Homeಮುಖಪುಟ36 ಲಕ್ಷ ರೂ. ವರದಕ್ಷಿಣೆ ತರುವಂತೆ ಮಹಿಳೆಗೆ ಬೆಂಕಿ ಹಚ್ಚಿ ಕೊಂದ ಗಂಡನ ಮನೆಯವರು!

36 ಲಕ್ಷ ರೂ. ವರದಕ್ಷಿಣೆ ತರುವಂತೆ ಮಹಿಳೆಗೆ ಬೆಂಕಿ ಹಚ್ಚಿ ಕೊಂದ ಗಂಡನ ಮನೆಯವರು!

- Advertisement -
- Advertisement -

ಬರೋಬ್ಬರಿ 36 ಲಕ್ಷ ರೂಪಾಯಿ ವರದಕ್ಷಿಣೆ ತರುವಂತೆ ಒತ್ತಾಯಿಸಿ 26 ವರ್ಷದ ಮಹಿಳೆಯೊಬ್ಬರಿಗೆ, ಆಕೆಯ ಗಂಡ ಮತ್ತು ಅತ್ತೆ-ಮಾವ ಕ್ರೂರವಾಗಿ ಹಲ್ಲೆ ನಡೆಸಿ ಬೆಂಕಿ ಹಚ್ಚಿರುವ ಭಯಾನಕ ಘಟನೆ ಗ್ರೇಟರ್ ನೋಯ್ಡಾದ ಸಿರ್ಸಾ ಗ್ರಾಮದಲ್ಲಿ ನಡೆದಿದೆ.

ದೌರ್ಜನ್ಯಕ್ಕೊಳಗಾದ ಮಹಿಳೆ ನಿಕ್ಕಿ ಶುಕ್ರವಾರ (ಆ.22) ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಸಣ್ಣ ಮಗ ಮತ್ತು ಅಕ್ಕನ ಮುಂದೆಯೇ ನಿಕ್ಕಿ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಗಳು ಹೇಳಿವೆ.

ಪಿಟಿಐ ವರದಿಯ ಪ್ರಕಾರ, ದೌರ್ಜನ್ಯವನ್ನು ಕಣ್ಣಾರೆ ಕಂಡ ನಿಕ್ಕಿ ಅವರ ಆರು ವರ್ಷದ ಮಗ “ಮೇರಿ ಮಮ್ಮ ಕೆ ಊಪರ್ ಕುಚ್ ದಾಲಾ, ಫಿರ್ ಉನ್ಕೋ ಚಾಂತ ಮಾರಾ ಫಿರ್ ಲೈಟರ್ ಸೆ ಆಗ್ ಲಗಾ ದಿ” (ಅವರು ನನ್ನ ತಾಯಿಯ ಮೇಲೆ ಏನೋ ಸುರಿದ್ರು, ಅವರಿಗೆ ಕಪಾಳಮೋಕ್ಷ ಮಾಡಿ, ಲೈಟರ್‌ನಿಂದ ಬೆಂಕಿ ಹಚ್ಚಿದರು) ಎಂದು ವರದಿಗಾರರಿಗೆ ತಿಳಿಸಿದ್ದಾನೆ.

ನಿಕ್ಕಿಯ ಮೈದುನನ್ನು ಮದುವೆಯಾದ ನಂತರ ಅದೇ ಕುಟುಂಬದ ಭಾಗವಾಗಿರುವ ಆಕೆಯ ಅಕ್ಕ ಕಾಂಚನ್ ಕೂಡ ಘಟನೆಯನ್ನು ವಿವರಿಸಿದ್ದು, 36 ಲಕ್ಷ ರೂ. ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ನಿಕ್ಕಿಯನ್ನು ಕೊಲ್ಲಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಗುರುವಾರ ರಾತ್ರಿ, ನಿಕ್ಕಿಯ ಪತಿ ವಿಪಿನ್ ಮತ್ತು ಅತ್ತೆ ಮಾವಂದಿರು ತೀವ್ರವಾಗಿ ಥಳಿಸಿ ಬೆಂಕಿ ಹಚ್ಚಿದರು. ವರದಕ್ಷಿಣೆಗಾಗಿ ಹಲವು ದಿನಗಳ ಕಾಲ ಅವರು ನಮ್ಮನ್ನು ಹಿಂಸಿಸಿದ್ದಾರೆ. ಅವರು ಆಕೆಯ ತಲೆ ಮತ್ತು ಕುತ್ತಿಗೆಗೆ ಹೊಡೆದು ಆಸಿಡ್ ಎರಚಿದ್ದಾರೆ. ಇತರ ಹಲವು ರೀತಿಯಲ್ಲಿ ನನ್ನ ಸಹೋದರಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ. ನನಗೂ ಕೂಡ ಥಳಿಸಿ ಪ್ರಜ್ಞಾಹೀನಳಾಗಿ ಮಾಡಿದ್ದರು” ಎಂದು ಕಾಂಚನ್ ಹೇಳಿದ್ದಾರೆ.

ವಿಪಿನ್ ಮರುಮದುವೆಯಾಗಲು ಬಯಸಿದ್ದ. ಅದಕ್ಕಾಗಿ ಅತ್ತೆ-ಮಾವಂದಿರು ನಿಕ್ಕಿಯನ್ನು ದೂರವಿಡಲು ಬಯಸಿದ್ದರು ಎಂದು ಕಾಂಚನ್ ಹೇಳಿಕೊಂಡಿದ್ದಾರೆ.

“ಆಗಸ್ಟ್ 21 ರಂದು, ಫೋರ್ಟಿಸ್ ಆಸ್ಪತ್ರೆಯಿಂದ ನಮಗೆ ಸುಟ್ಟ ಗಾಯಗಳೊಂದಿಗೆ ದಾಖಲಾಗಿರುವ ಮಹಿಳೆಯ ಬಗ್ಗೆ ಕರೆ ಬಂದಿತು. ನಂತರ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಯಿತು. ದುರದೃಷ್ಟವಶಾತ್, ನಾವು ತಲುಪುವ ಮೊದಲೇ ಅವರು ನಿಧನರಾದರು” ಎಂದು ಗ್ರೇಟರ್ ನೋಯ್ಡಾ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ) ಸುಧೀರ್ ಕುಮಾರ್ ಹೇಳಿದ್ದಾರೆ.

ಕಾಂಚನ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ನಿಕ್ಕಿಯ ಪತಿ ವಿಪಿನ್ ಅವರನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳನ್ನು ಪತ್ತೆಹಚ್ಚಲು ತಂಡಗಳನ್ನು ರಚಿಸಲಾಗಿದೆ ಎಂದಿದ್ದಾರೆ.

ಕೇರಳ| ಬುಡಕಟ್ಟು ವ್ಯಕ್ತಿಯನ್ನು ಐದು ದಿನಗಳ ಕಾಲ ಅಕ್ರಮವಾಗಿ ಬಂಧಿಸಿಟ್ಟ ಉದ್ಯೋಗದಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...