Homeಮುಖಪುಟಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

- Advertisement -
- Advertisement -

ಜಾಗತಿಕ ಹಸಿವು ಸೂಚ್ಯಂಕ (GHI)ದಲ್ಲಿ ಭಾರತವು ವಿಶ್ವದ 127 ದೇಶಗಳಲ್ಲಿ 105 ನೇ ಸ್ಥಾನದಲ್ಲಿದೆ ಎಂದು 2024ರ 19ನೇ ಹಸಿವು ಸೂಚ್ಯಂತ ವರದಿ ಹೇಳಿದೆ. ಭಾರತವು ‘ಗಂಭೀರ’ ಹಸಿವಿನ ಸಮಸ್ಯೆಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿದ್ದು, ತನ್ನ ನೆರೆಯ ರಾಷ್ಟ್ರಗಳಾದ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಕ್ಕಿಂತ ಹಿಂದುಳಿದಿದೆ ಎಂದು ವರದಿ ಹೇಳಿದೆ. ಭಾರತದಲ್ಲಿ ಗಂಭೀರ ಹಸಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಕನ್ಸರ್ನ್ ವರ್ಲ್ಡ್‌ವೈಡ್’ ಮತ್ತು ‘ವೆಲ್ತ್‌ಹಂಗರ್‌ಹಿಲ್ಫ್’ ಜಂಟಿಯಾಗಿ ಪ್ರಕಟಿಸುತ್ತಿರುವ GHI ವರದಿಯ ಸರಣಿಯು ವಿಶ್ವಾದ್ಯಂತ ಹಸಿವನ್ನು ಟ್ರ್ಯಾಕ್ ಮಾಡುತ್ತದೆ ಮತ್ತು ತುರ್ತು ಕ್ರಮ ಅಗತ್ಯವಿರುವ ಪ್ರದೇಶಗಳ ಮೇಲೆ ಕೇಂದ್ರೀಕರಿಸುತ್ತದೆ.ಅದಾಗ್ಯೂ, ಭಾರತವು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಕ್ಕಿಂತ ಸ್ವಲ್ಪ ಮೇಲಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನವೆಂಬರ್ 1 ರಂದು ಎಲ್ಲಾ ಕಂಪನಿ, ಶಿಕ್ಷಣ ಕೇಂದ್ರಗಳಲ್ಲಿ ಕರ್ನಾಟಕ ಧ್ವಜಾರೋಹಣ ಕಡ್ಡಾಯ: ಡಿಕೆ ಶಿವಕುಮಾರ್

2024 ರ ವರದಿಯಲ್ಲಿ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಕೋರ್ 27.3 ಇದ್ದು, ಇದು ಹಸಿವಿನ ಗಂಭೀರ ಮಟ್ಟವನ್ನು ಪ್ರತಿಬಿಂಬಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಅಪೌಷ್ಟಿಕತೆಯ ಹರಡುವಿಕೆ ಸ್ವಲ್ಪ ಹೆಚ್ಚಳವಾಗಿದೆ ಎಂದು ವರದಿಯು ಹೇಳಿದೆ.

ಭಾರತದ 2016ರ GHI ಸ್ಕೋರ್‌ 29.3ಕ್ಕೆ ಹೋಲಿಸಿದರೆ 2024 ಸ್ಕೋರ್‌ ಸ್ವಲ್ಪ ಸುಧಾರಣೆಯಾಗಿದೆ. ಅದಾಗ್ಯೂ, ಈ ಸ್ಕೋರ್‌ ‘ಗಂಭೀರ ಹಸಿವು’ ವರ್ಗದ ಅಡಿಯಲ್ಲಿ ಬರುತ್ತದೆ. 2000 ಮತ್ತು 2008 ರಲ್ಲಿ ಕ್ರಮವಾಗಿ 38.4 ಮತ್ತು 35.2 ಅಂಕಗಳಿಗೆ ಹೋಲಿಸಿದರೆ ಗಣನೀಯ ಪ್ರಗತಿಯಾಗಿದೆ. ಈ ಎರಡೂ ಸ್ಕೋರ್‌ ಅನ್ನು ‘ಆತಂಕಕಾರಿ’ ಎಂದು ವರ್ಗೀಕರಿಸಲಾಗಿದೆ.

ಇದನ್ನೂಓದಿ: FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ಭಾರತವು ಮಕ್ಕಳ ಅಪೌಷ್ಟಿಕತೆಯಲ್ಲಿ ತೀವ್ರ ಸವಾಲುಗಳನ್ನು ಎದುರಿಸುತ್ತಲೇ ಇದೆ. ಜಾಗತಿಕವಾಗಿ ಅತಿ ಹೆಚ್ಚು ಮಕ್ಕಳ ಅಪೌಷ್ಠಿಕತೆ ಪ್ರಮಾಣ 18.7% ಇದೆ. ದೇಶದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ 35.5%ರಷ್ಟಿದ್ದು, ಐದು ವರ್ಷದೊಳಗಿನ ಮರಣ ಪ್ರಮಾಣವು 2.9% ಮತ್ತು ಅಪೌಷ್ಟಿಕತೆಯ ಪ್ರಮಾಣವು 13.7% ಇದೆ.

2000 ರಿಂದ ಭಾರತವು ತನ್ನ ಮಕ್ಕಳ ಮರಣ ಪ್ರಮಾಣವನ್ನು ಗಣನೀಯವಾಗಿ ಸುಧಾರಿಸಿದೆಯಾದರೂ, ಮಕ್ಕಳ ಅಪೌಷ್ಟಿಕತೆಯು ದೊಡ್ಡ ಸಮಸ್ಯೆಯಾಗಿ ಉಳಿದಿದೆ. ಬೆಳವಣಿಗೆ ಕುಂಠಿತ ದರಗಳು ಇನ್ನೂ ಆತಂಕಕಾರಿಯಾಗಿ ಹೆಚ್ಚಿವೆ. ಭಾರತದಲ್ಲಿ ಗಂಭೀರ ಹಸಿವು

2016 ರಿಂದ ಹಸಿವನ್ನು ಕಡಿಮೆ ಮಾಡುವಲ್ಲಿ ಜಾಗತಿಕ ಪ್ರಗತಿಯು ಕುಂಠಿತವಾಗಿದೆ ಎಂದು 2024ರ GHI ವರದಿ ಎತ್ತಿ ತೋರಿಸುತ್ತದೆ. 2030 ರ ವೇಳೆಗೆ ಶೂನ್ಯ ಹಸಿವನ್ನು ಸಾಧಿಸುವ ಗುರಿಯು ಅಸಂಭವವಾಗಿದೆ ಎಂದು ವರದಿ ಹೇಳಿದೆ. ಮೌಲ್ಯಮಾಪನ ಮಾಡಿದ 127 ದೇಶಗಳಲ್ಲಿ, 42 ದೇಶಗಳು ಇನ್ನೂ ‘ಆತಂಕಕಾರಿ’ ಅಥವಾ ‘ಗಂಭೀರ’ ಹಸಿವಿನ ಮಟ್ಟವನ್ನು ಅನುಭವಿಸುತ್ತಿವೆ.

ವಿಡಿಯೊನೋಡಿ: DCM ಆಗಿದ್ದವರು, ಸಚಿವರು ನಿಮಗೆ ಪ್ರೋಟೋಕಾಲ್ ಏನೆಂದು ಹೇಳಿಕೊಡಬೇಕೆ – ಅಶ್ವಥ್ ನಾರಾಯಣ್ ವಿರುದ್ಧ ಡಿ.ಕೆ ಸುರೇಶ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...