Homeಮುಖಪುಟಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: BRS ನಾಯಕಿಗೆ ಸೀತಾರಾಮ್ ಯೆಚೂರಿ ಬೆಂಬಲ

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: BRS ನಾಯಕಿಗೆ ಸೀತಾರಾಮ್ ಯೆಚೂರಿ ಬೆಂಬಲ

- Advertisement -
- Advertisement -

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವಂತೆ ಕೋರಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ. ಕವಿತಾ ನೇತೃತ್ವದಲ್ಲಿ ಮಾರ್ಚ್ 10, 2023ರಂದು ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಈ ಸಂದರ್ಭದಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಕೂಡ ಭಾಗಿಯಾಗಿದ್ದರು.

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ. ಕವಿತಾ ಅವರು, ಅಬಕಾರಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗುವ ಒಂದು ದಿನ ಮುಂಚಿತವಾಗಿ ಮಾರ್ಚ್ 10ರಂದು ಉಪಹಾಸ ಸತ್ಯಾಗ್ರಹ ನಡೆಸಿದರು. ಮಾರ್ಚ್ 13ರಿಂದ ಪ್ರಾರಂಭವಾಗುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವಂತೆ ಆಗ್ರಹಿಸಿದರು.

ನವದೆಹಲಿಯ ಜಂತರ್ ಮಂತರ್‌ನಲ್ಲಿ ಆರು ಗಂಟೆಗಳ ಧರಣಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಪಿಐ-ಎಂ ನಾಯಕ ಸೀತಾರಾಮ್ ಯೆಚೂರಿ, ಈ ಸಂಸತ್ತಿನ ಅಧಿವೇಶನದಲ್ಲಿ ಮೋದಿ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಿದರು.

ಮುಷ್ಕರದಲ್ಲಿ ಶ್ಯಾಮ್ ರಜಾಕ್ (ಆರ್‌ಜೆಡಿ), ಸೀಮಾ ಶುಕ್ಲಾ (ಎಸ್‌ಪಿ), ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಮತ್ತು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸತ್ಯವತಿ ರಾಥೋಡ್ ಮತ್ತು ಆಂಧ್ರಪ್ರದೇಶದ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಮಹೇಶ್ ಜೋಶಿ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ

ಸಂಜಯ್ ಸಿಂಗ್ ಮತ್ತು ಚಿತ್ರ ಸರ್ವರಾ (ಎಎಪಿ), ನರೇಶ್ ಗುಜ್ರಾಲ್ (ಅಕಾಲಿದಳ), ಅಂಜುಮ್ ಜಾವೇದ್ ಮಿರ್ಜಾ (ಪಿಡಿಪಿ), ಶಮಿ ಫಿರ್ದೌಸ್ (ಎನ್‌ಸಿ), ಸುಶ್ಮಿತಾ ದೇವ್ (ಟಿಎಂಸಿ), ಕೆಸಿ ತ್ಯಾಗಿ (ಜೆಡಿಯು), ಸೀಮಾ ಮಲಿಕ್ (ಎನ್‌ಸಿಪಿ), ನಾರಾಯಣ ಕೆ ( ಸಿಪಿಐ, ಶ್ಯಾಮ್ ರಜಾಕ್ (ಆರ್‌ಎಲ್‌ಡಿ), ಪ್ರಿಯಾಂಕಾ ಚತುರ್ವೇದಿ (ಶಿವಸೇನೆ) ಮತ್ತು ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಮುಷ್ಕರದ ಕೊನೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.

”ರಾಜಕೀಯದಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ನೀಡಲು ಈ ಮಸೂದೆಯನ್ನು ಜಾರಿಗೆ ತರುವುದು ಮುಖ್ಯವಾಗಿದೆ. ಸಂಸತ್ತಿನಲ್ಲಿ ಈ ಮಸೂದೆ ಅಂಗೀಕಾರವಾಗುವವರೆಗೆ ನಮ್ಮ ಪಕ್ಷವು ಈ ಪ್ರತಿಭಟನೆಯಲ್ಲಿ ಕವಿತಾ ಅವರಿಗೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ಉದ್ಘಾಟನಾ ಭಾಷಣದಲ್ಲಿ ಯೆಚೂರಿ ಹೇಳಿದರು.

”2014ರಲ್ಲಿ ಮೋದಿ ಅವರು ಮೊದಲ ಬಾರಿಗೆ ಸಂಸತ್ತಿಗೆ ಪ್ರವೇಶಿಸಿದಾಗ ಮಹಿಳಾ ಮೀಸಲಾತಿ ಮಸೂದೆ ತಮ್ಮ ಸರ್ಕಾರದ ಆದ್ಯತೆ ಎಂದು ಹೇಳಿದ್ದರು. ಈಗ ಅವರು ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳು ಕಳೆದಿವೆ, ಆದರೂ ಈ ಮಸೂದೆಯನ್ನು ಸಂಸತ್ತಿನಲ್ಲಿ ಮತ್ತೆ ಮಂಡಿಸಲಾಗಿಲ್ಲ” ಎಂದು ಅವರು ಹೇಳಿದರು.

