Homeಮುಖಪುಟಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ವೈವಾಹಿಕ ಜೀವನದ ಎರಡೇ ತಿಂಗಳಿಗೆ ಗಂಡನ ಮನೆಯವರ ದನ ದಾಹಕ್ಕೆ ನಲುಗಿದ ಹೆಣ್ಣು ಮಗಳು

- Advertisement -
- Advertisement -

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ.

ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಹತ್ಯೆಗೂ ಮುನ್ನ ವಾರಗಟ್ಟಲೆ ಪರಮೇಶ್ ಆಕೆಗೆ ಚಿತ್ರಹಿಂಸೆ ನೀಡಿದ್ದ ಎಂದು ವರದಿಗಳು ಹೇಳಿವೆ.

ವರದಕ್ಷಿಣೆ ತರುವಂತೆ ಅನುಷಾಳನ್ನು ಪೀಡಿಸಿದ ಪರಮೇಶ್, ಕೊನೆಗೆ ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆಯಾಗಿ ಎರಡೇ ತಿಂಗಳಿಗೆ ಆತ ವರದಕ್ಷಿಣೆಗಾಗಿ ಆಕೆಗೆ ಕಿರುಕುಳ ನೀಡಲು ಆರಂಭಿಸಿದ್ದ ಎಂದು ವರದಿಯಾಗಿದೆ.

ಹೆಚ್ಚು ಅನ್ನ ಮಾಡಿದ ಕ್ಷುಲ್ಲಕ ವಿಚಾರ ಮುಂದಿಟ್ಟುಕೊಂಡು ಪರಮೇಶ್‌ನ ತಾಯಿ ಲಾಲಮ್ಮ ಡಿಸೆಂಬರ್ 15ರಂದು ಅನುಷಾಗೆ ಬೈದಿದ್ದರು. ಅಮ್ಮನ ಜೊತೆ ಪರಮೇಶ್ ಕೂಡ ಸೇರಿಕೊಂಡು ತನ್ನ ಹೆಂಡತಿಯನ್ನು ಹಿಂಸಿಸಲು ಪ್ರಾರಂಭಿಸಿದ್ದ. ಅಮ್ಮ-ಮಗ ಇಬ್ಬರು ಸೇರಿ ಅನುಷಾಗೆ ಥಳಿಸಿದ್ದರು. ಇದನ್ನು ನೋಡಿದ ಪರಮೇಶ್‌ನ ತಂದೆ ಮೊಗಿಲಯ್ಯ ಅನುಷಾಳನ್ನು ಆಕೆಯ ತವರು ಮನೆಗೆ ಬಿಟ್ಟು ಬಂದಿದ್ದರು ಎಂದು ತಂಡೂರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ನರಸಿಂಗ್ ಯಡಯ್ಯ ತಿಳಿಸಿದ್ದಾರೆ.

ಡಿಸೆಂಬರ್ 18ರಂದು ಅನುಷಾಳನ್ನು ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿದ ಪರಮೇಶ್, “ನಾನು ಆಸ್ಪತ್ರೆಗೆ ಕರೆದೊಯ್ಯುತ್ತೇನೆ” ಎಂದು ಹೇಳಿದ್ದಾನೆ. ಇದಕ್ಕೆ ಅಮ್ಮ-ಮಗಳು ಒಪ್ಪದಿದ್ದಾಗ, ಪರಮೇಶ್ ಬಲವಂತವಾಗಿ ಅನುಷಾಳನ್ನು ಕರೆದೊಯ್ದಿದ್ದ.

ಪರಮೇಶ್ ಅನುಷಾಳನ್ನು ಎರಡು ಆಸ್ಪತ್ರೆಗಳಿಗೆ ಕರೆದೊಯ್ದಿದ್ದ. ಆದರೆ, ಆಸ್ಪತ್ರೆಯವರು ಇದು ವೈದ್ಯಕೀಯ-ಕಾನೂನು ಪ್ರಕರಣ, ಪೊಲೀಸರು ಮಧ್ಯಪ್ರವೇಶಿಸದೆ ಚಿಕಿತ್ಸೆ ನೀಡುವುದಿಲ್ಲ ಎಂದಿದ್ದಾರೆ.

ಹಾಗಾಗಿ, ಪರಮೇಶ್ ಅನುಷಾಳನ್ನು ವಾಪಸ್ ಆತನ ಮನೆಗೆ ಕರೆದೊಯ್ದಿದ್ದ. ಮನೆ ತಲುಪಿದಾಗ, ಬಾಗಿಲು ತೆರೆಯುವಂತೆ ಅನುಷಾಳಿಗೆ ಸೂಚಿಸಿದ್ದ. ಇದಕ್ಕೆ ಅನುಷಾ ನಿರಾಕರಿಸಿದಾಗ, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಅದು ತಾರಕಕ್ಕೇರಿ ಪರಮೇಶ್ ಅನುಷಾಳಿಗೆ ಥಳಿಸಿದ್ದಾನೆ. ನಂತರ ಆಕೆಯನ್ನು ಒದ್ದು ಮನೆಯ ಅಂಗಳಕ್ಕೆ ತಳ್ಳಿದ್ದಾನೆ. ಬಳಿಕ ಕಟ್ಟಿಗೆ ತಂದು ಅನುಷಾಳಿಗೆ ಹೊಡೆಯಲು ಶುರು ಮಾಡಿದ್ದಾನೆ. ಆಕೆ ನೆಲಕ್ಕೆ ಬೀಳುವವರೆಗೆ ಸುಮಾರು 6 ಬಾರಿ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ಡಿವೈಎಸ್ಪಿ ವಿವರಿಸಿದ್ದಾರೆ.

