Homeಮುಖಪುಟಮೂರನೇ ದಿನಕ್ಕೆ ಕಾಲಿಟ್ಟ ಖಲಿಸ್ತಾನಿ ನಾಯಕನ ಬೇಟೆ ಕಾರ್ಯಾಚರಣೆ: ಮಾ.21ರ ಮಧ್ಯಾಹ್ನದವರೆಗೂ ಇಂಟರ್ನೆಟ್ ಬಂದ್

ಮೂರನೇ ದಿನಕ್ಕೆ ಕಾಲಿಟ್ಟ ಖಲಿಸ್ತಾನಿ ನಾಯಕನ ಬೇಟೆ ಕಾರ್ಯಾಚರಣೆ: ಮಾ.21ರ ಮಧ್ಯಾಹ್ನದವರೆಗೂ ಇಂಟರ್ನೆಟ್ ಬಂದ್

- Advertisement -
- Advertisement -

ಪಂಜಾಬ್ ಸರ್ಕಾರವು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳ ನಿಷೇಧವನ್ನು ಮಂಗಳವಾರ ಮಧ್ಯಾಹ್ನದವರೆಗೆ ವಿಸ್ತರಿಸಿದೆ. ಖಲಿಸ್ತಾನಿ ನಾಯಕ ಮತ್ತು ವಾರಿಸ್ ಪಂಜಾಬ್ ಡಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರ ಚಿಕ್ಕಪ್ಪ ಮತ್ತು ಚಾಲಕ ಜಲಂಧರ್ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಲಿಸ್ತಾನಿ ನಾಯಕನ ಬೇಟೆ ಕಾರ್ಯಾಚರಣೆಯು ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯ ಪೊಲೀಸರು ಅಮೃತಪಾಲ್ ಸಿಂಗ್‌ನನ್ನು ಶೀಘ್ರವಾಗಿ ಬಂಧಿಸಲು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

ಅಮೃತಪಾಲ್ ಅವರ ಚಿಕ್ಕಪ್ಪ ಹರ್ಜಿತ್ ಸಿಂಗ್ ಮತ್ತು ಚಾಲಕ ಹರ್‌ಪ್ರೀತ್ ಸಿಂಗ್ ಅವರು ಭಾನುವಾರ ತಡರಾತ್ರಿ ಜಲಂಧರ್‌ನ ಮೆಹತ್‌ಪುರ ಪ್ರದೇಶದ ಗುರುದ್ವಾರದ ಬಳಿ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಅಮೃತಪಾಲ್‌ಗಾಗಿ ಹುಡುಕಾಟ ಇನ್ನೂ ಮುಂದುವರೆದಿದೆ” ಎಂದು ಜಲಂಧರ್ ಎಸ್‌ಎಸ್‌ಪಿ (ಗ್ರಾಮೀಣ) ಸ್ವರನ್‌ದೀಪ್ ಸಿಂಗ್ ಹೇಳಿದ್ದಾರೆ.

ಪಂಜಾಬ್ ಸರ್ಕಾರವು ಮೊಬೈಲ್ ಇಂಟರ್ನೆಟ್ ಮತ್ತು SMS ಸೇವೆಗಳ ಅಮಾನತುವನ್ನು ಮಂಗಳವಾರ ಮಧ್ಯಾಹ್ನದವರೆಗೆ ವಿಸ್ತರಿಸಿದೆ.

ಇದನ್ನೂ ಓದಿ: ಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

”ಎಲ್ಲಾ ಮೊಬೈಲ್ ಇಂಟರ್ನೆಟ್ ಸೇವೆಗಳು (2G/3G/45/5G/CDMA/GPRS), ಎಲ್ಲಾ SMS ಸೇವೆಗಳು (ಬ್ಯಾಂಕಿಂಗ್ ಮತ್ತು ಮೊಬೈಲ್ ರೀಚಾರ್ಜ್ ಹೊರತುಪಡಿಸಿ) ಮತ್ತು ಮೊಬೈಲ್ ನೆಟ್‌ವರ್ಕ್‌ಗಳಲ್ಲಿ ಒದಗಿಸಲಾದ ಎಲ್ಲಾ ಡಾಂಗಲ್ ಸೇವೆಗಳು, ಧ್ವನಿ ಕರೆಗಳನ್ನು ಹೊರತುಪಡಿಸಿ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಾಧನಗಳನ್ನು ತಡೆಗಟ್ಟಲು ಮತ್ತು ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗವನ್ನು ತಡೆಗಟ್ಟಲು ಪಂಜಾಬ್‌ನ ಪ್ರಾದೇಶಿಕ ಇಂಟರ್ನೆಟ್ ಸೇವೆಗಳನ್ನು ಮಾರ್ಚ್ 20 (12.00 ಗಂಟೆಗಳು) ರಿಂದ ಮಾರ್ಚ್ 21 (12.00 ಗಂಟೆಗಳು) ವರೆಗೆ ನಿಷೇಧಿಸಲಾಗಿದೆ ಎಂದು ಗೃಹ ವ್ಯವಹಾರಗಳ ಇಲಾಖೆ ಮತ್ತು ನ್ಯಾಯಾಂಗದ ಆದೇಶವನ್ನು ಸೋಮವಾರ ಹೊರಡಿಸಲಾಗಿದೆ.

