Homeಮುಖಪುಟಹೈದರಾಬಾದ್: ಬಾಲಕಿ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬೆಳಕಿಗೆ ಬಂದ ಮತ್ತಷ್ಟು ಕೇಸ್‌ಗಳು

ಹೈದರಾಬಾದ್: ಬಾಲಕಿ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬೆಳಕಿಗೆ ಬಂದ ಮತ್ತಷ್ಟು ಕೇಸ್‌ಗಳು

ಜುಬ್ಲಿ ಹಿಲ್ಸ್ ಪ್ರಕರಣದ ಬಳಿಕ ಈವರೆಗೆ 4 ಅಪ್ರಾಪ್ತೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ

- Advertisement -
- Advertisement -

ಇತ್ತೀಚೆಗೆ ಹೈದರಾಬಾದ್‌ನ ಜುಬ್ಲಿ ಹಿಲ್ಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ದೇಶದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮತ್ತಷ್ಟು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇಲ್ಲಿಯವರೆಗೆ ಒಟ್ಟು ನಾಲ್ಕು ಅಪ್ರಾಪ್ತೆಯರ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ.

ಮೇ 31 ರಂದು ನಡೆದಿದ್ದ ಎರಡು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಇಂದು ಮತ್ತೆರಡು ಪ್ರಕರಣ ಬೆಳಕಿಗೆ ಬಂದಿದ್ದು, ಅಪ್ರಾಪ್ತ ವಯಸ್ಕರಲ್ಲಿಯ ಇಂತಹ ಸಾಮೂಹಿಕ ಅತ್ಯಾಚಾರದ ವಿಕೃತಿ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಅನಾಥಾಶ್ರಮದಲ್ಲಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಏಪ್ರಿಲ್ 22 ರಂದು ಕಾರಿನಲ್ಲಿ ಅತ್ಯಾಚಾರವೆಸಗಲಾಗಿದ್ದು, ಇದೀಗ ಈ ಘಟನೆ ಬೆಳಕಿಗೆ ಬಂದಿದೆ. 16 ವರ್ಷದ ಬಾಲಕಿಯೊಬ್ಬರು ಹುಟ್ಟುಹಬ್ಬ ಆಚರಿಸಲು ಹೋಗಿದ್ದಾಗ ಏಕಾಂತದಲ್ಲಿ ಮಾತನಾಡುವ ನೆಪದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪೋಟೋ ಸ್ಟುಡಿಯೋದಲ್ಲಿ ಕೆಲಸ ಮಾಡುವ 23 ವರ್ಷದ ಆರೋಪಿ ಸುರೇಶ್ ಎಂಬಾತನನ್ನು ಬಂಧಿಸಲಾಗಿದ್ದು, ರಾಮಗೋಪಾಲಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಬಾಲಕಿಯು ತನ್ನ ಮೇಲೆ ಥಿಯೇಟರ್‌ನಲ್ಲಿ ಅತ್ಯಾಚಾರವೆಸಗಲಾಗಿದೆ ಎಂದು ಆರೋಪಿಸಿದ್ದಾರೆ. ಅಪ್ರಾಪ್ತ ಬಾಲಕಿಗೆ ಸಿನಿಮಾ ತೋರಿಸುವ ಆಮಿಷವೊಡ್ಡಿ ಅತ್ಯಾಚಾರ ಮಾಡಿದ್ದಾನೆ. ಆರೋಪಿಯೂ ಅಪ್ರಾಪ್ತ ವಯಸ್ಕನಾಗಿದ್ದು, ಕೆಲ ತಿಂಗಳಿಂದ ಬಾಲಕಿಯೊಂದಿಗೆ ಸಂಪರ್ಕದಲ್ಲಿದ್ದ. ಘಟನೆ ಒಂದು ತಿಂಗಳ ಹಿಂದೆ ನಡೆದಿದ್ದು, ರಾಜೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಇನ್ನು ಅಜ್ಜಿ ಮನೆಗೆ ಹೋಗುತ್ತಿದ್ದ 12 ವರ್ಷದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮೇ 31 ರಂದು ಈ ಘಟನೆ ನಡೆದಿದ್ದು, ಬಾಲಕಿ ಕಾಣೆಯಾಗಿದ್ದಳು. ಜೂನ್ 1 ರಂದು ಸುಲ್ತಾನ್‌ಶಾಹಿ ಪ್ರದೇಶದಲ್ಲಿ ಪೊಲೀಸರಿಗೆ ಸಿಕ್ಕಿದ್ದರು. ಕ್ಯಾಬ್ ಚಾಲಕ ಆಕೆಯನ್ನು ಕೊಂಡೂರ್ಗ್‌ನಲ್ಲಿರುವ ಸ್ನೇಹಿತನ ಮನೆಗೆ ಕರೆದೊಯ್ದು ಅಲ್ಲಿ ಇಬ್ಬರೂ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಇಬ್ಬರು ಆರೋಪಿಗಳಾದ ಕ್ಯಾಬ್ ಚಾಲಕ ಶೇಕ್ ಕಲೀಮ್ ಅಲಿ (36) ಮತ್ತು ಮೊಹಮ್ಮದ್ ಲುಕ್ಮಾನ್ ಅಹ್ಮದ್ (36) ಅವರನ್ನು ಬಂಧಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಉದ್ಯೋಗಿಯಾಗಿರುವ ಸೂಫಿಯಾನ್ (21) ಎಂಬಾತ ಚಾರ್ಮಿನಾರ್‌ನ ಜವಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುವ ಬಾಲಕಿಗೆ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಹುಡುಕಲಾಗುತ್ತಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಸುದರ್ಶನ್ ಹೇಳಿದ್ದರು.

ಮೇ 28 ರಂದು ಹೈದರಾಬಾದ್‌ನ ಜುಬ್ಲಿ ಹಿಲ್ಸ್‌ ಪ್ರದೇಶದಲ್ಲಿ ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದಾಗ 17 ವರ್ಷದ ಬಾಲಕಿಯ ಮೇಲೆ ರಾಜಕೀಯ ಕುಟುಂಬಗಳ ಅಪ್ರಾಪ್ತ ವಯಸ್ಕರು ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈ ಘಟನೆ ರಾಜಕೀಯ ಕೆಸರೆರಚಾಟಕ್ಕೂ ತಿರುಗಿದೆ.

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.


ಇದನ್ನೂ ಓದಿ: ಹೈದರಾಬಾದ್: ಮತ್ತಿಬ್ಬರು ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...