Homeಮುಖಪುಟಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

- Advertisement -
- Advertisement -

ಜಾಗತಿಕ ಹಸಿವು ಸೂಚ್ಯಂಕ (GHI)ದಲ್ಲಿ ಭಾರತವು ವಿಶ್ವದ 127 ದೇಶಗಳಲ್ಲಿ 105 ನೇ ಸ್ಥಾನದಲ್ಲಿದೆ ಎಂದು 2024ರ 19ನೇ ಹಸಿವು ಸೂಚ್ಯಂತ ವರದಿ ಹೇಳಿದೆ. ಭಾರತವು ‘ಗಂಭೀರ’ ಹಸಿವಿನ ಸಮಸ್ಯೆಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿದ್ದು, ತನ್ನ ನೆರೆಯ ರಾಷ್ಟ್ರಗಳಾದ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಕ್ಕಿಂತ ಹಿಂದುಳಿದಿದೆ ಎಂದು ವರದಿ ಹೇಳಿದೆ. ಭಾರತದಲ್ಲಿ ಗಂಭೀರ ಹಸಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಕನ್ಸರ್ನ್ ವರ್ಲ್ಡ್‌ವೈಡ್’ ಮತ್ತು ‘ವೆಲ್ತ್‌ಹಂಗರ್‌ಹಿಲ್ಫ್’ ಜಂಟಿಯಾಗಿ ಪ್ರಕಟಿಸುತ್ತಿರುವ GHI ವರದಿಯ ಸರಣಿಯು ವಿಶ್ವಾದ್ಯಂತ ಹಸಿವನ್ನು ಟ್ರ್ಯಾಕ್ ಮಾಡುತ್ತದೆ ಮತ್ತು ತುರ್ತು ಕ್ರಮ ಅಗತ್ಯವಿರುವ ಪ್ರದೇಶಗಳ ಮೇಲೆ ಕೇಂದ್ರೀಕರಿಸುತ್ತದೆ.ಅದಾಗ್ಯೂ, ಭಾರತವು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಕ್ಕಿಂತ ಸ್ವಲ್ಪ ಮೇಲಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನವೆಂಬರ್ 1 ರಂದು ಎಲ್ಲಾ ಕಂಪನಿ, ಶಿಕ್ಷಣ ಕೇಂದ್ರಗಳಲ್ಲಿ ಕರ್ನಾಟಕ ಧ್ವಜಾರೋಹಣ ಕಡ್ಡಾಯ: ಡಿಕೆ ಶಿವಕುಮಾರ್

2024 ರ ವರದಿಯಲ್ಲಿ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಕೋರ್ 27.3 ಇದ್ದು, ಇದು ಹಸಿವಿನ ಗಂಭೀರ ಮಟ್ಟವನ್ನು ಪ್ರತಿಬಿಂಬಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಅಪೌಷ್ಟಿಕತೆಯ ಹರಡುವಿಕೆ ಸ್ವಲ್ಪ ಹೆಚ್ಚಳವಾಗಿದೆ ಎಂದು ವರದಿಯು ಹೇಳಿದೆ.

ಭಾರತದ 2016ರ GHI ಸ್ಕೋರ್‌ 29.3ಕ್ಕೆ ಹೋಲಿಸಿದರೆ 2024 ಸ್ಕೋರ್‌ ಸ್ವಲ್ಪ ಸುಧಾರಣೆಯಾಗಿದೆ. ಅದಾಗ್ಯೂ, ಈ ಸ್ಕೋರ್‌ ‘ಗಂಭೀರ ಹಸಿವು’ ವರ್ಗದ ಅಡಿಯಲ್ಲಿ ಬರುತ್ತದೆ. 2000 ಮತ್ತು 2008 ರಲ್ಲಿ ಕ್ರಮವಾಗಿ 38.4 ಮತ್ತು 35.2 ಅಂಕಗಳಿಗೆ ಹೋಲಿಸಿದರೆ ಗಣನೀಯ ಪ್ರಗತಿಯಾಗಿದೆ. ಈ ಎರಡೂ ಸ್ಕೋರ್‌ ಅನ್ನು ‘ಆತಂಕಕಾರಿ’ ಎಂದು ವರ್ಗೀಕರಿಸಲಾಗಿದೆ.

ಇದನ್ನೂಓದಿ: FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ಭಾರತವು ಮಕ್ಕಳ ಅಪೌಷ್ಟಿಕತೆಯಲ್ಲಿ ತೀವ್ರ ಸವಾಲುಗಳನ್ನು ಎದುರಿಸುತ್ತಲೇ ಇದೆ. ಜಾಗತಿಕವಾಗಿ ಅತಿ ಹೆಚ್ಚು ಮಕ್ಕಳ ಅಪೌಷ್ಠಿಕತೆ ಪ್ರಮಾಣ 18.7% ಇದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 35.5%ರಷ್ಟಿದ್ದು, ಐದು ವರ್ಷದೊಳಗಿನ ಮರಣ ಪ್ರಮಾಣವು 2.9% ಮತ್ತು ಅಪೌಷ್ಟಿಕತೆಯ ಪ್ರಮಾಣವು 13.7% ಇದೆ.

2000 ರಿಂದ ಭಾರತವು ತನ್ನ ಮಕ್ಕಳ ಮರಣ ಪ್ರಮಾಣವನ್ನು ಗಣನೀಯವಾಗಿ ಸುಧಾರಿಸಿದೆಯಾದರೂ, ಮಕ್ಕಳ ಅಪೌಷ್ಟಿಕತೆಯು ದೊಡ್ಡ ಸಮಸ್ಯೆಯಾಗಿ ಉಳಿದಿದೆ. ಬೆಳವಣಿಗೆ ಕುಂಠಿತ ದರಗಳು ಇನ್ನೂ ಆತಂಕಕಾರಿಯಾಗಿ ಹೆಚ್ಚಿವೆ. ಭಾರತದಲ್ಲಿ ಗಂಭೀರ ಹಸಿವು

2016 ರಿಂದ ಹಸಿವನ್ನು ಕಡಿಮೆ ಮಾಡುವಲ್ಲಿ ಜಾಗತಿಕ ಪ್ರಗತಿಯು ಕುಂಠಿತವಾಗಿದೆ ಎಂದು 2024ರ GHI ವರದಿ ಎತ್ತಿ ತೋರಿಸುತ್ತದೆ. 2030 ರ ವೇಳೆಗೆ ಶೂನ್ಯ ಹಸಿವನ್ನು ಸಾಧಿಸುವ ಗುರಿಯು ಅಸಂಭವವಾಗಿದೆ ಎಂದು ವರದಿ ಹೇಳಿದೆ. ಮೌಲ್ಯಮಾಪನ ಮಾಡಿದ 127 ದೇಶಗಳಲ್ಲಿ, 42 ದೇಶಗಳು ಇನ್ನೂ ‘ಆತಂಕಕಾರಿ’ ಅಥವಾ ‘ಗಂಭೀರ’ ಹಸಿವಿನ ಮಟ್ಟವನ್ನು ಅನುಭವಿಸುತ್ತಿವೆ.

ವಿಡಿಯೊನೋಡಿ: DCM ಆಗಿದ್ದವರು, ಸಚಿವರು ನಿಮಗೆ ಪ್ರೋಟೋಕಾಲ್ ಏನೆಂದು ಹೇಳಿಕೊಡಬೇಕೆ – ಅಶ್ವಥ್ ನಾರಾಯಣ್ ವಿರುದ್ಧ ಡಿ.ಕೆ ಸುರೇಶ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...