Homeಮುಖಪುಟಮೂರನೇ ದಿನಕ್ಕೆ ಕಾಲಿಟ್ಟ ಖಲಿಸ್ತಾನಿ ನಾಯಕನ ಬೇಟೆ ಕಾರ್ಯಾಚರಣೆ: ಮಾ.21ರ ಮಧ್ಯಾಹ್ನದವರೆಗೂ ಇಂಟರ್ನೆಟ್ ಬಂದ್

ಮೂರನೇ ದಿನಕ್ಕೆ ಕಾಲಿಟ್ಟ ಖಲಿಸ್ತಾನಿ ನಾಯಕನ ಬೇಟೆ ಕಾರ್ಯಾಚರಣೆ: ಮಾ.21ರ ಮಧ್ಯಾಹ್ನದವರೆಗೂ ಇಂಟರ್ನೆಟ್ ಬಂದ್

- Advertisement -
- Advertisement -

ಪಂಜಾಬ್ ಸರ್ಕಾರವು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳ ನಿಷೇಧವನ್ನು ಮಂಗಳವಾರ ಮಧ್ಯಾಹ್ನದವರೆಗೆ ವಿಸ್ತರಿಸಿದೆ. ಖಲಿಸ್ತಾನಿ ನಾಯಕ ಮತ್ತು ವಾರಿಸ್ ಪಂಜಾಬ್ ಡಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರ ಚಿಕ್ಕಪ್ಪ ಮತ್ತು ಚಾಲಕ ಜಲಂಧರ್ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಲಿಸ್ತಾನಿ ನಾಯಕನ ಬೇಟೆ ಕಾರ್ಯಾಚರಣೆಯು ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯ ಪೊಲೀಸರು ಅಮೃತಪಾಲ್ ಸಿಂಗ್‌ನನ್ನು ಶೀಘ್ರವಾಗಿ ಬಂಧಿಸಲು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

ಅಮೃತಪಾಲ್ ಅವರ ಚಿಕ್ಕಪ್ಪ ಹರ್ಜಿತ್ ಸಿಂಗ್ ಮತ್ತು ಚಾಲಕ ಹರ್‌ಪ್ರೀತ್ ಸಿಂಗ್ ಅವರು ಭಾನುವಾರ ತಡರಾತ್ರಿ ಜಲಂಧರ್‌ನ ಮೆಹತ್‌ಪುರ ಪ್ರದೇಶದ ಗುರುದ್ವಾರದ ಬಳಿ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಅಮೃತಪಾಲ್‌ಗಾಗಿ ಹುಡುಕಾಟ ಇನ್ನೂ ಮುಂದುವರೆದಿದೆ” ಎಂದು ಜಲಂಧರ್ ಎಸ್‌ಎಸ್‌ಪಿ (ಗ್ರಾಮೀಣ) ಸ್ವರನ್‌ದೀಪ್ ಸಿಂಗ್ ಹೇಳಿದ್ದಾರೆ.

ಪಂಜಾಬ್ ಸರ್ಕಾರವು ಮೊಬೈಲ್ ಇಂಟರ್ನೆಟ್ ಮತ್ತು SMS ಸೇವೆಗಳ ಅಮಾನತುವನ್ನು ಮಂಗಳವಾರ ಮಧ್ಯಾಹ್ನದವರೆಗೆ ವಿಸ್ತರಿಸಿದೆ.

ಇದನ್ನೂ ಓದಿ: ಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

”ಎಲ್ಲಾ ಮೊಬೈಲ್ ಇಂಟರ್ನೆಟ್ ಸೇವೆಗಳು (2G/3G/45/5G/CDMA/GPRS), ಎಲ್ಲಾ SMS ಸೇವೆಗಳು (ಬ್ಯಾಂಕಿಂಗ್ ಮತ್ತು ಮೊಬೈಲ್ ರೀಚಾರ್ಜ್ ಹೊರತುಪಡಿಸಿ) ಮತ್ತು ಮೊಬೈಲ್ ನೆಟ್‌ವರ್ಕ್‌ಗಳಲ್ಲಿ ಒದಗಿಸಲಾದ ಎಲ್ಲಾ ಡಾಂಗಲ್ ಸೇವೆಗಳು, ಧ್ವನಿ ಕರೆಗಳನ್ನು ಹೊರತುಪಡಿಸಿ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಾಧನಗಳನ್ನು ತಡೆಗಟ್ಟಲು ಮತ್ತು ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗವನ್ನು ತಡೆಗಟ್ಟಲು ಪಂಜಾಬ್‌ನ ಪ್ರಾದೇಶಿಕ ಇಂಟರ್ನೆಟ್ ಸೇವೆಗಳನ್ನು ಮಾರ್ಚ್ 20 (12.00 ಗಂಟೆಗಳು) ರಿಂದ ಮಾರ್ಚ್ 21 (12.00 ಗಂಟೆಗಳು) ವರೆಗೆ ನಿಷೇಧಿಸಲಾಗಿದೆ ಎಂದು ಗೃಹ ವ್ಯವಹಾರಗಳ ಇಲಾಖೆ ಮತ್ತು ನ್ಯಾಯಾಂಗದ ಆದೇಶವನ್ನು ಸೋಮವಾರ ಹೊರಡಿಸಲಾಗಿದೆ.

