Homeಚಳವಳಿಉಪವಾಸ ಸತ್ಯಾಗ್ರಹಕ್ಕೆ ಮುಂದಾದ ರೈತ ಮುಖಂಡನನ್ನು ಬಲವಂತವಾಗಿ ಕರೆದೊಯ್ದ ಪೊಲೀಸರು: ರೈತ ಸಂಘ ಆರೋಪ

ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ರೈತ ಮುಖಂಡನನ್ನು ಬಲವಂತವಾಗಿ ಕರೆದೊಯ್ದ ಪೊಲೀಸರು: ರೈತ ಸಂಘ ಆರೋಪ

- Advertisement -
- Advertisement -

ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಖಾನೌರಿ ಗಡಿ ಪ್ರದೇಶದಿಂದ ಪೊಲೀಸರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಕಿಸಾನ್ ಮಜ್ದೂರ್ ಮೋರ್ಚಾದ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಮಂಗಳವಾರ ಆರೋಪಿಸಿದ್ದಾರೆ. ಉಪವಾಸ ಸತ್ಯಾಗ್ರಹಕ್ಕೆ

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ನೀಡುವ ಕಾನೂನು ಖಾತರಿಗೆ ಒತ್ತಾಯಿಸಿ ಮಂಗಳವಾರದಿಂದ ಆಮರಣಾಂತ ಉಪವಾಸ ಆರಂಭಿಸುವುದಾಗಿ ದಲ್ಲೆವಾಲ್ ಸೋಮವಾರ ಘೋಷಿಸಿದ್ದಾರೆ. ರೈತರ ಬೇಡಿಕೆಗಳನ್ನು ಈಡೇರಿಸಲು ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಅವರು ಪ್ರತಿಪಾದಿಸಿದ್ದರು. ಉಪವಾಸ ಸತ್ಯಾಗ್ರಹಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ಮುಂಜಾನೆ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುವ ಮೊದಲು ಪೊಲೀಸರು ಬಲವಂತವಾಗಿ ಅವರನ್ನು ಸ್ಥಳದಿಂದ ಕರೆದುಕೊಂಡು ಹೋಗಿದ್ದಾರೆ ಎಂದು ಪ್ರತಿಪಾದಿಸಿದ ಪಂಧೇರ್ ಅವರು ಈ ಕೃತ್ಯವನ್ನು ಬಲವಾಗಿ ಖಂಡಿಸುವುದಾಗಿ ಹೇಳಿದ್ದಾರೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಾವರು ಒತ್ತಾಯಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಆಮರಣಾಂತ ಉಪವಾಸ ಆರಂಭಿಸುವ ಮೂಲಕ ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಬೆಂಬಲಿಸಿ ತಮ್ಮ ಆಂದೋಲನವನ್ನು ತೀವ್ರಗೊಳಿಸುವ ಯೋಜನೆಯನ್ನು ಈ ಹಿಂದೆ ಘೋಷಿಸಿದ್ದವು.

ಫೆಬ್ರವರಿ 13 ರಿಂದ ದೆಹಲಿಗೆ ಮೆರವಣಿಗೆ ಮಾಡುವ ರೈತರನ್ನು ಭದ್ರತಾ ಪಡೆಗಳು ತಡೆದ ನಂತರ, ಅವರು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಕೇಂದ್ರಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಫೆಬ್ರವರಿ 18 ರಿಂದ ತಮ್ಮ ಸಮಸ್ಯೆಗಳ ಬಗ್ಗೆ ಕೇಂದ್ರವು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಪ್ರತಿಭಟನಾನಿರತ ರೈತರು ತಮ್ಮ ಬೇಡಿಕೆಗಳನ್ನು ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಎಂಎಸ್‌ಪಿಗೆ ಕಾನೂನು ಖಾತರಿಯ ಜೊತೆಗೆ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ, ಭೂಸ್ವಾಧೀನ ಕಾಯ್ದೆ 2013 ರ ಮರುಸ್ಥಾಪನೆ ಮತ್ತು 2020-21ರಲ್ಲಿ ಆಂದೋಲನದ ಅವಧಿಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರವನ್ನು ನೀಡುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...