Homeಮುಖಪುಟಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

- Advertisement -
- Advertisement -

ಜಾಗತಿಕ ಹಸಿವು ಸೂಚ್ಯಂಕ (GHI)ದಲ್ಲಿ ಭಾರತವು ವಿಶ್ವದ 127 ದೇಶಗಳಲ್ಲಿ 105 ನೇ ಸ್ಥಾನದಲ್ಲಿದೆ ಎಂದು 2024ರ 19ನೇ ಹಸಿವು ಸೂಚ್ಯಂತ ವರದಿ ಹೇಳಿದೆ. ಭಾರತವು ‘ಗಂಭೀರ’ ಹಸಿವಿನ ಸಮಸ್ಯೆಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿದ್ದು, ತನ್ನ ನೆರೆಯ ರಾಷ್ಟ್ರಗಳಾದ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಕ್ಕಿಂತ ಹಿಂದುಳಿದಿದೆ ಎಂದು ವರದಿ ಹೇಳಿದೆ. ಭಾರತದಲ್ಲಿ ಗಂಭೀರ ಹಸಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಕನ್ಸರ್ನ್ ವರ್ಲ್ಡ್‌ವೈಡ್’ ಮತ್ತು ‘ವೆಲ್ತ್‌ಹಂಗರ್‌ಹಿಲ್ಫ್’ ಜಂಟಿಯಾಗಿ ಪ್ರಕಟಿಸುತ್ತಿರುವ GHI ವರದಿಯ ಸರಣಿಯು ವಿಶ್ವಾದ್ಯಂತ ಹಸಿವನ್ನು ಟ್ರ್ಯಾಕ್ ಮಾಡುತ್ತದೆ ಮತ್ತು ತುರ್ತು ಕ್ರಮ ಅಗತ್ಯವಿರುವ ಪ್ರದೇಶಗಳ ಮೇಲೆ ಕೇಂದ್ರೀಕರಿಸುತ್ತದೆ.ಅದಾಗ್ಯೂ, ಭಾರತವು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಕ್ಕಿಂತ ಸ್ವಲ್ಪ ಮೇಲಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನವೆಂಬರ್ 1 ರಂದು ಎಲ್ಲಾ ಕಂಪನಿ, ಶಿಕ್ಷಣ ಕೇಂದ್ರಗಳಲ್ಲಿ ಕರ್ನಾಟಕ ಧ್ವಜಾರೋಹಣ ಕಡ್ಡಾಯ: ಡಿಕೆ ಶಿವಕುಮಾರ್

2024 ರ ವರದಿಯಲ್ಲಿ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಕೋರ್ 27.3 ಇದ್ದು, ಇದು ಹಸಿವಿನ ಗಂಭೀರ ಮಟ್ಟವನ್ನು ಪ್ರತಿಬಿಂಬಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಅಪೌಷ್ಟಿಕತೆಯ ಹರಡುವಿಕೆ ಸ್ವಲ್ಪ ಹೆಚ್ಚಳವಾಗಿದೆ ಎಂದು ವರದಿಯು ಹೇಳಿದೆ.

ಭಾರತದ 2016ರ GHI ಸ್ಕೋರ್‌ 29.3ಕ್ಕೆ ಹೋಲಿಸಿದರೆ 2024 ಸ್ಕೋರ್‌ ಸ್ವಲ್ಪ ಸುಧಾರಣೆಯಾಗಿದೆ. ಅದಾಗ್ಯೂ, ಈ ಸ್ಕೋರ್‌ ‘ಗಂಭೀರ ಹಸಿವು’ ವರ್ಗದ ಅಡಿಯಲ್ಲಿ ಬರುತ್ತದೆ. 2000 ಮತ್ತು 2008 ರಲ್ಲಿ ಕ್ರಮವಾಗಿ 38.4 ಮತ್ತು 35.2 ಅಂಕಗಳಿಗೆ ಹೋಲಿಸಿದರೆ ಗಣನೀಯ ಪ್ರಗತಿಯಾಗಿದೆ. ಈ ಎರಡೂ ಸ್ಕೋರ್‌ ಅನ್ನು ‘ಆತಂಕಕಾರಿ’ ಎಂದು ವರ್ಗೀಕರಿಸಲಾಗಿದೆ.

ಇದನ್ನೂಓದಿ: FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ಭಾರತವು ಮಕ್ಕಳ ಅಪೌಷ್ಟಿಕತೆಯಲ್ಲಿ ತೀವ್ರ ಸವಾಲುಗಳನ್ನು ಎದುರಿಸುತ್ತಲೇ ಇದೆ. ಜಾಗತಿಕವಾಗಿ ಅತಿ ಹೆಚ್ಚು ಮಕ್ಕಳ ಅಪೌಷ್ಠಿಕತೆ ಪ್ರಮಾಣ 18.7% ಇದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 35.5%ರಷ್ಟಿದ್ದು, ಐದು ವರ್ಷದೊಳಗಿನ ಮರಣ ಪ್ರಮಾಣವು 2.9% ಮತ್ತು ಅಪೌಷ್ಟಿಕತೆಯ ಪ್ರಮಾಣವು 13.7% ಇದೆ.

2000 ರಿಂದ ಭಾರತವು ತನ್ನ ಮಕ್ಕಳ ಮರಣ ಪ್ರಮಾಣವನ್ನು ಗಣನೀಯವಾಗಿ ಸುಧಾರಿಸಿದೆಯಾದರೂ, ಮಕ್ಕಳ ಅಪೌಷ್ಟಿಕತೆಯು ದೊಡ್ಡ ಸಮಸ್ಯೆಯಾಗಿ ಉಳಿದಿದೆ. ಬೆಳವಣಿಗೆ ಕುಂಠಿತ ದರಗಳು ಇನ್ನೂ ಆತಂಕಕಾರಿಯಾಗಿ ಹೆಚ್ಚಿವೆ. ಭಾರತದಲ್ಲಿ ಗಂಭೀರ ಹಸಿವು

2016 ರಿಂದ ಹಸಿವನ್ನು ಕಡಿಮೆ ಮಾಡುವಲ್ಲಿ ಜಾಗತಿಕ ಪ್ರಗತಿಯು ಕುಂಠಿತವಾಗಿದೆ ಎಂದು 2024ರ GHI ವರದಿ ಎತ್ತಿ ತೋರಿಸುತ್ತದೆ. 2030 ರ ವೇಳೆಗೆ ಶೂನ್ಯ ಹಸಿವನ್ನು ಸಾಧಿಸುವ ಗುರಿಯು ಅಸಂಭವವಾಗಿದೆ ಎಂದು ವರದಿ ಹೇಳಿದೆ. ಮೌಲ್ಯಮಾಪನ ಮಾಡಿದ 127 ದೇಶಗಳಲ್ಲಿ, 42 ದೇಶಗಳು ಇನ್ನೂ ‘ಆತಂಕಕಾರಿ’ ಅಥವಾ ‘ಗಂಭೀರ’ ಹಸಿವಿನ ಮಟ್ಟವನ್ನು ಅನುಭವಿಸುತ್ತಿವೆ.

ವಿಡಿಯೊನೋಡಿ: DCM ಆಗಿದ್ದವರು, ಸಚಿವರು ನಿಮಗೆ ಪ್ರೋಟೋಕಾಲ್ ಏನೆಂದು ಹೇಳಿಕೊಡಬೇಕೆ – ಅಶ್ವಥ್ ನಾರಾಯಣ್ ವಿರುದ್ಧ ಡಿ.ಕೆ ಸುರೇಶ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....