Homeಮುಖಪುಟಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ವೈವಾಹಿಕ ಜೀವನದ ಎರಡೇ ತಿಂಗಳಿಗೆ ಗಂಡನ ಮನೆಯವರ ದನ ದಾಹಕ್ಕೆ ನಲುಗಿದ ಹೆಣ್ಣು ಮಗಳು

- Advertisement -
- Advertisement -

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ.

ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಹತ್ಯೆಗೂ ಮುನ್ನ ವಾರಗಟ್ಟಲೆ ಪರಮೇಶ್ ಆಕೆಗೆ ಚಿತ್ರಹಿಂಸೆ ನೀಡಿದ್ದ ಎಂದು ವರದಿಗಳು ಹೇಳಿವೆ.

ವರದಕ್ಷಿಣೆ ತರುವಂತೆ ಅನುಷಾಳನ್ನು ಪೀಡಿಸಿದ ಪರಮೇಶ್, ಕೊನೆಗೆ ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆಯಾಗಿ ಎರಡೇ ತಿಂಗಳಿಗೆ ಆತ ವರದಕ್ಷಿಣೆಗಾಗಿ ಆಕೆಗೆ ಕಿರುಕುಳ ನೀಡಲು ಆರಂಭಿಸಿದ್ದ ಎಂದು ವರದಿಯಾಗಿದೆ.

ಹೆಚ್ಚು ಅನ್ನ ಮಾಡಿದ ಕ್ಷುಲ್ಲಕ ವಿಚಾರ ಮುಂದಿಟ್ಟುಕೊಂಡು ಪರಮೇಶ್‌ನ ತಾಯಿ ಲಾಲಮ್ಮ ಡಿಸೆಂಬರ್ 15ರಂದು ಅನುಷಾಗೆ ಬೈದಿದ್ದರು. ಅಮ್ಮನ ಜೊತೆ ಪರಮೇಶ್ ಕೂಡ ಸೇರಿಕೊಂಡು ತನ್ನ ಹೆಂಡತಿಯನ್ನು ಹಿಂಸಿಸಲು ಪ್ರಾರಂಭಿಸಿದ್ದ. ಅಮ್ಮ-ಮಗ ಇಬ್ಬರು ಸೇರಿ ಅನುಷಾಗೆ ಥಳಿಸಿದ್ದರು. ಇದನ್ನು ನೋಡಿದ ಪರಮೇಶ್‌ನ ತಂದೆ ಮೊಗಿಲಯ್ಯ ಅನುಷಾಳನ್ನು ಆಕೆಯ ತವರು ಮನೆಗೆ ಬಿಟ್ಟು ಬಂದಿದ್ದರು ಎಂದು ತಂಡೂರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ನರಸಿಂಗ್ ಯಡಯ್ಯ ತಿಳಿಸಿದ್ದಾರೆ.

ಡಿಸೆಂಬರ್ 18ರಂದು ಅನುಷಾಳನ್ನು ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿದ ಪರಮೇಶ್, “ನಾನು ಆಸ್ಪತ್ರೆಗೆ ಕರೆದೊಯ್ಯುತ್ತೇನೆ” ಎಂದು ಹೇಳಿದ್ದಾನೆ. ಇದಕ್ಕೆ ಅಮ್ಮ-ಮಗಳು ಒಪ್ಪದಿದ್ದಾಗ, ಪರಮೇಶ್ ಬಲವಂತವಾಗಿ ಅನುಷಾಳನ್ನು ಕರೆದೊಯ್ದಿದ್ದ.

ಪರಮೇಶ್ ಅನುಷಾಳನ್ನು ಎರಡು ಆಸ್ಪತ್ರೆಗಳಿಗೆ ಕರೆದೊಯ್ದಿದ್ದ. ಆದರೆ, ಆಸ್ಪತ್ರೆಯವರು ಇದು ವೈದ್ಯಕೀಯ-ಕಾನೂನು ಪ್ರಕರಣ, ಪೊಲೀಸರು ಮಧ್ಯಪ್ರವೇಶಿಸದೆ ಚಿಕಿತ್ಸೆ ನೀಡುವುದಿಲ್ಲ ಎಂದಿದ್ದಾರೆ.

ಹಾಗಾಗಿ, ಪರಮೇಶ್ ಅನುಷಾಳನ್ನು ವಾಪಸ್ ಆತನ ಮನೆಗೆ ಕರೆದೊಯ್ದಿದ್ದ. ಮನೆ ತಲುಪಿದಾಗ, ಬಾಗಿಲು ತೆರೆಯುವಂತೆ ಅನುಷಾಳಿಗೆ ಸೂಚಿಸಿದ್ದ. ಇದಕ್ಕೆ ಅನುಷಾ ನಿರಾಕರಿಸಿದಾಗ, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಅದು ತಾರಕಕ್ಕೇರಿ ಪರಮೇಶ್ ಅನುಷಾಳಿಗೆ ಥಳಿಸಿದ್ದಾನೆ. ನಂತರ ಆಕೆಯನ್ನು ಒದ್ದು ಮನೆಯ ಅಂಗಳಕ್ಕೆ ತಳ್ಳಿದ್ದಾನೆ. ಬಳಿಕ ಕಟ್ಟಿಗೆ ತಂದು ಅನುಷಾಳಿಗೆ ಹೊಡೆಯಲು ಶುರು ಮಾಡಿದ್ದಾನೆ. ಆಕೆ ನೆಲಕ್ಕೆ ಬೀಳುವವರೆಗೆ ಸುಮಾರು 6 ಬಾರಿ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ಡಿವೈಎಸ್ಪಿ ವಿವರಿಸಿದ್ದಾರೆ.

