Homeಮುಖಪುಟಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

ಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

- Advertisement -
- Advertisement -

ಆಯನ್ಸ್ ಗುಪ್ತಾ ಹೆಸರಿನ ಮೂರು ವರ್ಷದ ಮಗುವಿಗೆ ಅಪರೂಪದ ಬೆನ್ನುಮೂಳೆಯ ಸ್ನಾಯು ಕ್ಷೀಣತೆ (spinal muscular atrophy) ಎಂಬ ರೋಗ ಕಾಡುತ್ತಿತ್ತು. ಅದರ ಜೀನ್ ಥೆರಪಿ ಚಿಕಿತ್ಸೆಗೆ 16 ಕೋಟಿ ರೂ ಬೆಲೆಯ ಇಂಜೆಕ್ಷನ್ ಅಗತ್ಯವಿತ್ತು. ಆ ಮಗುವಿನ ಪೋಷಕರು ಕ್ರೌಡ್ ಫಂಡಿಂಗ್‌ನಲ್ಲಿ ಮನವಿ ಮಾಡಿದಾಗ 62,000 ಜನರು ದೇಣಿಗೆ ನೀಡಿದ್ದರ ಪರಿಣಾಮವಾಗಿ 16 ಕೋಟಿ ರೂ ಸಂಗ್ರಹವಾಯಿತು. ಕೊನೆಗೂ ವಿಶ್ವದ ಅತಿ ದುಬಾರಿ ಇಂಜೆಕ್ಷನ್ ಅನ್ನು ಆ ಮಗು ಪಡೆಯಿತು…

ಇದೆಲ್ಲವೂ ನಡೆದಿದ್ದು ಹೈದರಾಬಾದ್‌ನಲ್ಲಿ. ಅಲ್ಲಿನ ರೈನ್ಬೊ ಚಿಲ್ಡ್ರನ್ಸ್ ಹಾಸ್ಪಿಟಲ್‌ನಲ್ಲಿ ಜೂನ್ 09 ರಂದು ಆಯನ್ಸ್ ಝೊಲ್ಗೆನ್ಸ್ಮ ಎಂಬ ಔಷಧಿಯನ್ನು ಅಮೆರಿಕದಿಂದ ಆಮದು ಮಾಡಿಕೊಂಡು ನೀಡಲಾಯಿತು. ಪೋಷಕರಾದ ಯೋಗೇಶ್ ಗುಪ್ತಾ ಮತ್ತು ರುಪಾಲ್ ಗುಪ್ತಾ ಮೊದಲಿಗೆ ಅಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಕಷ್ಟ ಎಂದುಕೊಂಡಿದ್ದರು. ಆದರೆ ImpactGuru.com ಮೂಲಕ ಈ ವರ್ಷದ ಫೆಬ್ರವರಿಯಿಂದ ಕ್ರೌಡ್ ಫಂಡಿಂಗ್‌ಗೆ ಮನವಿ ಮಾಡಿದರು. ಜೂನ್‌ ವೇಳೆಗೆ ಹಣ ಸಂಗ್ರಹವಾಗಿ ಚಿಕಿತ್ಸೆಗೆ ಸಹಕಾರಿಯಾಯಿತು.

“62,450 ದೇಣಿಗೆ ನೀಡಿದ್ದಾರೆ. ದಾನಿಯೊಬ್ಬರು 56 ಲಕ್ಷ ನೀಡಿದ್ದಾರೆ. ವಿಶ್ವದ ದುಬಾರಿ ಔಷಧಿಯನ್ನು ನನ್ನ ಮಗನಿಗೆ ನೀಡಿ ಆತನನ್ನು ಬದುಕಿಸಲು ನೆರವಾದ ಎಲ್ಲಾ ದಾನಿಗಳಿಗೆ ನಾವು ಋಣಿಯಾಗಿದ್ದೇವೆ” ಎಂದು ಯೋಗೇಶ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕ ಶರ್ಮಾ, ಅನಿಲ್ ಕಪೂರ್, ಅಜಯ್ ದೇವಗನ್, ಧರ್ಮ ಪ್ರೊಡಕ್ಷನ್, ಟಿ-ಸೀರಿಸ್, ಸಿಪ್ಲಾ ಸೇರಿದಂತೆ ಹಲವಾರು ಜನ ದೇಣಿಗೆ ನೀಡುವ ಮೂಲಕ ಬೆಂಬಲ ನೀಡಿದ್ದರು.

ಬೆನ್ನುಮೂಳೆಯ ಸ್ನಾಯು ಕ್ಷೀಣತೆಯು ಎಸ್‌ಎಂಎನ್ 1 ಜೀನ್‌ನಲ್ಲಿನ ದೋಷದಿಂದಾಗಿ ಉಂಟಾಗುವ ಕಾಯಿಲೆಯಾಗಿದೆ. ಪೀಡಿತ ಮಕ್ಕಳು ಆರಂಭದಲ್ಲಿ ಮೇಲಿನ ಮತ್ತು ಕೆಳಗಿನ ಕಾಲುಗಳನ್ನು ಒಳಗೊಂಡ ಸ್ನಾಯು ದೌರ್ಬಲ್ಯವನ್ನು ಹೊಂದುತ್ತಾರೆ. ಈ ಎಸ್‌ಎಂಎ ಸಾಮಾನ್ಯವಾಗಿ 10,000 ಮಕ್ಕಳಲ್ಲಿ ಒಬ್ಬರ ಮೇಲೆ ಪರಿಣಾಮ ಬೀರುತ್ತದೆ, ಮತ್ತು ಪ್ರಸ್ತುತ ಭಾರತದಲ್ಲಿ ಸುಮಾರು 800 ಮಕ್ಕಳು ಎಸ್‌ಎಂಎಯಿಂದ ಬಳಲುತ್ತಿದ್ದಾರೆ.

ಝೊಲ್ಗೆನ್ಸ್ಮ ಒಂದೇ ಡೋಸ್ ಇಂಟ್ರಾವೆನಸ್ ಇಂಜೆಕ್ಷನ್ ಜೀನ್ ಚಿಕಿತ್ಸೆಯಾಗಿದೆ. 16 ಕೋಟಿ ರೂ.ಗಳ ಬೆಲೆಯ ಹೊರತಾಗಿ, ಕೇಂದ್ರೀಯ ಹಣಕಾಸು ಸಚಿವಾಲಯವು ಮಾನವೀಯ ಆಧಾರದ ಮೇಲೆ ಈ ಔಷಧದ ಮೇಲೆ ಸುಮಾರು 6 ಕೋಟಿ ಮೌಲ್ಯದ ಆಮದು ತೆರಿಗೆಯನ್ನು ಮನ್ನಾ ಮಾಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.


ಇದನ್ನೂ ಓದಿ: ನಿಮ್ಮ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸಪ್ತಪದಿ ತುಳಿಯಿರಿ: ಇದು ತಮಾಷೆಯಲ್ಲ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...