ಆಸ್ಪತ್ರೆಯಿಂದ ಬೈಕ್‌ನಲ್ಲಿ ಪರಮೇಶ್‌ನ ಮನೆ ತಲುಪಿದಾಗ, ಅನುಷಾ ಅಲ್ಲಿಂದ ಓಡಿ ಹೋಗಲು ನೋಡಿದ್ದಳು. ಆದರೆ, ಪರಮೇಶ್ ಆಕೆಯನ್ನು ವರಾಂಡಕ್ಕೆ ಎಳೆದೊಯ್ದಿದ್ದ. ನಂತರ ಆಕೆಯ ತಲೆಯನ್ನು ಬಾಗಿಲಿಗೆ ಬಡಿಯುವುದು, ಕಪಾಳಮೋಕ್ಷ ಮಾಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಹಿಂಸಿಸಿದ್ದಾನೆ. ಕೊನೆಗೆ ಕಟ್ಟಿಗೆಯಿಂದ ಆಕೆಗೆ ಹೊಡೆಯಲು ಪ್ರಾರಂಭಿಸಿದ್ದಾನೆ. ಇದನ್ನು ನೋಡಿದ ದಾರಿ ಹೋಕ ಮಹಿಳೆಯೊಬ್ಬರು ತಡೆಯಲು ಪ್ರಯತ್ನಿಸಿದ್ದರು. ಆದರೆ, ಅನುಷಾ ಕುಸಿದು ಬೀಳುವವರೆಗೆ ಪರಮೇಶ್ ಹೊಡೆಯುವುದನ್ನು ನಿಲ್ಲಿಸಿಲ್ಲ ಎಂದು ಡಿವೈಎಸ್ಪಿ ಹೇಳಿದ್ದಾರೆ.

ಘಟನೆಯ ದೃಶ್ಯಗಳು ಪರಮೇಶ್‌ನ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಹೇಳಿದ್ದಾರೆ.

ಮದುವೆಗೂ ಮುಂಚೆ ಕೆಲ ಸಮಯದಿಂದ ಅನುಷಾ ಮತ್ತು ಪರಮೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಮಾರ್ಚ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರ ಮದುವೆ ನಡೆದಿತ್ತು. ಮದುವೆ ಸಂದರ್ಭದಲ್ಲಿ 1.11 ಲಕ್ಷ ರೂಪಾಯಿ ಹಣ ಮತ್ತು ಇತರ ಕೆಲ ವಸ್ತುಗಳನ್ನು ವರದಕ್ಷಿಣೆಯಾಗಿ ಅನುಷಾಳ ಪೋಷಕರು ನೀಡಿದ್ದರು ಎಂದು ಡಿವೈಎಸ್ಪಿ ಮಾಹಿತಿ ನೀಡಿದ್ದಾರೆ.

ಮದುವೆಯಾಗಿ ಎರಡೇ ತಿಂಗಳಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಪರಮೇಶ್ ಅನುಷಾಳಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಕುಟುಂಬಕ್ಕೆ 10 ಎಕರೆ ಭೂಮಿ ಇದ್ದು, ಆರ್ಥಿಕ ವಿಚಾರದಲ್ಲಿ ಚೆನ್ನಾಗಿದ್ದಾರೆ. ಪರಮೇಶ್‌ನ ತಾಯಿ ಆಗಾಗ, “ಅನುಷಾಳ ಬದಲು ಬೇರೆ ಹುಡುಗಿಯನ್ನು ಮದುವೆಯಾಗಿದ್ದರೆ ಇನ್ನೂ ಹೆಚ್ಚಿನ ವರದಕ್ಷಿಣೆ ಸಿಗುತ್ತಿತ್ತು” ಎಂದು ಹೇಳುತ್ತಿದ್ದರು.

ಅನುಷಾಳ ಮೇಲೆ ಡಿಸೆಂಬರ್ 15ರಂದು ಹಲ್ಲೆ ನಡೆದಾಗ, ಆಸ್ಪತ್ರೆಯ ಅಧಿಕಾರಿಗಳು ಪೊಲೀಸ್ ದೂರು ನೀಡುವಂತೆ ಸಲಹೆ ಕೊಟ್ಟಿದ್ದರು. ಆದರೆ, ತನ್ನ ವೈವಾಹಿಕ ಜೀವನಕ್ಕೆ ಹೆಚ್ಚಿನ ಸಮಸ್ಯೆ ಆಗಬಹುದು ಎಂದು ಅನುಷಾ ದೂರು ನೀಡಲು ನಿರಾಕರಿಸಿದ್ದಳು ಎಂದು ಆಕೆಯ ತಾಯಿ ಮಾಧ್ಯಮಗಳಿಗೆ ಹೇಳಿದ್ದಾರೆ.

ವಿಕಾರಾಬಾದ್ ಪೊಲೀಸರು ಪರಮೇಶ್ ಮತ್ತು ಆತನ ಪೋಷಕರನ್ನು ಬಂಧಿಸಿದ್ದಾರೆ. ಪರಮೇಶ್ ವಿರುದ್ಧ ಕೊಲೆ, ವರದಕ್ಷಿಣೆ ಹತ್ಯೆ ಮತ್ತು ಮಹಿಳೆಯರ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...