Homeಮುಖಪುಟಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

ಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

- Advertisement -
- Advertisement -

ಆಯನ್ಸ್ ಗುಪ್ತಾ ಹೆಸರಿನ ಮೂರು ವರ್ಷದ ಮಗುವಿಗೆ ಅಪರೂಪದ ಬೆನ್ನುಮೂಳೆಯ ಸ್ನಾಯು ಕ್ಷೀಣತೆ (spinal muscular atrophy) ಎಂಬ ರೋಗ ಕಾಡುತ್ತಿತ್ತು. ಅದರ ಜೀನ್ ಥೆರಪಿ ಚಿಕಿತ್ಸೆಗೆ 16 ಕೋಟಿ ರೂ ಬೆಲೆಯ ಇಂಜೆಕ್ಷನ್ ಅಗತ್ಯವಿತ್ತು. ಆ ಮಗುವಿನ ಪೋಷಕರು ಕ್ರೌಡ್ ಫಂಡಿಂಗ್‌ನಲ್ಲಿ ಮನವಿ ಮಾಡಿದಾಗ 62,000 ಜನರು ದೇಣಿಗೆ ನೀಡಿದ್ದರ ಪರಿಣಾಮವಾಗಿ 16 ಕೋಟಿ ರೂ ಸಂಗ್ರಹವಾಯಿತು. ಕೊನೆಗೂ ವಿಶ್ವದ ಅತಿ ದುಬಾರಿ ಇಂಜೆಕ್ಷನ್ ಅನ್ನು ಆ ಮಗು ಪಡೆಯಿತು…

ಇದೆಲ್ಲವೂ ನಡೆದಿದ್ದು ಹೈದರಾಬಾದ್‌ನಲ್ಲಿ. ಅಲ್ಲಿನ ರೈನ್ಬೊ ಚಿಲ್ಡ್ರನ್ಸ್ ಹಾಸ್ಪಿಟಲ್‌ನಲ್ಲಿ ಜೂನ್ 09 ರಂದು ಆಯನ್ಸ್ ಝೊಲ್ಗೆನ್ಸ್ಮ ಎಂಬ ಔಷಧಿಯನ್ನು ಅಮೆರಿಕದಿಂದ ಆಮದು ಮಾಡಿಕೊಂಡು ನೀಡಲಾಯಿತು. ಪೋಷಕರಾದ ಯೋಗೇಶ್ ಗುಪ್ತಾ ಮತ್ತು ರುಪಾಲ್ ಗುಪ್ತಾ ಮೊದಲಿಗೆ ಅಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಕಷ್ಟ ಎಂದುಕೊಂಡಿದ್ದರು. ಆದರೆ ImpactGuru.com ಮೂಲಕ ಈ ವರ್ಷದ ಫೆಬ್ರವರಿಯಿಂದ ಕ್ರೌಡ್ ಫಂಡಿಂಗ್‌ಗೆ ಮನವಿ ಮಾಡಿದರು. ಜೂನ್‌ ವೇಳೆಗೆ ಹಣ ಸಂಗ್ರಹವಾಗಿ ಚಿಕಿತ್ಸೆಗೆ ಸಹಕಾರಿಯಾಯಿತು.

“62,450 ದೇಣಿಗೆ ನೀಡಿದ್ದಾರೆ. ದಾನಿಯೊಬ್ಬರು 56 ಲಕ್ಷ ನೀಡಿದ್ದಾರೆ. ವಿಶ್ವದ ದುಬಾರಿ ಔಷಧಿಯನ್ನು ನನ್ನ ಮಗನಿಗೆ ನೀಡಿ ಆತನನ್ನು ಬದುಕಿಸಲು ನೆರವಾದ ಎಲ್ಲಾ ದಾನಿಗಳಿಗೆ ನಾವು ಋಣಿಯಾಗಿದ್ದೇವೆ” ಎಂದು ಯೋಗೇಶ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕ ಶರ್ಮಾ, ಅನಿಲ್ ಕಪೂರ್, ಅಜಯ್ ದೇವಗನ್, ಧರ್ಮ ಪ್ರೊಡಕ್ಷನ್, ಟಿ-ಸೀರಿಸ್, ಸಿಪ್ಲಾ ಸೇರಿದಂತೆ ಹಲವಾರು ಜನ ದೇಣಿಗೆ ನೀಡುವ ಮೂಲಕ ಬೆಂಬಲ ನೀಡಿದ್ದರು.

ಬೆನ್ನುಮೂಳೆಯ ಸ್ನಾಯು ಕ್ಷೀಣತೆಯು ಎಸ್‌ಎಂಎನ್ 1 ಜೀನ್‌ನಲ್ಲಿನ ದೋಷದಿಂದಾಗಿ ಉಂಟಾಗುವ ಕಾಯಿಲೆಯಾಗಿದೆ. ಪೀಡಿತ ಮಕ್ಕಳು ಆರಂಭದಲ್ಲಿ ಮೇಲಿನ ಮತ್ತು ಕೆಳಗಿನ ಕಾಲುಗಳನ್ನು ಒಳಗೊಂಡ ಸ್ನಾಯು ದೌರ್ಬಲ್ಯವನ್ನು ಹೊಂದುತ್ತಾರೆ. ಈ ಎಸ್‌ಎಂಎ ಸಾಮಾನ್ಯವಾಗಿ 10,000 ಮಕ್ಕಳಲ್ಲಿ ಒಬ್ಬರ ಮೇಲೆ ಪರಿಣಾಮ ಬೀರುತ್ತದೆ, ಮತ್ತು ಪ್ರಸ್ತುತ ಭಾರತದಲ್ಲಿ ಸುಮಾರು 800 ಮಕ್ಕಳು ಎಸ್‌ಎಂಎಯಿಂದ ಬಳಲುತ್ತಿದ್ದಾರೆ.

ಝೊಲ್ಗೆನ್ಸ್ಮ ಒಂದೇ ಡೋಸ್ ಇಂಟ್ರಾವೆನಸ್ ಇಂಜೆಕ್ಷನ್ ಜೀನ್ ಚಿಕಿತ್ಸೆಯಾಗಿದೆ. 16 ಕೋಟಿ ರೂ.ಗಳ ಬೆಲೆಯ ಹೊರತಾಗಿ, ಕೇಂದ್ರೀಯ ಹಣಕಾಸು ಸಚಿವಾಲಯವು ಮಾನವೀಯ ಆಧಾರದ ಮೇಲೆ ಈ ಔಷಧದ ಮೇಲೆ ಸುಮಾರು 6 ಕೋಟಿ ಮೌಲ್ಯದ ಆಮದು ತೆರಿಗೆಯನ್ನು ಮನ್ನಾ ಮಾಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.


ಇದನ್ನೂ ಓದಿ: ನಿಮ್ಮ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸಪ್ತಪದಿ ತುಳಿಯಿರಿ: ಇದು ತಮಾಷೆಯಲ್ಲ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...