ಸಾಕಷ್ಟು ಹೋರಾಟಗಳು ನಡೆದ ಬಳಿಕ ಸರ್ಕಾರವು ಪಂಚಾಯತ್‌ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿತು. ”ನೀವು ಪಂಚಾಯತ್‌ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬಹುದಾದರೆ, ಸಂಸತ್ತಿನಲ್ಲಿ ಏಕೆ ನೀಡಬಾರದು?” ಎಂದು ಯೆಚೂರಿ ಪ್ರಶ್ನಿಸಿದರು. ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಮಾನ ಅವಕಾಶ ನೀಡದ ಹೊರತು ದೇಶವು ಪ್ರಗತಿಯಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದರು.

ಪ್ರಸ್ತುತ ಸಂಸತ್ತಿನ ಅಧಿವೇಶನದಲ್ಲಿ ಈ ಮಸೂದೆಯನ್ನು ತರುವುದು ಮುಖ್ಯವಾಗಿದೆ ಮತ್ತು ಈ ಪ್ರತಿಭಟನೆಯಲ್ಲಿ ಸಿಪಿಐ-ಎಂ ಬಿಆರ್‌ಎಸ್ ಪಕ್ಷದ ಜೊತೆಗೆ ನಿಲ್ಲುತ್ತದೆ ಎಂದು ಯಚೂರಿ ಅವರು ಹೇಳಿದರು.

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಮಾರ್ಚ್ 13ರಂದು ಪ್ರಾರಂಭವಾಗಿ ಏಪ್ರಿಲ್ 6ರಂದು ಕೊನೆಗೊಳ್ಳಲಿದೆ.

”ಭಾರತ ಅಭಿವೃದ್ಧಿ ಹೊಂದಬೇಕಾದರೆ ರಾಜಕೀಯದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಬೇಕು, ರಾಜಕೀಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು. ಹಾಗಾಗಿ 27 ವರ್ಷಗಳಿಂದ ಬಾಕಿ ಇರುವ ಈ ಮಸೂದೆಯನ್ನು ಜಾರಿಗೆ ತರುವುದು ಮುಖ್ಯವಾಗಿದೆ” ಎಂದು ಕವಿತಾ ಹೇಳಿದರು.

“ಸುಸ್ಮಾ ಸ್ವರಾಜ್, ಸೋನಿಯಾ ಗಾಂಧಿ ಮತ್ತು ಬೃಂದಾ ಕಾರಟ್ ಅವರಂತಹ ನಾಯಕರು ಮಸೂದೆ ಜಾರಿಗಾಗಿ ಹೋರಾಟಗಳನ್ನು ನಡೆಸಿದರು. 1996ರಿಂದ ಅನೇಕ ರಾಜಕೀಯ ಪಕ್ಷಗಳು ಈ ಮಸೂದೆಯನ್ನು ತರಲು ಪ್ರಯತ್ನಿಸಿದವು, ಆದರೆ ಅದನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಲಿಲ್ಲ” ಎಂದು ಅವರು ಹೇಳಿದರು.

“ಈ ಆಂದೋಲನವನ್ನು ಮುಂದಕ್ಕೆ ಕೊಂಡೊಯ್ಯಲು ನನಗೆ ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವೆನಿಸುತ್ತದೆ. ಮಸೂದೆಯನ್ನು ಮಂಡಿಸಿ ಅಂಗೀಕರಿಸುವವರೆಗೆ ನಾವು ಈ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ನಾನು ಭಾರತದ ಮಹಿಳೆಯರಿಗೆ ಭರವಸೆ ನೀಡುತ್ತೇನೆ” ಎಂದರು.

”ಇಂದು ಇಲ್ಲಿ ಕೇವಲ ಉಪವಾಸ ಸತ್ಯಾಗ್ರಹ ಕೇವಲ ಪ್ರಾರಂಭವಾಗಿದೆ, ಇದು ದೇಶಾದ್ಯಂತ ಈ ವಿಚಾರವಾಗಿ ಪ್ರತಿಭಟನೆಗಳು ಮುಂದುವರಿಯುತ್ತದೆ. ಕೇಂದ್ರದಲ್ಲಿ ಪೂರ್ಣ ಬಹುಮತದ ಸರ್ಕಾರವಿರುವುದರಿಂದ ಮಸೂದೆ ಅಂಗಿಕಾರಕ್ಕೆ ಸುಲಭವಾಗಲಿದೆ. ಬಿಜೆಪಿ ಸರ್ಕಾರವು ಈ ಮಸೂದೆಯನ್ನು ಅಂಗೀಕರಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಾವು ಎಲ್ಲಾ ರಾಜಕೀಯ ಪಕ್ಷಗಳನ್ನು ಒಟ್ಟಿಗೆ ಸೇರಿಸುತ್ತೇವೆ ಮತ್ತು ಸಂಸತ್ತಿನಲ್ಲಿ ನಿಮ್ಮನ್ನು ಬೆಂಬಲಿಸಲು ಪ್ರಯತ್ನಿಸುತ್ತೇವೆ” ಎಂದು ಕವಿತಾ ಹೇಳಿದರು.

ಆರ್‌ಜೆಡಿ ನಾಯಕ ಶ್ಯಾಮ್ ರಜಾಕ್ ಮಾತನಾಡಿ, ”ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯವಿಲ್ಲದೆ ಭಾರತೀಯ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಾಧ್ಯವಿಲ್ಲ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಶೇ.33ಕ್ಕಿಂತ ಹೆಚ್ಚಿರಬೇಕು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...