Homeಮುಖಪುಟಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

ಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

- Advertisement -
- Advertisement -

ಆಯನ್ಸ್ ಗುಪ್ತಾ ಹೆಸರಿನ ಮೂರು ವರ್ಷದ ಮಗುವಿಗೆ ಅಪರೂಪದ ಬೆನ್ನುಮೂಳೆಯ ಸ್ನಾಯು ಕ್ಷೀಣತೆ (spinal muscular atrophy) ಎಂಬ ರೋಗ ಕಾಡುತ್ತಿತ್ತು. ಅದರ ಜೀನ್ ಥೆರಪಿ ಚಿಕಿತ್ಸೆಗೆ 16 ಕೋಟಿ ರೂ ಬೆಲೆಯ ಇಂಜೆಕ್ಷನ್ ಅಗತ್ಯವಿತ್ತು. ಆ ಮಗುವಿನ ಪೋಷಕರು ಕ್ರೌಡ್ ಫಂಡಿಂಗ್‌ನಲ್ಲಿ ಮನವಿ ಮಾಡಿದಾಗ 62,000 ಜನರು ದೇಣಿಗೆ ನೀಡಿದ್ದರ ಪರಿಣಾಮವಾಗಿ 16 ಕೋಟಿ ರೂ ಸಂಗ್ರಹವಾಯಿತು. ಕೊನೆಗೂ ವಿಶ್ವದ ಅತಿ ದುಬಾರಿ ಇಂಜೆಕ್ಷನ್ ಅನ್ನು ಆ ಮಗು ಪಡೆಯಿತು…

ಇದೆಲ್ಲವೂ ನಡೆದಿದ್ದು ಹೈದರಾಬಾದ್‌ನಲ್ಲಿ. ಅಲ್ಲಿನ ರೈನ್ಬೊ ಚಿಲ್ಡ್ರನ್ಸ್ ಹಾಸ್ಪಿಟಲ್‌ನಲ್ಲಿ ಜೂನ್ 09 ರಂದು ಆಯನ್ಸ್ ಝೊಲ್ಗೆನ್ಸ್ಮ ಎಂಬ ಔಷಧಿಯನ್ನು ಅಮೆರಿಕದಿಂದ ಆಮದು ಮಾಡಿಕೊಂಡು ನೀಡಲಾಯಿತು. ಪೋಷಕರಾದ ಯೋಗೇಶ್ ಗುಪ್ತಾ ಮತ್ತು ರುಪಾಲ್ ಗುಪ್ತಾ ಮೊದಲಿಗೆ ಅಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಕಷ್ಟ ಎಂದುಕೊಂಡಿದ್ದರು. ಆದರೆ ImpactGuru.com ಮೂಲಕ ಈ ವರ್ಷದ ಫೆಬ್ರವರಿಯಿಂದ ಕ್ರೌಡ್ ಫಂಡಿಂಗ್‌ಗೆ ಮನವಿ ಮಾಡಿದರು. ಜೂನ್‌ ವೇಳೆಗೆ ಹಣ ಸಂಗ್ರಹವಾಗಿ ಚಿಕಿತ್ಸೆಗೆ ಸಹಕಾರಿಯಾಯಿತು.

“62,450 ದೇಣಿಗೆ ನೀಡಿದ್ದಾರೆ. ದಾನಿಯೊಬ್ಬರು 56 ಲಕ್ಷ ನೀಡಿದ್ದಾರೆ. ವಿಶ್ವದ ದುಬಾರಿ ಔಷಧಿಯನ್ನು ನನ್ನ ಮಗನಿಗೆ ನೀಡಿ ಆತನನ್ನು ಬದುಕಿಸಲು ನೆರವಾದ ಎಲ್ಲಾ ದಾನಿಗಳಿಗೆ ನಾವು ಋಣಿಯಾಗಿದ್ದೇವೆ” ಎಂದು ಯೋಗೇಶ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕ ಶರ್ಮಾ, ಅನಿಲ್ ಕಪೂರ್, ಅಜಯ್ ದೇವಗನ್, ಧರ್ಮ ಪ್ರೊಡಕ್ಷನ್, ಟಿ-ಸೀರಿಸ್, ಸಿಪ್ಲಾ ಸೇರಿದಂತೆ ಹಲವಾರು ಜನ ದೇಣಿಗೆ ನೀಡುವ ಮೂಲಕ ಬೆಂಬಲ ನೀಡಿದ್ದರು.

ಬೆನ್ನುಮೂಳೆಯ ಸ್ನಾಯು ಕ್ಷೀಣತೆಯು ಎಸ್‌ಎಂಎನ್ 1 ಜೀನ್‌ನಲ್ಲಿನ ದೋಷದಿಂದಾಗಿ ಉಂಟಾಗುವ ಕಾಯಿಲೆಯಾಗಿದೆ. ಪೀಡಿತ ಮಕ್ಕಳು ಆರಂಭದಲ್ಲಿ ಮೇಲಿನ ಮತ್ತು ಕೆಳಗಿನ ಕಾಲುಗಳನ್ನು ಒಳಗೊಂಡ ಸ್ನಾಯು ದೌರ್ಬಲ್ಯವನ್ನು ಹೊಂದುತ್ತಾರೆ. ಈ ಎಸ್‌ಎಂಎ ಸಾಮಾನ್ಯವಾಗಿ 10,000 ಮಕ್ಕಳಲ್ಲಿ ಒಬ್ಬರ ಮೇಲೆ ಪರಿಣಾಮ ಬೀರುತ್ತದೆ, ಮತ್ತು ಪ್ರಸ್ತುತ ಭಾರತದಲ್ಲಿ ಸುಮಾರು 800 ಮಕ್ಕಳು ಎಸ್‌ಎಂಎಯಿಂದ ಬಳಲುತ್ತಿದ್ದಾರೆ.

ಝೊಲ್ಗೆನ್ಸ್ಮ ಒಂದೇ ಡೋಸ್ ಇಂಟ್ರಾವೆನಸ್ ಇಂಜೆಕ್ಷನ್ ಜೀನ್ ಚಿಕಿತ್ಸೆಯಾಗಿದೆ. 16 ಕೋಟಿ ರೂ.ಗಳ ಬೆಲೆಯ ಹೊರತಾಗಿ, ಕೇಂದ್ರೀಯ ಹಣಕಾಸು ಸಚಿವಾಲಯವು ಮಾನವೀಯ ಆಧಾರದ ಮೇಲೆ ಈ ಔಷಧದ ಮೇಲೆ ಸುಮಾರು 6 ಕೋಟಿ ಮೌಲ್ಯದ ಆಮದು ತೆರಿಗೆಯನ್ನು ಮನ್ನಾ ಮಾಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.


ಇದನ್ನೂ ಓದಿ: ನಿಮ್ಮ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸಪ್ತಪದಿ ತುಳಿಯಿರಿ: ಇದು ತಮಾಷೆಯಲ್ಲ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...