Homeಮುಖಪುಟಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ವೈವಾಹಿಕ ಜೀವನದ ಎರಡೇ ತಿಂಗಳಿಗೆ ಗಂಡನ ಮನೆಯವರ ದನ ದಾಹಕ್ಕೆ ನಲುಗಿದ ಹೆಣ್ಣು ಮಗಳು

- Advertisement -
- Advertisement -

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ.

ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಹತ್ಯೆಗೂ ಮುನ್ನ ವಾರಗಟ್ಟಲೆ ಪರಮೇಶ್ ಆಕೆಗೆ ಚಿತ್ರಹಿಂಸೆ ನೀಡಿದ್ದ ಎಂದು ವರದಿಗಳು ಹೇಳಿವೆ.

ವರದಕ್ಷಿಣೆ ತರುವಂತೆ ಅನುಷಾಳನ್ನು ಪೀಡಿಸಿದ ಪರಮೇಶ್, ಕೊನೆಗೆ ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆಯಾಗಿ ಎರಡೇ ತಿಂಗಳಿಗೆ ಆತ ವರದಕ್ಷಿಣೆಗಾಗಿ ಆಕೆಗೆ ಕಿರುಕುಳ ನೀಡಲು ಆರಂಭಿಸಿದ್ದ ಎಂದು ವರದಿಯಾಗಿದೆ.

ಹೆಚ್ಚು ಅನ್ನ ಮಾಡಿದ ಕ್ಷುಲ್ಲಕ ವಿಚಾರ ಮುಂದಿಟ್ಟುಕೊಂಡು ಪರಮೇಶ್‌ನ ತಾಯಿ ಲಾಲಮ್ಮ ಡಿಸೆಂಬರ್ 15ರಂದು ಅನುಷಾಗೆ ಬೈದಿದ್ದರು. ಅಮ್ಮನ ಜೊತೆ ಪರಮೇಶ್ ಕೂಡ ಸೇರಿಕೊಂಡು ತನ್ನ ಹೆಂಡತಿಯನ್ನು ಹಿಂಸಿಸಲು ಪ್ರಾರಂಭಿಸಿದ್ದ. ಅಮ್ಮ-ಮಗ ಇಬ್ಬರು ಸೇರಿ ಅನುಷಾಗೆ ಥಳಿಸಿದ್ದರು. ಇದನ್ನು ನೋಡಿದ ಪರಮೇಶ್‌ನ ತಂದೆ ಮೊಗಿಲಯ್ಯ ಅನುಷಾಳನ್ನು ಆಕೆಯ ತವರು ಮನೆಗೆ ಬಿಟ್ಟು ಬಂದಿದ್ದರು ಎಂದು ತಂಡೂರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ನರಸಿಂಗ್ ಯಡಯ್ಯ ತಿಳಿಸಿದ್ದಾರೆ.

ಡಿಸೆಂಬರ್ 18ರಂದು ಅನುಷಾಳನ್ನು ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿದ ಪರಮೇಶ್, “ನಾನು ಆಸ್ಪತ್ರೆಗೆ ಕರೆದೊಯ್ಯುತ್ತೇನೆ” ಎಂದು ಹೇಳಿದ್ದಾನೆ. ಇದಕ್ಕೆ ಅಮ್ಮ-ಮಗಳು ಒಪ್ಪದಿದ್ದಾಗ, ಪರಮೇಶ್ ಬಲವಂತವಾಗಿ ಅನುಷಾಳನ್ನು ಕರೆದೊಯ್ದಿದ್ದ.

ಪರಮೇಶ್ ಅನುಷಾಳನ್ನು ಎರಡು ಆಸ್ಪತ್ರೆಗಳಿಗೆ ಕರೆದೊಯ್ದಿದ್ದ. ಆದರೆ, ಆಸ್ಪತ್ರೆಯವರು ಇದು ವೈದ್ಯಕೀಯ-ಕಾನೂನು ಪ್ರಕರಣ, ಪೊಲೀಸರು ಮಧ್ಯಪ್ರವೇಶಿಸದೆ ಚಿಕಿತ್ಸೆ ನೀಡುವುದಿಲ್ಲ ಎಂದಿದ್ದಾರೆ.

ಹಾಗಾಗಿ, ಪರಮೇಶ್ ಅನುಷಾಳನ್ನು ವಾಪಸ್ ಆತನ ಮನೆಗೆ ಕರೆದೊಯ್ದಿದ್ದ. ಮನೆ ತಲುಪಿದಾಗ, ಬಾಗಿಲು ತೆರೆಯುವಂತೆ ಅನುಷಾಳಿಗೆ ಸೂಚಿಸಿದ್ದ. ಇದಕ್ಕೆ ಅನುಷಾ ನಿರಾಕರಿಸಿದಾಗ, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಅದು ತಾರಕಕ್ಕೇರಿ ಪರಮೇಶ್ ಅನುಷಾಳಿಗೆ ಥಳಿಸಿದ್ದಾನೆ. ನಂತರ ಆಕೆಯನ್ನು ಒದ್ದು ಮನೆಯ ಅಂಗಳಕ್ಕೆ ತಳ್ಳಿದ್ದಾನೆ. ಬಳಿಕ ಕಟ್ಟಿಗೆ ತಂದು ಅನುಷಾಳಿಗೆ ಹೊಡೆಯಲು ಶುರು ಮಾಡಿದ್ದಾನೆ. ಆಕೆ ನೆಲಕ್ಕೆ ಬೀಳುವವರೆಗೆ ಸುಮಾರು 6 ಬಾರಿ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ಡಿವೈಎಸ್ಪಿ ವಿವರಿಸಿದ್ದಾರೆ.

