Homeಮುಖಪುಟಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ವೈವಾಹಿಕ ಜೀವನದ ಎರಡೇ ತಿಂಗಳಿಗೆ ಗಂಡನ ಮನೆಯವರ ದನ ದಾಹಕ್ಕೆ ನಲುಗಿದ ಹೆಣ್ಣು ಮಗಳು

- Advertisement -
- Advertisement -

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ.

ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಹತ್ಯೆಗೂ ಮುನ್ನ ವಾರಗಟ್ಟಲೆ ಪರಮೇಶ್ ಆಕೆಗೆ ಚಿತ್ರಹಿಂಸೆ ನೀಡಿದ್ದ ಎಂದು ವರದಿಗಳು ಹೇಳಿವೆ.

ವರದಕ್ಷಿಣೆ ತರುವಂತೆ ಅನುಷಾಳನ್ನು ಪೀಡಿಸಿದ ಪರಮೇಶ್, ಕೊನೆಗೆ ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆಯಾಗಿ ಎರಡೇ ತಿಂಗಳಿಗೆ ಆತ ವರದಕ್ಷಿಣೆಗಾಗಿ ಆಕೆಗೆ ಕಿರುಕುಳ ನೀಡಲು ಆರಂಭಿಸಿದ್ದ ಎಂದು ವರದಿಯಾಗಿದೆ.

ಹೆಚ್ಚು ಅನ್ನ ಮಾಡಿದ ಕ್ಷುಲ್ಲಕ ವಿಚಾರ ಮುಂದಿಟ್ಟುಕೊಂಡು ಪರಮೇಶ್‌ನ ತಾಯಿ ಲಾಲಮ್ಮ ಡಿಸೆಂಬರ್ 15ರಂದು ಅನುಷಾಗೆ ಬೈದಿದ್ದರು. ಅಮ್ಮನ ಜೊತೆ ಪರಮೇಶ್ ಕೂಡ ಸೇರಿಕೊಂಡು ತನ್ನ ಹೆಂಡತಿಯನ್ನು ಹಿಂಸಿಸಲು ಪ್ರಾರಂಭಿಸಿದ್ದ. ಅಮ್ಮ-ಮಗ ಇಬ್ಬರು ಸೇರಿ ಅನುಷಾಗೆ ಥಳಿಸಿದ್ದರು. ಇದನ್ನು ನೋಡಿದ ಪರಮೇಶ್‌ನ ತಂದೆ ಮೊಗಿಲಯ್ಯ ಅನುಷಾಳನ್ನು ಆಕೆಯ ತವರು ಮನೆಗೆ ಬಿಟ್ಟು ಬಂದಿದ್ದರು ಎಂದು ತಂಡೂರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ನರಸಿಂಗ್ ಯಡಯ್ಯ ತಿಳಿಸಿದ್ದಾರೆ.

ಡಿಸೆಂಬರ್ 18ರಂದು ಅನುಷಾಳನ್ನು ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿದ ಪರಮೇಶ್, “ನಾನು ಆಸ್ಪತ್ರೆಗೆ ಕರೆದೊಯ್ಯುತ್ತೇನೆ” ಎಂದು ಹೇಳಿದ್ದಾನೆ. ಇದಕ್ಕೆ ಅಮ್ಮ-ಮಗಳು ಒಪ್ಪದಿದ್ದಾಗ, ಪರಮೇಶ್ ಬಲವಂತವಾಗಿ ಅನುಷಾಳನ್ನು ಕರೆದೊಯ್ದಿದ್ದ.

ಪರಮೇಶ್ ಅನುಷಾಳನ್ನು ಎರಡು ಆಸ್ಪತ್ರೆಗಳಿಗೆ ಕರೆದೊಯ್ದಿದ್ದ. ಆದರೆ, ಆಸ್ಪತ್ರೆಯವರು ಇದು ವೈದ್ಯಕೀಯ-ಕಾನೂನು ಪ್ರಕರಣ, ಪೊಲೀಸರು ಮಧ್ಯಪ್ರವೇಶಿಸದೆ ಚಿಕಿತ್ಸೆ ನೀಡುವುದಿಲ್ಲ ಎಂದಿದ್ದಾರೆ.

ಹಾಗಾಗಿ, ಪರಮೇಶ್ ಅನುಷಾಳನ್ನು ವಾಪಸ್ ಆತನ ಮನೆಗೆ ಕರೆದೊಯ್ದಿದ್ದ. ಮನೆ ತಲುಪಿದಾಗ, ಬಾಗಿಲು ತೆರೆಯುವಂತೆ ಅನುಷಾಳಿಗೆ ಸೂಚಿಸಿದ್ದ. ಇದಕ್ಕೆ ಅನುಷಾ ನಿರಾಕರಿಸಿದಾಗ, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಅದು ತಾರಕಕ್ಕೇರಿ ಪರಮೇಶ್ ಅನುಷಾಳಿಗೆ ಥಳಿಸಿದ್ದಾನೆ. ನಂತರ ಆಕೆಯನ್ನು ಒದ್ದು ಮನೆಯ ಅಂಗಳಕ್ಕೆ ತಳ್ಳಿದ್ದಾನೆ. ಬಳಿಕ ಕಟ್ಟಿಗೆ ತಂದು ಅನುಷಾಳಿಗೆ ಹೊಡೆಯಲು ಶುರು ಮಾಡಿದ್ದಾನೆ. ಆಕೆ ನೆಲಕ್ಕೆ ಬೀಳುವವರೆಗೆ ಸುಮಾರು 6 ಬಾರಿ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ಡಿವೈಎಸ್ಪಿ ವಿವರಿಸಿದ್ದಾರೆ.

