Homeಮುಖಪುಟಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ವೈವಾಹಿಕ ಜೀವನದ ಎರಡೇ ತಿಂಗಳಿಗೆ ಗಂಡನ ಮನೆಯವರ ದನ ದಾಹಕ್ಕೆ ನಲುಗಿದ ಹೆಣ್ಣು ಮಗಳು

- Advertisement -
- Advertisement -

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ.

ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಹತ್ಯೆಗೂ ಮುನ್ನ ವಾರಗಟ್ಟಲೆ ಪರಮೇಶ್ ಆಕೆಗೆ ಚಿತ್ರಹಿಂಸೆ ನೀಡಿದ್ದ ಎಂದು ವರದಿಗಳು ಹೇಳಿವೆ.

ವರದಕ್ಷಿಣೆ ತರುವಂತೆ ಅನುಷಾಳನ್ನು ಪೀಡಿಸಿದ ಪರಮೇಶ್, ಕೊನೆಗೆ ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆಯಾಗಿ ಎರಡೇ ತಿಂಗಳಿಗೆ ಆತ ವರದಕ್ಷಿಣೆಗಾಗಿ ಆಕೆಗೆ ಕಿರುಕುಳ ನೀಡಲು ಆರಂಭಿಸಿದ್ದ ಎಂದು ವರದಿಯಾಗಿದೆ.

ಹೆಚ್ಚು ಅನ್ನ ಮಾಡಿದ ಕ್ಷುಲ್ಲಕ ವಿಚಾರ ಮುಂದಿಟ್ಟುಕೊಂಡು ಪರಮೇಶ್‌ನ ತಾಯಿ ಲಾಲಮ್ಮ ಡಿಸೆಂಬರ್ 15ರಂದು ಅನುಷಾಗೆ ಬೈದಿದ್ದರು. ಅಮ್ಮನ ಜೊತೆ ಪರಮೇಶ್ ಕೂಡ ಸೇರಿಕೊಂಡು ತನ್ನ ಹೆಂಡತಿಯನ್ನು ಹಿಂಸಿಸಲು ಪ್ರಾರಂಭಿಸಿದ್ದ. ಅಮ್ಮ-ಮಗ ಇಬ್ಬರು ಸೇರಿ ಅನುಷಾಗೆ ಥಳಿಸಿದ್ದರು. ಇದನ್ನು ನೋಡಿದ ಪರಮೇಶ್‌ನ ತಂದೆ ಮೊಗಿಲಯ್ಯ ಅನುಷಾಳನ್ನು ಆಕೆಯ ತವರು ಮನೆಗೆ ಬಿಟ್ಟು ಬಂದಿದ್ದರು ಎಂದು ತಂಡೂರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ನರಸಿಂಗ್ ಯಡಯ್ಯ ತಿಳಿಸಿದ್ದಾರೆ.

ಡಿಸೆಂಬರ್ 18ರಂದು ಅನುಷಾಳನ್ನು ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿದ ಪರಮೇಶ್, “ನಾನು ಆಸ್ಪತ್ರೆಗೆ ಕರೆದೊಯ್ಯುತ್ತೇನೆ” ಎಂದು ಹೇಳಿದ್ದಾನೆ. ಇದಕ್ಕೆ ಅಮ್ಮ-ಮಗಳು ಒಪ್ಪದಿದ್ದಾಗ, ಪರಮೇಶ್ ಬಲವಂತವಾಗಿ ಅನುಷಾಳನ್ನು ಕರೆದೊಯ್ದಿದ್ದ.

ಪರಮೇಶ್ ಅನುಷಾಳನ್ನು ಎರಡು ಆಸ್ಪತ್ರೆಗಳಿಗೆ ಕರೆದೊಯ್ದಿದ್ದ. ಆದರೆ, ಆಸ್ಪತ್ರೆಯವರು ಇದು ವೈದ್ಯಕೀಯ-ಕಾನೂನು ಪ್ರಕರಣ, ಪೊಲೀಸರು ಮಧ್ಯಪ್ರವೇಶಿಸದೆ ಚಿಕಿತ್ಸೆ ನೀಡುವುದಿಲ್ಲ ಎಂದಿದ್ದಾರೆ.

ಹಾಗಾಗಿ, ಪರಮೇಶ್ ಅನುಷಾಳನ್ನು ವಾಪಸ್ ಆತನ ಮನೆಗೆ ಕರೆದೊಯ್ದಿದ್ದ. ಮನೆ ತಲುಪಿದಾಗ, ಬಾಗಿಲು ತೆರೆಯುವಂತೆ ಅನುಷಾಳಿಗೆ ಸೂಚಿಸಿದ್ದ. ಇದಕ್ಕೆ ಅನುಷಾ ನಿರಾಕರಿಸಿದಾಗ, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಅದು ತಾರಕಕ್ಕೇರಿ ಪರಮೇಶ್ ಅನುಷಾಳಿಗೆ ಥಳಿಸಿದ್ದಾನೆ. ನಂತರ ಆಕೆಯನ್ನು ಒದ್ದು ಮನೆಯ ಅಂಗಳಕ್ಕೆ ತಳ್ಳಿದ್ದಾನೆ. ಬಳಿಕ ಕಟ್ಟಿಗೆ ತಂದು ಅನುಷಾಳಿಗೆ ಹೊಡೆಯಲು ಶುರು ಮಾಡಿದ್ದಾನೆ. ಆಕೆ ನೆಲಕ್ಕೆ ಬೀಳುವವರೆಗೆ ಸುಮಾರು 6 ಬಾರಿ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ಡಿವೈಎಸ್ಪಿ ವಿವರಿಸಿದ್ದಾರೆ.

