Homeಮುಖಪುಟಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

ಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

- Advertisement -
- Advertisement -

ಆಯನ್ಸ್ ಗುಪ್ತಾ ಹೆಸರಿನ ಮೂರು ವರ್ಷದ ಮಗುವಿಗೆ ಅಪರೂಪದ ಬೆನ್ನುಮೂಳೆಯ ಸ್ನಾಯು ಕ್ಷೀಣತೆ (spinal muscular atrophy) ಎಂಬ ರೋಗ ಕಾಡುತ್ತಿತ್ತು. ಅದರ ಜೀನ್ ಥೆರಪಿ ಚಿಕಿತ್ಸೆಗೆ 16 ಕೋಟಿ ರೂ ಬೆಲೆಯ ಇಂಜೆಕ್ಷನ್ ಅಗತ್ಯವಿತ್ತು. ಆ ಮಗುವಿನ ಪೋಷಕರು ಕ್ರೌಡ್ ಫಂಡಿಂಗ್‌ನಲ್ಲಿ ಮನವಿ ಮಾಡಿದಾಗ 62,000 ಜನರು ದೇಣಿಗೆ ನೀಡಿದ್ದರ ಪರಿಣಾಮವಾಗಿ 16 ಕೋಟಿ ರೂ ಸಂಗ್ರಹವಾಯಿತು. ಕೊನೆಗೂ ವಿಶ್ವದ ಅತಿ ದುಬಾರಿ ಇಂಜೆಕ್ಷನ್ ಅನ್ನು ಆ ಮಗು ಪಡೆಯಿತು…

ಇದೆಲ್ಲವೂ ನಡೆದಿದ್ದು ಹೈದರಾಬಾದ್‌ನಲ್ಲಿ. ಅಲ್ಲಿನ ರೈನ್ಬೊ ಚಿಲ್ಡ್ರನ್ಸ್ ಹಾಸ್ಪಿಟಲ್‌ನಲ್ಲಿ ಜೂನ್ 09 ರಂದು ಆಯನ್ಸ್ ಝೊಲ್ಗೆನ್ಸ್ಮ ಎಂಬ ಔಷಧಿಯನ್ನು ಅಮೆರಿಕದಿಂದ ಆಮದು ಮಾಡಿಕೊಂಡು ನೀಡಲಾಯಿತು. ಪೋಷಕರಾದ ಯೋಗೇಶ್ ಗುಪ್ತಾ ಮತ್ತು ರುಪಾಲ್ ಗುಪ್ತಾ ಮೊದಲಿಗೆ ಅಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಕಷ್ಟ ಎಂದುಕೊಂಡಿದ್ದರು. ಆದರೆ ImpactGuru.com ಮೂಲಕ ಈ ವರ್ಷದ ಫೆಬ್ರವರಿಯಿಂದ ಕ್ರೌಡ್ ಫಂಡಿಂಗ್‌ಗೆ ಮನವಿ ಮಾಡಿದರು. ಜೂನ್‌ ವೇಳೆಗೆ ಹಣ ಸಂಗ್ರಹವಾಗಿ ಚಿಕಿತ್ಸೆಗೆ ಸಹಕಾರಿಯಾಯಿತು.

“62,450 ದೇಣಿಗೆ ನೀಡಿದ್ದಾರೆ. ದಾನಿಯೊಬ್ಬರು 56 ಲಕ್ಷ ನೀಡಿದ್ದಾರೆ. ವಿಶ್ವದ ದುಬಾರಿ ಔಷಧಿಯನ್ನು ನನ್ನ ಮಗನಿಗೆ ನೀಡಿ ಆತನನ್ನು ಬದುಕಿಸಲು ನೆರವಾದ ಎಲ್ಲಾ ದಾನಿಗಳಿಗೆ ನಾವು ಋಣಿಯಾಗಿದ್ದೇವೆ” ಎಂದು ಯೋಗೇಶ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕ ಶರ್ಮಾ, ಅನಿಲ್ ಕಪೂರ್, ಅಜಯ್ ದೇವಗನ್, ಧರ್ಮ ಪ್ರೊಡಕ್ಷನ್, ಟಿ-ಸೀರಿಸ್, ಸಿಪ್ಲಾ ಸೇರಿದಂತೆ ಹಲವಾರು ಜನ ದೇಣಿಗೆ ನೀಡುವ ಮೂಲಕ ಬೆಂಬಲ ನೀಡಿದ್ದರು.

ಬೆನ್ನುಮೂಳೆಯ ಸ್ನಾಯು ಕ್ಷೀಣತೆಯು ಎಸ್‌ಎಂಎನ್ 1 ಜೀನ್‌ನಲ್ಲಿನ ದೋಷದಿಂದಾಗಿ ಉಂಟಾಗುವ ಕಾಯಿಲೆಯಾಗಿದೆ. ಪೀಡಿತ ಮಕ್ಕಳು ಆರಂಭದಲ್ಲಿ ಮೇಲಿನ ಮತ್ತು ಕೆಳಗಿನ ಕಾಲುಗಳನ್ನು ಒಳಗೊಂಡ ಸ್ನಾಯು ದೌರ್ಬಲ್ಯವನ್ನು ಹೊಂದುತ್ತಾರೆ. ಈ ಎಸ್‌ಎಂಎ ಸಾಮಾನ್ಯವಾಗಿ 10,000 ಮಕ್ಕಳಲ್ಲಿ ಒಬ್ಬರ ಮೇಲೆ ಪರಿಣಾಮ ಬೀರುತ್ತದೆ, ಮತ್ತು ಪ್ರಸ್ತುತ ಭಾರತದಲ್ಲಿ ಸುಮಾರು 800 ಮಕ್ಕಳು ಎಸ್‌ಎಂಎಯಿಂದ ಬಳಲುತ್ತಿದ್ದಾರೆ.

ಝೊಲ್ಗೆನ್ಸ್ಮ ಒಂದೇ ಡೋಸ್ ಇಂಟ್ರಾವೆನಸ್ ಇಂಜೆಕ್ಷನ್ ಜೀನ್ ಚಿಕಿತ್ಸೆಯಾಗಿದೆ. 16 ಕೋಟಿ ರೂ.ಗಳ ಬೆಲೆಯ ಹೊರತಾಗಿ, ಕೇಂದ್ರೀಯ ಹಣಕಾಸು ಸಚಿವಾಲಯವು ಮಾನವೀಯ ಆಧಾರದ ಮೇಲೆ ಈ ಔಷಧದ ಮೇಲೆ ಸುಮಾರು 6 ಕೋಟಿ ಮೌಲ್ಯದ ಆಮದು ತೆರಿಗೆಯನ್ನು ಮನ್ನಾ ಮಾಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.


ಇದನ್ನೂ ಓದಿ: ನಿಮ್ಮ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸಪ್ತಪದಿ ತುಳಿಯಿರಿ: ಇದು ತಮಾಷೆಯಲ್ಲ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...