Homeಮುಖಪುಟಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

- Advertisement -
- Advertisement -

ಜಾಗತಿಕ ಹಸಿವು ಸೂಚ್ಯಂಕ (GHI)ದಲ್ಲಿ ಭಾರತವು ವಿಶ್ವದ 127 ದೇಶಗಳಲ್ಲಿ 105 ನೇ ಸ್ಥಾನದಲ್ಲಿದೆ ಎಂದು 2024ರ 19ನೇ ಹಸಿವು ಸೂಚ್ಯಂತ ವರದಿ ಹೇಳಿದೆ. ಭಾರತವು ‘ಗಂಭೀರ’ ಹಸಿವಿನ ಸಮಸ್ಯೆಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿದ್ದು, ತನ್ನ ನೆರೆಯ ರಾಷ್ಟ್ರಗಳಾದ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಕ್ಕಿಂತ ಹಿಂದುಳಿದಿದೆ ಎಂದು ವರದಿ ಹೇಳಿದೆ. ಭಾರತದಲ್ಲಿ ಗಂಭೀರ ಹಸಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಕನ್ಸರ್ನ್ ವರ್ಲ್ಡ್‌ವೈಡ್’ ಮತ್ತು ‘ವೆಲ್ತ್‌ಹಂಗರ್‌ಹಿಲ್ಫ್’ ಜಂಟಿಯಾಗಿ ಪ್ರಕಟಿಸುತ್ತಿರುವ GHI ವರದಿಯ ಸರಣಿಯು ವಿಶ್ವಾದ್ಯಂತ ಹಸಿವನ್ನು ಟ್ರ್ಯಾಕ್ ಮಾಡುತ್ತದೆ ಮತ್ತು ತುರ್ತು ಕ್ರಮ ಅಗತ್ಯವಿರುವ ಪ್ರದೇಶಗಳ ಮೇಲೆ ಕೇಂದ್ರೀಕರಿಸುತ್ತದೆ.ಅದಾಗ್ಯೂ, ಭಾರತವು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಕ್ಕಿಂತ ಸ್ವಲ್ಪ ಮೇಲಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನವೆಂಬರ್ 1 ರಂದು ಎಲ್ಲಾ ಕಂಪನಿ, ಶಿಕ್ಷಣ ಕೇಂದ್ರಗಳಲ್ಲಿ ಕರ್ನಾಟಕ ಧ್ವಜಾರೋಹಣ ಕಡ್ಡಾಯ: ಡಿಕೆ ಶಿವಕುಮಾರ್

2024 ರ ವರದಿಯಲ್ಲಿ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಕೋರ್ 27.3 ಇದ್ದು, ಇದು ಹಸಿವಿನ ಗಂಭೀರ ಮಟ್ಟವನ್ನು ಪ್ರತಿಬಿಂಬಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಅಪೌಷ್ಟಿಕತೆಯ ಹರಡುವಿಕೆ ಸ್ವಲ್ಪ ಹೆಚ್ಚಳವಾಗಿದೆ ಎಂದು ವರದಿಯು ಹೇಳಿದೆ.

ಭಾರತದ 2016ರ GHI ಸ್ಕೋರ್‌ 29.3ಕ್ಕೆ ಹೋಲಿಸಿದರೆ 2024 ಸ್ಕೋರ್‌ ಸ್ವಲ್ಪ ಸುಧಾರಣೆಯಾಗಿದೆ. ಅದಾಗ್ಯೂ, ಈ ಸ್ಕೋರ್‌ ‘ಗಂಭೀರ ಹಸಿವು’ ವರ್ಗದ ಅಡಿಯಲ್ಲಿ ಬರುತ್ತದೆ. 2000 ಮತ್ತು 2008 ರಲ್ಲಿ ಕ್ರಮವಾಗಿ 38.4 ಮತ್ತು 35.2 ಅಂಕಗಳಿಗೆ ಹೋಲಿಸಿದರೆ ಗಣನೀಯ ಪ್ರಗತಿಯಾಗಿದೆ. ಈ ಎರಡೂ ಸ್ಕೋರ್‌ ಅನ್ನು ‘ಆತಂಕಕಾರಿ’ ಎಂದು ವರ್ಗೀಕರಿಸಲಾಗಿದೆ.

ಇದನ್ನೂಓದಿ: FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ಭಾರತವು ಮಕ್ಕಳ ಅಪೌಷ್ಟಿಕತೆಯಲ್ಲಿ ತೀವ್ರ ಸವಾಲುಗಳನ್ನು ಎದುರಿಸುತ್ತಲೇ ಇದೆ. ಜಾಗತಿಕವಾಗಿ ಅತಿ ಹೆಚ್ಚು ಮಕ್ಕಳ ಅಪೌಷ್ಠಿಕತೆ ಪ್ರಮಾಣ 18.7% ಇದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 35.5%ರಷ್ಟಿದ್ದು, ಐದು ವರ್ಷದೊಳಗಿನ ಮರಣ ಪ್ರಮಾಣವು 2.9% ಮತ್ತು ಅಪೌಷ್ಟಿಕತೆಯ ಪ್ರಮಾಣವು 13.7% ಇದೆ.

2000 ರಿಂದ ಭಾರತವು ತನ್ನ ಮಕ್ಕಳ ಮರಣ ಪ್ರಮಾಣವನ್ನು ಗಣನೀಯವಾಗಿ ಸುಧಾರಿಸಿದೆಯಾದರೂ, ಮಕ್ಕಳ ಅಪೌಷ್ಟಿಕತೆಯು ದೊಡ್ಡ ಸಮಸ್ಯೆಯಾಗಿ ಉಳಿದಿದೆ. ಬೆಳವಣಿಗೆ ಕುಂಠಿತ ದರಗಳು ಇನ್ನೂ ಆತಂಕಕಾರಿಯಾಗಿ ಹೆಚ್ಚಿವೆ. ಭಾರತದಲ್ಲಿ ಗಂಭೀರ ಹಸಿವು

2016 ರಿಂದ ಹಸಿವನ್ನು ಕಡಿಮೆ ಮಾಡುವಲ್ಲಿ ಜಾಗತಿಕ ಪ್ರಗತಿಯು ಕುಂಠಿತವಾಗಿದೆ ಎಂದು 2024ರ GHI ವರದಿ ಎತ್ತಿ ತೋರಿಸುತ್ತದೆ. 2030 ರ ವೇಳೆಗೆ ಶೂನ್ಯ ಹಸಿವನ್ನು ಸಾಧಿಸುವ ಗುರಿಯು ಅಸಂಭವವಾಗಿದೆ ಎಂದು ವರದಿ ಹೇಳಿದೆ. ಮೌಲ್ಯಮಾಪನ ಮಾಡಿದ 127 ದೇಶಗಳಲ್ಲಿ, 42 ದೇಶಗಳು ಇನ್ನೂ ‘ಆತಂಕಕಾರಿ’ ಅಥವಾ ‘ಗಂಭೀರ’ ಹಸಿವಿನ ಮಟ್ಟವನ್ನು ಅನುಭವಿಸುತ್ತಿವೆ.

ವಿಡಿಯೊನೋಡಿ: DCM ಆಗಿದ್ದವರು, ಸಚಿವರು ನಿಮಗೆ ಪ್ರೋಟೋಕಾಲ್ ಏನೆಂದು ಹೇಳಿಕೊಡಬೇಕೆ – ಅಶ್ವಥ್ ನಾರಾಯಣ್ ವಿರುದ್ಧ ಡಿ.ಕೆ ಸುರೇಶ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...