Homeಮುಖಪುಟಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ನಟಿ ತ್ರಿಷಾ ಬಂಧನಕ್ಕೆ ಒತ್ತಾಯ

ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ನಟಿ ತ್ರಿಷಾ ಬಂಧನಕ್ಕೆ ಒತ್ತಾಯ

- Advertisement -
- Advertisement -

ಬಹುಭಾಷಾ ನಟಿ ತ್ರಿಷಾ ಮತ್ತು ನಿರ್ದೇಶಕ ಮಣಿರತ್ನಂ ಅವರು ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಇಬ್ಬರನ್ನು ಬಂಧಿಸಿ ಎಂದು ಕೆಲವು ಹಿಂದೂಪರ ಸಂಘಟನೆಗಳು ಒತ್ತಾಯಿಸುತ್ತಿವೆ.

ಮಣಿರತ್ನಂ ನಿರ್ದೇಶನದ ಪೊನ್ನಿಯಿನ್ ಸೆಲ್ವನ್ ಚಿತ್ರದಲ್ಲಿ ನಟಿ ತ್ರಿಷಾ ಕಾಣಿಸಿಕೊಂಡಿದ್ದು, ಚಿತ್ರದ ಚಿತ್ರಿಕರಣ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯುತ್ತಿತ್ತು. ಈ ವೇಳೆ ನಟಿ ಶಿವನ ದೇವಾಲಯದಲ್ಲಿ ಪಾದರಕ್ಷೆಗಳನ್ನು ಧರಿಸಿ ಓಡಾಡಿದ್ದಾರೆ ಎಂದು ಹೇಳಲಾಗಿದೆ.

ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಾಗಿದೆ ಎಂದಿರುವ ಧಾರ್ಮಿಕ ಸಂಘಟನೆಗಳು ನಟಿ ಮತ್ತು ನಿರ್ದೇಶಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿವೆ.

ಇದನ್ನೂ ಓದಿ: ನೆಹರು-ಗಾಂಧಿ ಕುಟುಂಬದ ವಿರುದ್ಧ ಅವಹೇಳನಕಾರಿ ವಿಡಿಯೊ: ನಟಿ ಪಾಯಲ್ ರೋಹ್ಟಗಿ ವಿರುದ್ಧ ಪ್ರಕರಣ

indu Outfits Demand Arrest of Kollywood Actress Trisha, Ponniyin Selvan Director Maniratnam - Sakshi Post
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಚಿತ್ರ

ಮದ್ರಾಸ್ ಟಾಕೀಸ್ ನಿರ್ಮಾಣದಲ್ಲಿ ಮಣಿರತ್ನಂ ನಿರ್ದೇಶನದ ಪೊನ್ನಿಯಿನ್ ಸೆಲ್ವನ್ ಚಿತ್ರದ ಚಿತ್ರೀಕರಣ ಇಂದೋರ್‌ನಲ್ಲಿರುವ ಹಳೆಯ ದೇವಸ್ಥಾನದಲ್ಲಿ ನಡೆಯುತ್ತಿತ್ತು. ನಟಿಯರಾದ ತ್ರಿಷಾ ಮತ್ತು ಐಶ್ವರ್ಯ ರೈ ಅವರ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿತ್ತು. ಚಿತ್ರೀಕರಣದ ನಡುವೆ ತ್ರಿಷಾ ಪಾದರಕ್ಷೆಗಳನ್ನು ಧರಿಸಿ ದೇವಾಲಯದ ಆವರಣದಲ್ಲಿ  ಓಡಾಡಿದ್ದಾರೆ.

ನಟಿ ತ್ರಿಷಾ ಶಿವಲಿಂಗ ಮತ್ತು ನಂದಿಯ ನಡುವೆ ಪಾದರಕ್ಷೆಗಳೊಂದಿಗೆ ಓಡಾಡುತ್ತಿರವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ#ArrestTrisha ಎಂಬುದು ವೈರಲ್ ಮಾಡಲಾಗಿತ್ತು.

ಪೊನ್ನಿಯಿನ್ ಸೆಲ್ವನ್ ಚಿತ್ರದ ಕೆಲವು ಚಿತ್ರಗಳು ಸೋರಿಕೆಯಾದ ನಂತರ, ನಿರ್ಮಾಪಕರು ಚಿತ್ರೀಕರಣದ ಸಮಯದಲ್ಲಿ ಯಾವುದೇ ಛಾಯಾಚಿತ್ರಗಳನ್ನು ತೆಗೆದುಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಚಿತ್ರಿಕರಣದ ಸಮಯದಲ್ಲಿ ಕುದುರೆಯೊಂದು ಸಾವನ್ನಪ್ಪಿತ್ತು. ಈ ಕುರಿತು ಮಣಿರತ್ನಂ ವಿರುದ್ಧ ದೂರು ದಾಖಲಾಗಿತ್ತು. ತನಿಖೆ ಪ್ರಗತಿಯಲ್ಲಿದೆ.


ಇದನ್ನೂ ಓದಿ: 200 ಹಲ್ಲಾ ಹೋ: ಪ್ರತೀಕಾರ ಹತ್ಯೆಯ ಸುತ್ತ ಮಹತ್ವದ ಜಾತಿ ದೌರ್ಜನ್ಯದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...