ಬ್ಯಾಂಕಿಂಗ್ ಸೌಲಭ್ಯಗಳು, ಆಸ್ಪತ್ರೆ ಸೇವೆಗಳು ಮತ್ತು ಇತರ ಅಗತ್ಯ ಸೇವೆಗಳಿಗೆ ಅಡ್ಡಿಯಾಗದಂತೆ ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿಲ್ಲ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆದೇಶದಲ್ಲಿ ತೀಳಿಸಿದ್ದಾರೆ.

ರಾಜ್ಯ ಅಧಿಕಾರಿಗಳು ಶನಿವಾರದಂದು ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಭಾನುವಾರ ಮಧ್ಯಾಹ್ನದವರೆಗೆ ಸ್ಥಗಿತಗೊಳಿಸಿದ್ದರು. ನಂತರ ಸೋಮವಾರ ಮಧ್ಯಾಹ್ನದವರೆಗೆ ನಿರ್ಬಂಧಗಳನ್ನು ವಿಸ್ತರಿಸಲಾಯಿತು.

ಏತನ್ಮಧ್ಯೆ, ಅಮೃತಪಾಲ್ ಅವರ ಮರ್ಸಿಡಿಸ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ ಅವರ ಬೆಂಗಾವಲು ಪಡೆಯ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಭಾನುವಾರ ಪೊಲೀಸರು ಪಂಜಾಬ್‌ನಾದ್ಯಂತ ಧ್ವಜ ಮೆರವಣಿಗೆ ಮತ್ತು ಶೋಧ ಕಾರ್ಯವನ್ನು ಮುಂದುವರೆಸಿದರು. ಈ ಮಧ್ಯೆ 34 ಬೆಂಬಲಿಗರನ್ನು ಬಂಧಿಸಿದ್ದಾರೆ ಮತ್ತು ಬಂಧನದಲ್ಲಿದ್ದ ನಾಲ್ವರನ್ನು ದೂರದ ಅಸ್ಸಾಂನ ಜೈಲಿಗೆ ಸ್ಥಳಾಂತರಿಸಿದ್ದಾರೆ.

ಅಮೃತಪಾಲ್ ನೇತೃತ್ವದ ‘ವಾರಿಸ್ ಪಂಜಾಬ್ ದೇ’ ಅಂಶಗಳು ಮತ್ತು ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಕದಡಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ದಮನ ಕಾರ್ಯಾಚರಣೆಗಳ ನಡೆಸುತ್ತಿರುವ ಪೊಲೀಸರು ಇದುವರೆಗೆ 112 ಜನರನ್ನು ಬಂಧಿಸಿದ್ದಾರೆ.

ಅಮೃತ್‌ಪಾಲ್ ಮತ್ತು ಅವರ ಬೆಂಬಲಿಗರು ಅಮೃತಸರ ಬಳಿಯ ಅಜ್ನಾಲಾ ಪೊಲೀಸ್ ಠಾಣೆಗೆ ನುಗ್ಗಿ ಬಂಧನಕ್ಕೊಳಗಾದ ವ್ಯಕ್ತಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ ವಾರಗಳ ನಂತರ ಪೊಲೀಸರು ದಮನಕಾರಿ ನಡೆ ಅನುಸರಿಸಿದ್ದಾರೆ.

ರಾಜ್ಯವು ಹೈ ಅಲರ್ಟ್‌ನಲ್ಲಿದ್ದು, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ವದಂತಿಗಳಿಗೆ ಕಿವಿಗೊಡದಂತೆ ಸಾರ್ವಜನಿಕರಲ್ಲಿ ಪಂಜಾಬ್‌ನ ಹಿರಿಯ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಪೊಲೀಸ್ ಚೆಕ್‌ಪಾಯಿಂಟ್ ಭೇದಿಸಿದ ಅಮೃತಪಾಲ್ ಮತ್ತು ಅವರ ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಜಲಂಧರ್ ಗ್ರಾಮದಲ್ಲಿ ಪತ್ತೆಯಾದ ವಾಹನದಲ್ಲಿದ್ದ ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ

ಆ ಜಿಲ್ಲೆಯಲ್ಲಿ ಅಮೃತಪಾಲ್‌ನ ಏಳು ಸಹಚರರನ್ನು ಬಂಧಿಸಿದ ನಂತರ ಅಮೃತಸರ ಗ್ರಾಮಾಂತರ ಪೊಲೀಸರು ಶನಿವಾರ ರಾತ್ರಿ ಶಸ್ತ್ರಾಸ್ತ್ರ ಕಾಯ್ದೆಯಡಿ ಮತ್ತೊಂದು ಎಫ್‌ಐಆರ್ ದಾಖಲಿಸಿದ್ದಾರೆ.

ವಿವಿಧ ದೇಶಗಳು, ರಾಜ್ಯಗಳು ಮತ್ತು ನಗರಗಳಿಂದ ನಕಲಿ ಸುದ್ದಿಗಳನ್ನು ಹರಡುವವರ ಮತ್ತು ದ್ವೇಷ ಭಾಷಣಗಳನ್ನು ಮಾಡುವವರ ಮೇಲೆ ನಿಗಾ ಇಡಲಾಗಿದೆ. ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...