Homeಮುಖಪುಟಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

ಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

- Advertisement -
- Advertisement -

ಆಯನ್ಸ್ ಗುಪ್ತಾ ಹೆಸರಿನ ಮೂರು ವರ್ಷದ ಮಗುವಿಗೆ ಅಪರೂಪದ ಬೆನ್ನುಮೂಳೆಯ ಸ್ನಾಯು ಕ್ಷೀಣತೆ (spinal muscular atrophy) ಎಂಬ ರೋಗ ಕಾಡುತ್ತಿತ್ತು. ಅದರ ಜೀನ್ ಥೆರಪಿ ಚಿಕಿತ್ಸೆಗೆ 16 ಕೋಟಿ ರೂ ಬೆಲೆಯ ಇಂಜೆಕ್ಷನ್ ಅಗತ್ಯವಿತ್ತು. ಆ ಮಗುವಿನ ಪೋಷಕರು ಕ್ರೌಡ್ ಫಂಡಿಂಗ್‌ನಲ್ಲಿ ಮನವಿ ಮಾಡಿದಾಗ 62,000 ಜನರು ದೇಣಿಗೆ ನೀಡಿದ್ದರ ಪರಿಣಾಮವಾಗಿ 16 ಕೋಟಿ ರೂ ಸಂಗ್ರಹವಾಯಿತು. ಕೊನೆಗೂ ವಿಶ್ವದ ಅತಿ ದುಬಾರಿ ಇಂಜೆಕ್ಷನ್ ಅನ್ನು ಆ ಮಗು ಪಡೆಯಿತು…

ಇದೆಲ್ಲವೂ ನಡೆದಿದ್ದು ಹೈದರಾಬಾದ್‌ನಲ್ಲಿ. ಅಲ್ಲಿನ ರೈನ್ಬೊ ಚಿಲ್ಡ್ರನ್ಸ್ ಹಾಸ್ಪಿಟಲ್‌ನಲ್ಲಿ ಜೂನ್ 09 ರಂದು ಆಯನ್ಸ್ ಝೊಲ್ಗೆನ್ಸ್ಮ ಎಂಬ ಔಷಧಿಯನ್ನು ಅಮೆರಿಕದಿಂದ ಆಮದು ಮಾಡಿಕೊಂಡು ನೀಡಲಾಯಿತು. ಪೋಷಕರಾದ ಯೋಗೇಶ್ ಗುಪ್ತಾ ಮತ್ತು ರುಪಾಲ್ ಗುಪ್ತಾ ಮೊದಲಿಗೆ ಅಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಕಷ್ಟ ಎಂದುಕೊಂಡಿದ್ದರು. ಆದರೆ ImpactGuru.com ಮೂಲಕ ಈ ವರ್ಷದ ಫೆಬ್ರವರಿಯಿಂದ ಕ್ರೌಡ್ ಫಂಡಿಂಗ್‌ಗೆ ಮನವಿ ಮಾಡಿದರು. ಜೂನ್‌ ವೇಳೆಗೆ ಹಣ ಸಂಗ್ರಹವಾಗಿ ಚಿಕಿತ್ಸೆಗೆ ಸಹಕಾರಿಯಾಯಿತು.

“62,450 ದೇಣಿಗೆ ನೀಡಿದ್ದಾರೆ. ದಾನಿಯೊಬ್ಬರು 56 ಲಕ್ಷ ನೀಡಿದ್ದಾರೆ. ವಿಶ್ವದ ದುಬಾರಿ ಔಷಧಿಯನ್ನು ನನ್ನ ಮಗನಿಗೆ ನೀಡಿ ಆತನನ್ನು ಬದುಕಿಸಲು ನೆರವಾದ ಎಲ್ಲಾ ದಾನಿಗಳಿಗೆ ನಾವು ಋಣಿಯಾಗಿದ್ದೇವೆ” ಎಂದು ಯೋಗೇಶ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕ ಶರ್ಮಾ, ಅನಿಲ್ ಕಪೂರ್, ಅಜಯ್ ದೇವಗನ್, ಧರ್ಮ ಪ್ರೊಡಕ್ಷನ್, ಟಿ-ಸೀರಿಸ್, ಸಿಪ್ಲಾ ಸೇರಿದಂತೆ ಹಲವಾರು ಜನ ದೇಣಿಗೆ ನೀಡುವ ಮೂಲಕ ಬೆಂಬಲ ನೀಡಿದ್ದರು.

ಬೆನ್ನುಮೂಳೆಯ ಸ್ನಾಯು ಕ್ಷೀಣತೆಯು ಎಸ್‌ಎಂಎನ್ 1 ಜೀನ್‌ನಲ್ಲಿನ ದೋಷದಿಂದಾಗಿ ಉಂಟಾಗುವ ಕಾಯಿಲೆಯಾಗಿದೆ. ಪೀಡಿತ ಮಕ್ಕಳು ಆರಂಭದಲ್ಲಿ ಮೇಲಿನ ಮತ್ತು ಕೆಳಗಿನ ಕಾಲುಗಳನ್ನು ಒಳಗೊಂಡ ಸ್ನಾಯು ದೌರ್ಬಲ್ಯವನ್ನು ಹೊಂದುತ್ತಾರೆ. ಈ ಎಸ್‌ಎಂಎ ಸಾಮಾನ್ಯವಾಗಿ 10,000 ಮಕ್ಕಳಲ್ಲಿ ಒಬ್ಬರ ಮೇಲೆ ಪರಿಣಾಮ ಬೀರುತ್ತದೆ, ಮತ್ತು ಪ್ರಸ್ತುತ ಭಾರತದಲ್ಲಿ ಸುಮಾರು 800 ಮಕ್ಕಳು ಎಸ್‌ಎಂಎಯಿಂದ ಬಳಲುತ್ತಿದ್ದಾರೆ.

ಝೊಲ್ಗೆನ್ಸ್ಮ ಒಂದೇ ಡೋಸ್ ಇಂಟ್ರಾವೆನಸ್ ಇಂಜೆಕ್ಷನ್ ಜೀನ್ ಚಿಕಿತ್ಸೆಯಾಗಿದೆ. 16 ಕೋಟಿ ರೂ.ಗಳ ಬೆಲೆಯ ಹೊರತಾಗಿ, ಕೇಂದ್ರೀಯ ಹಣಕಾಸು ಸಚಿವಾಲಯವು ಮಾನವೀಯ ಆಧಾರದ ಮೇಲೆ ಈ ಔಷಧದ ಮೇಲೆ ಸುಮಾರು 6 ಕೋಟಿ ಮೌಲ್ಯದ ಆಮದು ತೆರಿಗೆಯನ್ನು ಮನ್ನಾ ಮಾಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.


ಇದನ್ನೂ ಓದಿ: ನಿಮ್ಮ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸಪ್ತಪದಿ ತುಳಿಯಿರಿ: ಇದು ತಮಾಷೆಯಲ್ಲ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...