ಆಸ್ಪತ್ರೆಯಿಂದ ಬೈಕ್‌ನಲ್ಲಿ ಪರಮೇಶ್‌ನ ಮನೆ ತಲುಪಿದಾಗ, ಅನುಷಾ ಅಲ್ಲಿಂದ ಓಡಿ ಹೋಗಲು ನೋಡಿದ್ದಳು. ಆದರೆ, ಪರಮೇಶ್ ಆಕೆಯನ್ನು ವರಾಂಡಕ್ಕೆ ಎಳೆದೊಯ್ದಿದ್ದ. ನಂತರ ಆಕೆಯ ತಲೆಯನ್ನು ಬಾಗಿಲಿಗೆ ಬಡಿಯುವುದು, ಕಪಾಳಮೋಕ್ಷ ಮಾಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಹಿಂಸಿಸಿದ್ದಾನೆ. ಕೊನೆಗೆ ಕಟ್ಟಿಗೆಯಿಂದ ಆಕೆಗೆ ಹೊಡೆಯಲು ಪ್ರಾರಂಭಿಸಿದ್ದಾನೆ. ಇದನ್ನು ನೋಡಿದ ದಾರಿ ಹೋಕ ಮಹಿಳೆಯೊಬ್ಬರು ತಡೆಯಲು ಪ್ರಯತ್ನಿಸಿದ್ದರು. ಆದರೆ, ಅನುಷಾ ಕುಸಿದು ಬೀಳುವವರೆಗೆ ಪರಮೇಶ್ ಹೊಡೆಯುವುದನ್ನು ನಿಲ್ಲಿಸಿಲ್ಲ ಎಂದು ಡಿವೈಎಸ್ಪಿ ಹೇಳಿದ್ದಾರೆ.

ಘಟನೆಯ ದೃಶ್ಯಗಳು ಪರಮೇಶ್‌ನ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಹೇಳಿದ್ದಾರೆ.

ಮದುವೆಗೂ ಮುಂಚೆ ಕೆಲ ಸಮಯದಿಂದ ಅನುಷಾ ಮತ್ತು ಪರಮೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಮಾರ್ಚ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರ ಮದುವೆ ನಡೆದಿತ್ತು. ಮದುವೆ ಸಂದರ್ಭದಲ್ಲಿ 1.11 ಲಕ್ಷ ರೂಪಾಯಿ ಹಣ ಮತ್ತು ಇತರ ಕೆಲ ವಸ್ತುಗಳನ್ನು ವರದಕ್ಷಿಣೆಯಾಗಿ ಅನುಷಾಳ ಪೋಷಕರು ನೀಡಿದ್ದರು ಎಂದು ಡಿವೈಎಸ್ಪಿ ಮಾಹಿತಿ ನೀಡಿದ್ದಾರೆ.

ಮದುವೆಯಾಗಿ ಎರಡೇ ತಿಂಗಳಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಪರಮೇಶ್ ಅನುಷಾಳಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಕುಟುಂಬಕ್ಕೆ 10 ಎಕರೆ ಭೂಮಿ ಇದ್ದು, ಆರ್ಥಿಕ ವಿಚಾರದಲ್ಲಿ ಚೆನ್ನಾಗಿದ್ದಾರೆ. ಪರಮೇಶ್‌ನ ತಾಯಿ ಆಗಾಗ, “ಅನುಷಾಳ ಬದಲು ಬೇರೆ ಹುಡುಗಿಯನ್ನು ಮದುವೆಯಾಗಿದ್ದರೆ ಇನ್ನೂ ಹೆಚ್ಚಿನ ವರದಕ್ಷಿಣೆ ಸಿಗುತ್ತಿತ್ತು” ಎಂದು ಹೇಳುತ್ತಿದ್ದರು.

ಅನುಷಾಳ ಮೇಲೆ ಡಿಸೆಂಬರ್ 15ರಂದು ಹಲ್ಲೆ ನಡೆದಾಗ, ಆಸ್ಪತ್ರೆಯ ಅಧಿಕಾರಿಗಳು ಪೊಲೀಸ್ ದೂರು ನೀಡುವಂತೆ ಸಲಹೆ ಕೊಟ್ಟಿದ್ದರು. ಆದರೆ, ತನ್ನ ವೈವಾಹಿಕ ಜೀವನಕ್ಕೆ ಹೆಚ್ಚಿನ ಸಮಸ್ಯೆ ಆಗಬಹುದು ಎಂದು ಅನುಷಾ ದೂರು ನೀಡಲು ನಿರಾಕರಿಸಿದ್ದಳು ಎಂದು ಆಕೆಯ ತಾಯಿ ಮಾಧ್ಯಮಗಳಿಗೆ ಹೇಳಿದ್ದಾರೆ.

ವಿಕಾರಾಬಾದ್ ಪೊಲೀಸರು ಪರಮೇಶ್ ಮತ್ತು ಆತನ ಪೋಷಕರನ್ನು ಬಂಧಿಸಿದ್ದಾರೆ. ಪರಮೇಶ್ ವಿರುದ್ಧ ಕೊಲೆ, ವರದಕ್ಷಿಣೆ ಹತ್ಯೆ ಮತ್ತು ಮಹಿಳೆಯರ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...