ಆಸ್ಪತ್ರೆಯಿಂದ ಬೈಕ್‌ನಲ್ಲಿ ಪರಮೇಶ್‌ನ ಮನೆ ತಲುಪಿದಾಗ, ಅನುಷಾ ಅಲ್ಲಿಂದ ಓಡಿ ಹೋಗಲು ನೋಡಿದ್ದಳು. ಆದರೆ, ಪರಮೇಶ್ ಆಕೆಯನ್ನು ವರಾಂಡಕ್ಕೆ ಎಳೆದೊಯ್ದಿದ್ದ. ನಂತರ ಆಕೆಯ ತಲೆಯನ್ನು ಬಾಗಿಲಿಗೆ ಬಡಿಯುವುದು, ಕಪಾಳಮೋಕ್ಷ ಮಾಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಹಿಂಸಿಸಿದ್ದಾನೆ. ಕೊನೆಗೆ ಕಟ್ಟಿಗೆಯಿಂದ ಆಕೆಗೆ ಹೊಡೆಯಲು ಪ್ರಾರಂಭಿಸಿದ್ದಾನೆ. ಇದನ್ನು ನೋಡಿದ ದಾರಿ ಹೋಕ ಮಹಿಳೆಯೊಬ್ಬರು ತಡೆಯಲು ಪ್ರಯತ್ನಿಸಿದ್ದರು. ಆದರೆ, ಅನುಷಾ ಕುಸಿದು ಬೀಳುವವರೆಗೆ ಪರಮೇಶ್ ಹೊಡೆಯುವುದನ್ನು ನಿಲ್ಲಿಸಿಲ್ಲ ಎಂದು ಡಿವೈಎಸ್ಪಿ ಹೇಳಿದ್ದಾರೆ.

ಘಟನೆಯ ದೃಶ್ಯಗಳು ಪರಮೇಶ್‌ನ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಹೇಳಿದ್ದಾರೆ.

ಮದುವೆಗೂ ಮುಂಚೆ ಕೆಲ ಸಮಯದಿಂದ ಅನುಷಾ ಮತ್ತು ಪರಮೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಮಾರ್ಚ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರ ಮದುವೆ ನಡೆದಿತ್ತು. ಮದುವೆ ಸಂದರ್ಭದಲ್ಲಿ 1.11 ಲಕ್ಷ ರೂಪಾಯಿ ಹಣ ಮತ್ತು ಇತರ ಕೆಲ ವಸ್ತುಗಳನ್ನು ವರದಕ್ಷಿಣೆಯಾಗಿ ಅನುಷಾಳ ಪೋಷಕರು ನೀಡಿದ್ದರು ಎಂದು ಡಿವೈಎಸ್ಪಿ ಮಾಹಿತಿ ನೀಡಿದ್ದಾರೆ.

ಮದುವೆಯಾಗಿ ಎರಡೇ ತಿಂಗಳಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಪರಮೇಶ್ ಅನುಷಾಳಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಕುಟುಂಬಕ್ಕೆ 10 ಎಕರೆ ಭೂಮಿ ಇದ್ದು, ಆರ್ಥಿಕ ವಿಚಾರದಲ್ಲಿ ಚೆನ್ನಾಗಿದ್ದಾರೆ. ಪರಮೇಶ್‌ನ ತಾಯಿ ಆಗಾಗ, “ಅನುಷಾಳ ಬದಲು ಬೇರೆ ಹುಡುಗಿಯನ್ನು ಮದುವೆಯಾಗಿದ್ದರೆ ಇನ್ನೂ ಹೆಚ್ಚಿನ ವರದಕ್ಷಿಣೆ ಸಿಗುತ್ತಿತ್ತು” ಎಂದು ಹೇಳುತ್ತಿದ್ದರು.

ಅನುಷಾಳ ಮೇಲೆ ಡಿಸೆಂಬರ್ 15ರಂದು ಹಲ್ಲೆ ನಡೆದಾಗ, ಆಸ್ಪತ್ರೆಯ ಅಧಿಕಾರಿಗಳು ಪೊಲೀಸ್ ದೂರು ನೀಡುವಂತೆ ಸಲಹೆ ಕೊಟ್ಟಿದ್ದರು. ಆದರೆ, ತನ್ನ ವೈವಾಹಿಕ ಜೀವನಕ್ಕೆ ಹೆಚ್ಚಿನ ಸಮಸ್ಯೆ ಆಗಬಹುದು ಎಂದು ಅನುಷಾ ದೂರು ನೀಡಲು ನಿರಾಕರಿಸಿದ್ದಳು ಎಂದು ಆಕೆಯ ತಾಯಿ ಮಾಧ್ಯಮಗಳಿಗೆ ಹೇಳಿದ್ದಾರೆ.

ವಿಕಾರಾಬಾದ್ ಪೊಲೀಸರು ಪರಮೇಶ್ ಮತ್ತು ಆತನ ಪೋಷಕರನ್ನು ಬಂಧಿಸಿದ್ದಾರೆ. ಪರಮೇಶ್ ವಿರುದ್ಧ ಕೊಲೆ, ವರದಕ್ಷಿಣೆ ಹತ್ಯೆ ಮತ್ತು ಮಹಿಳೆಯರ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...