ಆಸ್ಪತ್ರೆಯಿಂದ ಬೈಕ್‌ನಲ್ಲಿ ಪರಮೇಶ್‌ನ ಮನೆ ತಲುಪಿದಾಗ, ಅನುಷಾ ಅಲ್ಲಿಂದ ಓಡಿ ಹೋಗಲು ನೋಡಿದ್ದಳು. ಆದರೆ, ಪರಮೇಶ್ ಆಕೆಯನ್ನು ವರಾಂಡಕ್ಕೆ ಎಳೆದೊಯ್ದಿದ್ದ. ನಂತರ ಆಕೆಯ ತಲೆಯನ್ನು ಬಾಗಿಲಿಗೆ ಬಡಿಯುವುದು, ಕಪಾಳಮೋಕ್ಷ ಮಾಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಹಿಂಸಿಸಿದ್ದಾನೆ. ಕೊನೆಗೆ ಕಟ್ಟಿಗೆಯಿಂದ ಆಕೆಗೆ ಹೊಡೆಯಲು ಪ್ರಾರಂಭಿಸಿದ್ದಾನೆ. ಇದನ್ನು ನೋಡಿದ ದಾರಿ ಹೋಕ ಮಹಿಳೆಯೊಬ್ಬರು ತಡೆಯಲು ಪ್ರಯತ್ನಿಸಿದ್ದರು. ಆದರೆ, ಅನುಷಾ ಕುಸಿದು ಬೀಳುವವರೆಗೆ ಪರಮೇಶ್ ಹೊಡೆಯುವುದನ್ನು ನಿಲ್ಲಿಸಿಲ್ಲ ಎಂದು ಡಿವೈಎಸ್ಪಿ ಹೇಳಿದ್ದಾರೆ.

ಘಟನೆಯ ದೃಶ್ಯಗಳು ಪರಮೇಶ್‌ನ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಹೇಳಿದ್ದಾರೆ.

ಮದುವೆಗೂ ಮುಂಚೆ ಕೆಲ ಸಮಯದಿಂದ ಅನುಷಾ ಮತ್ತು ಪರಮೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಮಾರ್ಚ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರ ಮದುವೆ ನಡೆದಿತ್ತು. ಮದುವೆ ಸಂದರ್ಭದಲ್ಲಿ 1.11 ಲಕ್ಷ ರೂಪಾಯಿ ಹಣ ಮತ್ತು ಇತರ ಕೆಲ ವಸ್ತುಗಳನ್ನು ವರದಕ್ಷಿಣೆಯಾಗಿ ಅನುಷಾಳ ಪೋಷಕರು ನೀಡಿದ್ದರು ಎಂದು ಡಿವೈಎಸ್ಪಿ ಮಾಹಿತಿ ನೀಡಿದ್ದಾರೆ.

ಮದುವೆಯಾಗಿ ಎರಡೇ ತಿಂಗಳಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಪರಮೇಶ್ ಅನುಷಾಳಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಕುಟುಂಬಕ್ಕೆ 10 ಎಕರೆ ಭೂಮಿ ಇದ್ದು, ಆರ್ಥಿಕ ವಿಚಾರದಲ್ಲಿ ಚೆನ್ನಾಗಿದ್ದಾರೆ. ಪರಮೇಶ್‌ನ ತಾಯಿ ಆಗಾಗ, “ಅನುಷಾಳ ಬದಲು ಬೇರೆ ಹುಡುಗಿಯನ್ನು ಮದುವೆಯಾಗಿದ್ದರೆ ಇನ್ನೂ ಹೆಚ್ಚಿನ ವರದಕ್ಷಿಣೆ ಸಿಗುತ್ತಿತ್ತು” ಎಂದು ಹೇಳುತ್ತಿದ್ದರು.

ಅನುಷಾಳ ಮೇಲೆ ಡಿಸೆಂಬರ್ 15ರಂದು ಹಲ್ಲೆ ನಡೆದಾಗ, ಆಸ್ಪತ್ರೆಯ ಅಧಿಕಾರಿಗಳು ಪೊಲೀಸ್ ದೂರು ನೀಡುವಂತೆ ಸಲಹೆ ಕೊಟ್ಟಿದ್ದರು. ಆದರೆ, ತನ್ನ ವೈವಾಹಿಕ ಜೀವನಕ್ಕೆ ಹೆಚ್ಚಿನ ಸಮಸ್ಯೆ ಆಗಬಹುದು ಎಂದು ಅನುಷಾ ದೂರು ನೀಡಲು ನಿರಾಕರಿಸಿದ್ದಳು ಎಂದು ಆಕೆಯ ತಾಯಿ ಮಾಧ್ಯಮಗಳಿಗೆ ಹೇಳಿದ್ದಾರೆ.

ವಿಕಾರಾಬಾದ್ ಪೊಲೀಸರು ಪರಮೇಶ್ ಮತ್ತು ಆತನ ಪೋಷಕರನ್ನು ಬಂಧಿಸಿದ್ದಾರೆ. ಪರಮೇಶ್ ವಿರುದ್ಧ ಕೊಲೆ, ವರದಕ್ಷಿಣೆ ಹತ್ಯೆ ಮತ್ತು ಮಹಿಳೆಯರ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...