ಆಸ್ಪತ್ರೆಯಿಂದ ಬೈಕ್‌ನಲ್ಲಿ ಪರಮೇಶ್‌ನ ಮನೆ ತಲುಪಿದಾಗ, ಅನುಷಾ ಅಲ್ಲಿಂದ ಓಡಿ ಹೋಗಲು ನೋಡಿದ್ದಳು. ಆದರೆ, ಪರಮೇಶ್ ಆಕೆಯನ್ನು ವರಾಂಡಕ್ಕೆ ಎಳೆದೊಯ್ದಿದ್ದ. ನಂತರ ಆಕೆಯ ತಲೆಯನ್ನು ಬಾಗಿಲಿಗೆ ಬಡಿಯುವುದು, ಕಪಾಳಮೋಕ್ಷ ಮಾಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಹಿಂಸಿಸಿದ್ದಾನೆ. ಕೊನೆಗೆ ಕಟ್ಟಿಗೆಯಿಂದ ಆಕೆಗೆ ಹೊಡೆಯಲು ಪ್ರಾರಂಭಿಸಿದ್ದಾನೆ. ಇದನ್ನು ನೋಡಿದ ದಾರಿ ಹೋಕ ಮಹಿಳೆಯೊಬ್ಬರು ತಡೆಯಲು ಪ್ರಯತ್ನಿಸಿದ್ದರು. ಆದರೆ, ಅನುಷಾ ಕುಸಿದು ಬೀಳುವವರೆಗೆ ಪರಮೇಶ್ ಹೊಡೆಯುವುದನ್ನು ನಿಲ್ಲಿಸಿಲ್ಲ ಎಂದು ಡಿವೈಎಸ್ಪಿ ಹೇಳಿದ್ದಾರೆ.

ಘಟನೆಯ ದೃಶ್ಯಗಳು ಪರಮೇಶ್‌ನ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಹೇಳಿದ್ದಾರೆ.

ಮದುವೆಗೂ ಮುಂಚೆ ಕೆಲ ಸಮಯದಿಂದ ಅನುಷಾ ಮತ್ತು ಪರಮೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಮಾರ್ಚ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರ ಮದುವೆ ನಡೆದಿತ್ತು. ಮದುವೆ ಸಂದರ್ಭದಲ್ಲಿ 1.11 ಲಕ್ಷ ರೂಪಾಯಿ ಹಣ ಮತ್ತು ಇತರ ಕೆಲ ವಸ್ತುಗಳನ್ನು ವರದಕ್ಷಿಣೆಯಾಗಿ ಅನುಷಾಳ ಪೋಷಕರು ನೀಡಿದ್ದರು ಎಂದು ಡಿವೈಎಸ್ಪಿ ಮಾಹಿತಿ ನೀಡಿದ್ದಾರೆ.

ಮದುವೆಯಾಗಿ ಎರಡೇ ತಿಂಗಳಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಪರಮೇಶ್ ಅನುಷಾಳಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಕುಟುಂಬಕ್ಕೆ 10 ಎಕರೆ ಭೂಮಿ ಇದ್ದು, ಆರ್ಥಿಕ ವಿಚಾರದಲ್ಲಿ ಚೆನ್ನಾಗಿದ್ದಾರೆ. ಪರಮೇಶ್‌ನ ತಾಯಿ ಆಗಾಗ, “ಅನುಷಾಳ ಬದಲು ಬೇರೆ ಹುಡುಗಿಯನ್ನು ಮದುವೆಯಾಗಿದ್ದರೆ ಇನ್ನೂ ಹೆಚ್ಚಿನ ವರದಕ್ಷಿಣೆ ಸಿಗುತ್ತಿತ್ತು” ಎಂದು ಹೇಳುತ್ತಿದ್ದರು.

ಅನುಷಾಳ ಮೇಲೆ ಡಿಸೆಂಬರ್ 15ರಂದು ಹಲ್ಲೆ ನಡೆದಾಗ, ಆಸ್ಪತ್ರೆಯ ಅಧಿಕಾರಿಗಳು ಪೊಲೀಸ್ ದೂರು ನೀಡುವಂತೆ ಸಲಹೆ ಕೊಟ್ಟಿದ್ದರು. ಆದರೆ, ತನ್ನ ವೈವಾಹಿಕ ಜೀವನಕ್ಕೆ ಹೆಚ್ಚಿನ ಸಮಸ್ಯೆ ಆಗಬಹುದು ಎಂದು ಅನುಷಾ ದೂರು ನೀಡಲು ನಿರಾಕರಿಸಿದ್ದಳು ಎಂದು ಆಕೆಯ ತಾಯಿ ಮಾಧ್ಯಮಗಳಿಗೆ ಹೇಳಿದ್ದಾರೆ.

ವಿಕಾರಾಬಾದ್ ಪೊಲೀಸರು ಪರಮೇಶ್ ಮತ್ತು ಆತನ ಪೋಷಕರನ್ನು ಬಂಧಿಸಿದ್ದಾರೆ. ಪರಮೇಶ್ ವಿರುದ್ಧ ಕೊಲೆ, ವರದಕ್ಷಿಣೆ ಹತ್ಯೆ ಮತ್ತು ಮಹಿಳೆಯರ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...