Homeಮುಖಪುಟ36 ಲಕ್ಷ ರೂ. ವರದಕ್ಷಿಣೆ ತರುವಂತೆ ಮಹಿಳೆಗೆ ಬೆಂಕಿ ಹಚ್ಚಿ ಕೊಂದ ಗಂಡನ ಮನೆಯವರು!

36 ಲಕ್ಷ ರೂ. ವರದಕ್ಷಿಣೆ ತರುವಂತೆ ಮಹಿಳೆಗೆ ಬೆಂಕಿ ಹಚ್ಚಿ ಕೊಂದ ಗಂಡನ ಮನೆಯವರು!

- Advertisement -
- Advertisement -

ಬರೋಬ್ಬರಿ 36 ಲಕ್ಷ ರೂಪಾಯಿ ವರದಕ್ಷಿಣೆ ತರುವಂತೆ ಒತ್ತಾಯಿಸಿ 26 ವರ್ಷದ ಮಹಿಳೆಯೊಬ್ಬರಿಗೆ, ಆಕೆಯ ಗಂಡ ಮತ್ತು ಅತ್ತೆ-ಮಾವ ಕ್ರೂರವಾಗಿ ಹಲ್ಲೆ ನಡೆಸಿ ಬೆಂಕಿ ಹಚ್ಚಿರುವ ಭಯಾನಕ ಘಟನೆ ಗ್ರೇಟರ್ ನೋಯ್ಡಾದ ಸಿರ್ಸಾ ಗ್ರಾಮದಲ್ಲಿ ನಡೆದಿದೆ.

ದೌರ್ಜನ್ಯಕ್ಕೊಳಗಾದ ಮಹಿಳೆ ನಿಕ್ಕಿ ಶುಕ್ರವಾರ (ಆ.22) ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಸಣ್ಣ ಮಗ ಮತ್ತು ಅಕ್ಕನ ಮುಂದೆಯೇ ನಿಕ್ಕಿ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಗಳು ಹೇಳಿವೆ.

ಪಿಟಿಐ ವರದಿಯ ಪ್ರಕಾರ, ದೌರ್ಜನ್ಯವನ್ನು ಕಣ್ಣಾರೆ ಕಂಡ ನಿಕ್ಕಿ ಅವರ ಆರು ವರ್ಷದ ಮಗ “ಮೇರಿ ಮಮ್ಮ ಕೆ ಊಪರ್ ಕುಚ್ ದಾಲಾ, ಫಿರ್ ಉನ್ಕೋ ಚಾಂತ ಮಾರಾ ಫಿರ್ ಲೈಟರ್ ಸೆ ಆಗ್ ಲಗಾ ದಿ” (ಅವರು ನನ್ನ ತಾಯಿಯ ಮೇಲೆ ಏನೋ ಸುರಿದ್ರು, ಅವರಿಗೆ ಕಪಾಳಮೋಕ್ಷ ಮಾಡಿ, ಲೈಟರ್‌ನಿಂದ ಬೆಂಕಿ ಹಚ್ಚಿದರು) ಎಂದು ವರದಿಗಾರರಿಗೆ ತಿಳಿಸಿದ್ದಾನೆ.

ನಿಕ್ಕಿಯ ಮೈದುನನ್ನು ಮದುವೆಯಾದ ನಂತರ ಅದೇ ಕುಟುಂಬದ ಭಾಗವಾಗಿರುವ ಆಕೆಯ ಅಕ್ಕ ಕಾಂಚನ್ ಕೂಡ ಘಟನೆಯನ್ನು ವಿವರಿಸಿದ್ದು, 36 ಲಕ್ಷ ರೂ. ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ನಿಕ್ಕಿಯನ್ನು ಕೊಲ್ಲಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಗುರುವಾರ ರಾತ್ರಿ, ನಿಕ್ಕಿಯ ಪತಿ ವಿಪಿನ್ ಮತ್ತು ಅತ್ತೆ ಮಾವಂದಿರು ತೀವ್ರವಾಗಿ ಥಳಿಸಿ ಬೆಂಕಿ ಹಚ್ಚಿದರು. ವರದಕ್ಷಿಣೆಗಾಗಿ ಹಲವು ದಿನಗಳ ಕಾಲ ಅವರು ನಮ್ಮನ್ನು ಹಿಂಸಿಸಿದ್ದಾರೆ. ಅವರು ಆಕೆಯ ತಲೆ ಮತ್ತು ಕುತ್ತಿಗೆಗೆ ಹೊಡೆದು ಆಸಿಡ್ ಎರಚಿದ್ದಾರೆ. ಇತರ ಹಲವು ರೀತಿಯಲ್ಲಿ ನನ್ನ ಸಹೋದರಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ. ನನಗೂ ಕೂಡ ಥಳಿಸಿ ಪ್ರಜ್ಞಾಹೀನಳಾಗಿ ಮಾಡಿದ್ದರು” ಎಂದು ಕಾಂಚನ್ ಹೇಳಿದ್ದಾರೆ.

ವಿಪಿನ್ ಮರುಮದುವೆಯಾಗಲು ಬಯಸಿದ್ದ. ಅದಕ್ಕಾಗಿ ಅತ್ತೆ-ಮಾವಂದಿರು ನಿಕ್ಕಿಯನ್ನು ದೂರವಿಡಲು ಬಯಸಿದ್ದರು ಎಂದು ಕಾಂಚನ್ ಹೇಳಿಕೊಂಡಿದ್ದಾರೆ.

“ಆಗಸ್ಟ್ 21 ರಂದು, ಫೋರ್ಟಿಸ್ ಆಸ್ಪತ್ರೆಯಿಂದ ನಮಗೆ ಸುಟ್ಟ ಗಾಯಗಳೊಂದಿಗೆ ದಾಖಲಾಗಿರುವ ಮಹಿಳೆಯ ಬಗ್ಗೆ ಕರೆ ಬಂದಿತು. ನಂತರ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಯಿತು. ದುರದೃಷ್ಟವಶಾತ್, ನಾವು ತಲುಪುವ ಮೊದಲೇ ಅವರು ನಿಧನರಾದರು” ಎಂದು ಗ್ರೇಟರ್ ನೋಯ್ಡಾ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ) ಸುಧೀರ್ ಕುಮಾರ್ ಹೇಳಿದ್ದಾರೆ.

ಕಾಂಚನ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ನಿಕ್ಕಿಯ ಪತಿ ವಿಪಿನ್ ಅವರನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳನ್ನು ಪತ್ತೆಹಚ್ಚಲು ತಂಡಗಳನ್ನು ರಚಿಸಲಾಗಿದೆ ಎಂದಿದ್ದಾರೆ.

ಕೇರಳ| ಬುಡಕಟ್ಟು ವ್ಯಕ್ತಿಯನ್ನು ಐದು ದಿನಗಳ ಕಾಲ ಅಕ್ರಮವಾಗಿ ಬಂಧಿಸಿಟ್ಟ ಉದ್ಯೋಗದಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...