೆ ಗಣನೀಯ ಪ್ರಗತಿಯಾಗಿದೆ. ಈ ಎರಡೂ ಸ್ಕೋರ್‌ ಅನ್ನು ‘ಆತಂಕಕಾರಿ’ ಎಂದು ವರ್ಗೀಕರಿಸಲಾಗಿದೆ.

ಇದನ್ನೂಓದಿ: FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ಭಾರತವು ಮಕ್ಕಳ ಅಪೌಷ್ಟಿಕತೆಯಲ್ಲಿ ತೀವ್ರ ಸವಾಲುಗಳನ್ನು ಎದುರಿಸುತ್ತಲೇ ಇದೆ. ಜಾಗತಿಕವಾಗಿ ಅತಿ ಹೆಚ್ಚು ಮಕ್ಕಳ ಅಪೌಷ್ಠಿಕತೆ ಪ್ರಮಾಣ 18.7% ಇದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 35.5%ರಷ್ಟಿದ್ದು, ಐದು ವರ್ಷದೊಳಗಿನ ಮರಣ ಪ್ರಮಾಣವು 2.9% ಮತ್ತು ಅಪೌಷ್ಟಿಕತೆಯ ಪ್ರಮಾಣವು 13.7% ಇದೆ.

2000 ರಿಂದ ಭಾರತವು ತನ್ನ ಮಕ್ಕಳ ಮರಣ ಪ್ರಮಾಣವನ್ನು ಗಣನೀಯವಾಗಿ ಸುಧಾರಿಸಿದೆಯಾದರೂ, ಮಕ್ಕಳ ಅಪೌಷ್ಟಿಕತೆಯು ದೊಡ್ಡ ಸಮಸ್ಯೆಯಾಗಿ ಉಳಿದಿದೆ. ಬೆಳವಣಿಗೆ ಕುಂಠಿತ ದರಗಳು ಇನ್ನೂ ಆತಂಕಕಾರಿಯಾಗಿ ಹೆಚ್ಚಿವೆ. ಭಾರತದಲ್ಲಿ ಗಂಭೀರ ಹಸಿವು

2016 ರಿಂದ ಹಸಿವನ್ನು ಕಡಿಮೆ ಮಾಡುವಲ್ಲಿ ಜಾಗತಿಕ ಪ್ರಗತಿಯು ಕುಂಠಿತವಾಗಿದೆ ಎಂದು 2024ರ GHI ವರದಿ ಎತ್ತಿ ತೋರಿಸುತ್ತದೆ. 2030 ರ ವೇಳೆಗೆ ಶೂನ್ಯ ಹಸಿವನ್ನು ಸಾಧಿಸುವ ಗುರಿಯು ಅಸಂಭವವಾಗಿದೆ ಎಂದು ವರದಿ ಹೇಳಿದೆ. ಮೌಲ್ಯಮಾಪನ ಮಾಡಿದ 127 ದೇಶಗಳಲ್ಲಿ, 42 ದೇಶಗಳು ಇನ್ನೂ ‘ಆತಂಕಕಾರಿ’ ಅಥವಾ ‘ಗಂಭೀರ’ ಹಸಿವಿನ ಮಟ್ಟವನ್ನು ಅನುಭವಿಸುತ್ತಿವೆ.

ವಿಡಿಯೊನೋಡಿ: DCM ಆಗಿದ್ದವರು, ಸಚಿವರು ನಿಮಗೆ ಪ್ರೋಟೋಕಾಲ್ ಏನೆಂದು ಹೇಳಿಕೊಡಬೇಕೆ – ಅಶ್ವಥ್ ನಾರಾಯಣ್ ವಿರುದ್ಧ ಡಿ.ಕೆ ಸುರೇಶ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...