ಬ್ಯಾಂಕಿಂಗ್ ಸೌಲಭ್ಯಗಳು, ಆಸ್ಪತ್ರೆ ಸೇವೆಗಳು ಮತ್ತು ಇತರ ಅಗತ್ಯ ಸೇವೆಗಳಿಗೆ ಅಡ್ಡಿಯಾಗದಂತೆ ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿಲ್ಲ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆದೇಶದಲ್ಲಿ ತೀಳಿಸಿದ್ದಾರೆ.

ರಾಜ್ಯ ಅಧಿಕಾರಿಗಳು ಶನಿವಾರದಂದು ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಭಾನುವಾರ ಮಧ್ಯಾಹ್ನದವರೆಗೆ ಸ್ಥಗಿತಗೊಳಿಸಿದ್ದರು. ನಂತರ ಸೋಮವಾರ ಮಧ್ಯಾಹ್ನದವರೆಗೆ ನಿರ್ಬಂಧಗಳನ್ನು ವಿಸ್ತರಿಸಲಾಯಿತು.

ಏತನ್ಮಧ್ಯೆ, ಅಮೃತಪಾಲ್ ಅವರ ಮರ್ಸಿಡಿಸ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ ಅವರ ಬೆಂಗಾವಲು ಪಡೆಯ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಭಾನುವಾರ ಪೊಲೀಸರು ಪಂಜಾಬ್‌ನಾದ್ಯಂತ ಧ್ವಜ ಮೆರವಣಿಗೆ ಮತ್ತು ಶೋಧ ಕಾರ್ಯವನ್ನು ಮುಂದುವರೆಸಿದರು. ಈ ಮಧ್ಯೆ 34 ಬೆಂಬಲಿಗರನ್ನು ಬಂಧಿಸಿದ್ದಾರೆ ಮತ್ತು ಬಂಧನದಲ್ಲಿದ್ದ ನಾಲ್ವರನ್ನು ದೂರದ ಅಸ್ಸಾಂನ ಜೈಲಿಗೆ ಸ್ಥಳಾಂತರಿಸಿದ್ದಾರೆ.

ಅಮೃತಪಾಲ್ ನೇತೃತ್ವದ ‘ವಾರಿಸ್ ಪಂಜಾಬ್ ದೇ’ ಅಂಶಗಳು ಮತ್ತು ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಕದಡಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ದಮನ ಕಾರ್ಯಾಚರಣೆಗಳ ನಡೆಸುತ್ತಿರುವ ಪೊಲೀಸರು ಇದುವರೆಗೆ 112 ಜನರನ್ನು ಬಂಧಿಸಿದ್ದಾರೆ.

ಅಮೃತ್‌ಪಾಲ್ ಮತ್ತು ಅವರ ಬೆಂಬಲಿಗರು ಅಮೃತಸರ ಬಳಿಯ ಅಜ್ನಾಲಾ ಪೊಲೀಸ್ ಠಾಣೆಗೆ ನುಗ್ಗಿ ಬಂಧನಕ್ಕೊಳಗಾದ ವ್ಯಕ್ತಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ ವಾರಗಳ ನಂತರ ಪೊಲೀಸರು ದಮನಕಾರಿ ನಡೆ ಅನುಸರಿಸಿದ್ದಾರೆ.

ರಾಜ್ಯವು ಹೈ ಅಲರ್ಟ್‌ನಲ್ಲಿದ್ದು, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ವದಂತಿಗಳಿಗೆ ಕಿವಿಗೊಡದಂತೆ ಸಾರ್ವಜನಿಕರಲ್ಲಿ ಪಂಜಾಬ್‌ನ ಹಿರಿಯ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಪೊಲೀಸ್ ಚೆಕ್‌ಪಾಯಿಂಟ್ ಭೇದಿಸಿದ ಅಮೃತಪಾಲ್ ಮತ್ತು ಅವರ ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಜಲಂಧರ್ ಗ್ರಾಮದಲ್ಲಿ ಪತ್ತೆಯಾದ ವಾಹನದಲ್ಲಿದ್ದ ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ

ಆ ಜಿಲ್ಲೆಯಲ್ಲಿ ಅಮೃತಪಾಲ್‌ನ ಏಳು ಸಹಚರರನ್ನು ಬಂಧಿಸಿದ ನಂತರ ಅಮೃತಸರ ಗ್ರಾಮಾಂತರ ಪೊಲೀಸರು ಶನಿವಾರ ರಾತ್ರಿ ಶಸ್ತ್ರಾಸ್ತ್ರ ಕಾಯ್ದೆಯಡಿ ಮತ್ತೊಂದು ಎಫ್‌ಐಆರ್ ದಾಖಲಿಸಿದ್ದಾರೆ.

ವಿವಿಧ ದೇಶಗಳು, ರಾಜ್ಯಗಳು ಮತ್ತು ನಗರಗಳಿಂದ ನಕಲಿ ಸುದ್ದಿಗಳನ್ನು ಹರಡುವವರ ಮತ್ತು ದ್ವೇಷ ಭಾಷಣಗಳನ್ನು ಮಾಡುವವರ ಮೇಲೆ ನಿಗಾ ಇಡಲಾಗಿದೆ. ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...