Homeಮುಖಪುಟಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

- Advertisement -
- Advertisement -

ಜಾಗತಿಕ ಹಸಿವು ಸೂಚ್ಯಂಕ (GHI)ದಲ್ಲಿ ಭಾರತವು ವಿಶ್ವದ 127 ದೇಶಗಳಲ್ಲಿ 105 ನೇ ಸ್ಥಾನದಲ್ಲಿದೆ ಎಂದು 2024ರ 19ನೇ ಹಸಿವು ಸೂಚ್ಯಂತ ವರದಿ ಹೇಳಿದೆ. ಭಾರತವು ‘ಗಂಭೀರ’ ಹಸಿವಿನ ಸಮಸ್ಯೆಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿದ್ದು, ತನ್ನ ನೆರೆಯ ರಾಷ್ಟ್ರಗಳಾದ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಕ್ಕಿಂತ ಹಿಂದುಳಿದಿದೆ ಎಂದು ವರದಿ ಹೇಳಿದೆ. ಭಾರತದಲ್ಲಿ ಗಂಭೀರ ಹಸಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಕನ್ಸರ್ನ್ ವರ್ಲ್ಡ್‌ವೈಡ್’ ಮತ್ತು ‘ವೆಲ್ತ್‌ಹಂಗರ್‌ಹಿಲ್ಫ್’ ಜಂಟಿಯಾಗಿ ಪ್ರಕಟಿಸುತ್ತಿರುವ GHI ವರದಿಯ ಸರಣಿಯು ವಿಶ್ವಾದ್ಯಂತ ಹಸಿವನ್ನು ಟ್ರ್ಯಾಕ್ ಮಾಡುತ್ತದೆ ಮತ್ತು ತುರ್ತು ಕ್ರಮ ಅಗತ್ಯವಿರುವ ಪ್ರದೇಶಗಳ ಮೇಲೆ ಕೇಂದ್ರೀಕರಿಸುತ್ತದೆ.ಅದಾಗ್ಯೂ, ಭಾರತವು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಕ್ಕಿಂತ ಸ್ವಲ್ಪ ಮೇಲಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನವೆಂಬರ್ 1 ರಂದು ಎಲ್ಲಾ ಕಂಪನಿ, ಶಿಕ್ಷಣ ಕೇಂದ್ರಗಳಲ್ಲಿ ಕರ್ನಾಟಕ ಧ್ವಜಾರೋಹಣ ಕಡ್ಡಾಯ: ಡಿಕೆ ಶಿವಕುಮಾರ್

2024 ರ ವರದಿಯಲ್ಲಿ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಕೋರ್ 27.3 ಇದ್ದು, ಇದು ಹಸಿವಿನ ಗಂಭೀರ ಮಟ್ಟವನ್ನು ಪ್ರತಿಬಿಂಬಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಅಪೌಷ್ಟಿಕತೆಯ ಹರಡುವಿಕೆ ಸ್ವಲ್ಪ ಹೆಚ್ಚಳವಾಗಿದೆ ಎಂದು ವರದಿಯು ಹೇಳಿದೆ.

ಭಾರತದ 2016ರ GHI ಸ್ಕೋರ್‌ 29.3ಕ್ಕೆ ಹೋಲಿಸಿದರೆ 2024 ಸ್ಕೋರ್‌ ಸ್ವಲ್ಪ ಸುಧಾರಣೆಯಾಗಿದೆ. ಅದಾಗ್ಯೂ, ಈ ಸ್ಕೋರ್‌ ‘ಗಂಭೀರ ಹಸಿವು’ ವರ್ಗದ ಅಡಿಯಲ್ಲಿ ಬರುತ್ತದೆ. 2000 ಮತ್ತು 2008 ರಲ್ಲಿ ಕ್ರಮವಾಗಿ 38.4 ಮತ್ತು 35.2 ಅಂಕಗಳಿಗೆ ಹೋಲಿಸಿದರೆ ಗಣನೀಯ ಪ್ರಗತಿಯಾಗಿದೆ. ಈ ಎರಡೂ ಸ್ಕೋರ್‌ ಅನ್ನು ‘ಆತಂಕಕಾರಿ’ ಎಂದು ವರ್ಗೀಕರಿಸಲಾಗಿದೆ.

ಇದನ್ನೂಓದಿ: FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ಭಾರತವು ಮಕ್ಕಳ ಅಪೌಷ್ಟಿಕತೆಯಲ್ಲಿ ತೀವ್ರ ಸವಾಲುಗಳನ್ನು ಎದುರಿಸುತ್ತಲೇ ಇದೆ. ಜಾಗತಿಕವಾಗಿ ಅತಿ ಹೆಚ್ಚು ಮಕ್ಕಳ ಅಪೌಷ್ಠಿಕತೆ ಪ್ರಮಾಣ 18.7% ಇದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 35.5%ರಷ್ಟಿದ್ದು, ಐದು ವರ್ಷದೊಳಗಿನ ಮರಣ ಪ್ರಮಾಣವು 2.9% ಮತ್ತು ಅಪೌಷ್ಟಿಕತೆಯ ಪ್ರಮಾಣವು 13.7% ಇದೆ.

2000 ರಿಂದ ಭಾರತವು ತನ್ನ ಮಕ್ಕಳ ಮರಣ ಪ್ರಮಾಣವನ್ನು ಗಣನೀಯವಾಗಿ ಸುಧಾರಿಸಿದೆಯಾದರೂ, ಮಕ್ಕಳ ಅಪೌಷ್ಟಿಕತೆಯು ದೊಡ್ಡ ಸಮಸ್ಯೆಯಾಗಿ ಉಳಿದಿದೆ. ಬೆಳವಣಿಗೆ ಕುಂಠಿತ ದರಗಳು ಇನ್ನೂ ಆತಂಕಕಾರಿಯಾಗಿ ಹೆಚ್ಚಿವೆ. ಭಾರತದಲ್ಲಿ ಗಂಭೀರ ಹಸಿವು

2016 ರಿಂದ ಹಸಿವನ್ನು ಕಡಿಮೆ ಮಾಡುವಲ್ಲಿ ಜಾಗತಿಕ ಪ್ರಗತಿಯು ಕುಂಠಿತವಾಗಿದೆ ಎಂದು 2024ರ GHI ವರದಿ ಎತ್ತಿ ತೋರಿಸುತ್ತದೆ. 2030 ರ ವೇಳೆಗೆ ಶೂನ್ಯ ಹಸಿವನ್ನು ಸಾಧಿಸುವ ಗುರಿಯು ಅಸಂಭವವಾಗಿದೆ ಎಂದು ವರದಿ ಹೇಳಿದೆ. ಮೌಲ್ಯಮಾಪನ ಮಾಡಿದ 127 ದೇಶಗಳಲ್ಲಿ, 42 ದೇಶಗಳು ಇನ್ನೂ ‘ಆತಂಕಕಾರಿ’ ಅಥವಾ ‘ಗಂಭೀರ’ ಹಸಿವಿನ ಮಟ್ಟವನ್ನು ಅನುಭವಿಸುತ್ತಿವೆ.

ವಿಡಿಯೊನೋಡಿ: DCM ಆಗಿದ್ದವರು, ಸಚಿವರು ನಿಮಗೆ ಪ್ರೋಟೋಕಾಲ್ ಏನೆಂದು ಹೇಳಿಕೊಡಬೇಕೆ – ಅಶ್ವಥ್ ನಾರಾಯಣ್ ವಿರುದ್ಧ ಡಿ.ಕೆ ಸುರೇಶ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...