Homeಮುಖಪುಟಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

ಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

- Advertisement -
- Advertisement -

ಆಯನ್ಸ್ ಗುಪ್ತಾ ಹೆಸರಿನ ಮೂರು ವರ್ಷದ ಮಗುವಿಗೆ ಅಪರೂಪದ ಬೆನ್ನುಮೂಳೆಯ ಸ್ನಾಯು ಕ್ಷೀಣತೆ (spinal muscular atrophy) ಎಂಬ ರೋಗ ಕಾಡುತ್ತಿತ್ತು. ಅದರ ಜೀನ್ ಥೆರಪಿ ಚಿಕಿತ್ಸೆಗೆ 16 ಕೋಟಿ ರೂ ಬೆಲೆಯ ಇಂಜೆಕ್ಷನ್ ಅಗತ್ಯವಿತ್ತು. ಆ ಮಗುವಿನ ಪೋಷಕರು ಕ್ರೌಡ್ ಫಂಡಿಂಗ್‌ನಲ್ಲಿ ಮನವಿ ಮಾಡಿದಾಗ 62,000 ಜನರು ದೇಣಿಗೆ ನೀಡಿದ್ದರ ಪರಿಣಾಮವಾಗಿ 16 ಕೋಟಿ ರೂ ಸಂಗ್ರಹವಾಯಿತು. ಕೊನೆಗೂ ವಿಶ್ವದ ಅತಿ ದುಬಾರಿ ಇಂಜೆಕ್ಷನ್ ಅನ್ನು ಆ ಮಗು ಪಡೆಯಿತು…

ಇದೆಲ್ಲವೂ ನಡೆದಿದ್ದು ಹೈದರಾಬಾದ್‌ನಲ್ಲಿ. ಅಲ್ಲಿನ ರೈನ್ಬೊ ಚಿಲ್ಡ್ರನ್ಸ್ ಹಾಸ್ಪಿಟಲ್‌ನಲ್ಲಿ ಜೂನ್ 09 ರಂದು ಆಯನ್ಸ್ ಝೊಲ್ಗೆನ್ಸ್ಮ ಎಂಬ ಔಷಧಿಯನ್ನು ಅಮೆರಿಕದಿಂದ ಆಮದು ಮಾಡಿಕೊಂಡು ನೀಡಲಾಯಿತು. ಪೋಷಕರಾದ ಯೋಗೇಶ್ ಗುಪ್ತಾ ಮತ್ತು ರುಪಾಲ್ ಗುಪ್ತಾ ಮೊದಲಿಗೆ ಅಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಕಷ್ಟ ಎಂದುಕೊಂಡಿದ್ದರು. ಆದರೆ ImpactGuru.com ಮೂಲಕ ಈ ವರ್ಷದ ಫೆಬ್ರವರಿಯಿಂದ ಕ್ರೌಡ್ ಫಂಡಿಂಗ್‌ಗೆ ಮನವಿ ಮಾಡಿದರು. ಜೂನ್‌ ವೇಳೆಗೆ ಹಣ ಸಂಗ್ರಹವಾಗಿ ಚಿಕಿತ್ಸೆಗೆ ಸಹಕಾರಿಯಾಯಿತು.

“62,450 ದೇಣಿಗೆ ನೀಡಿದ್ದಾರೆ. ದಾನಿಯೊಬ್ಬರು 56 ಲಕ್ಷ ನೀಡಿದ್ದಾರೆ. ವಿಶ್ವದ ದುಬಾರಿ ಔಷಧಿಯನ್ನು ನನ್ನ ಮಗನಿಗೆ ನೀಡಿ ಆತನನ್ನು ಬದುಕಿಸಲು ನೆರವಾದ ಎಲ್ಲಾ ದಾನಿಗಳಿಗೆ ನಾವು ಋಣಿಯಾಗಿದ್ದೇವೆ” ಎಂದು ಯೋಗೇಶ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕ ಶರ್ಮಾ, ಅನಿಲ್ ಕಪೂರ್, ಅಜಯ್ ದೇವಗನ್, ಧರ್ಮ ಪ್ರೊಡಕ್ಷನ್, ಟಿ-ಸೀರಿಸ್, ಸಿಪ್ಲಾ ಸೇರಿದಂತೆ ಹಲವಾರು ಜನ ದೇಣಿಗೆ ನೀಡುವ ಮೂಲಕ ಬೆಂಬಲ ನೀಡಿದ್ದರು.

ಬೆನ್ನುಮೂಳೆಯ ಸ್ನಾಯು ಕ್ಷೀಣತೆಯು ಎಸ್‌ಎಂಎನ್ 1 ಜೀನ್‌ನಲ್ಲಿನ ದೋಷದಿಂದಾಗಿ ಉಂಟಾಗುವ ಕಾಯಿಲೆಯಾಗಿದೆ. ಪೀಡಿತ ಮಕ್ಕಳು ಆರಂಭದಲ್ಲಿ ಮೇಲಿನ ಮತ್ತು ಕೆಳಗಿನ ಕಾಲುಗಳನ್ನು ಒಳಗೊಂಡ ಸ್ನಾಯು ದೌರ್ಬಲ್ಯವನ್ನು ಹೊಂದುತ್ತಾರೆ. ಈ ಎಸ್‌ಎಂಎ ಸಾಮಾನ್ಯವಾಗಿ 10,000 ಮಕ್ಕಳಲ್ಲಿ ಒಬ್ಬರ ಮೇಲೆ ಪರಿಣಾಮ ಬೀರುತ್ತದೆ, ಮತ್ತು ಪ್ರಸ್ತುತ ಭಾರತದಲ್ಲಿ ಸುಮಾರು 800 ಮಕ್ಕಳು ಎಸ್‌ಎಂಎಯಿಂದ ಬಳಲುತ್ತಿದ್ದಾರೆ.

ಝೊಲ್ಗೆನ್ಸ್ಮ ಒಂದೇ ಡೋಸ್ ಇಂಟ್ರಾವೆನಸ್ ಇಂಜೆಕ್ಷನ್ ಜೀನ್ ಚಿಕಿತ್ಸೆಯಾಗಿದೆ. 16 ಕೋಟಿ ರೂ.ಗಳ ಬೆಲೆಯ ಹೊರತಾಗಿ, ಕೇಂದ್ರೀಯ ಹಣಕಾಸು ಸಚಿವಾಲಯವು ಮಾನವೀಯ ಆಧಾರದ ಮೇಲೆ ಈ ಔಷಧದ ಮೇಲೆ ಸುಮಾರು 6 ಕೋಟಿ ಮೌಲ್ಯದ ಆಮದು ತೆರಿಗೆಯನ್ನು ಮನ್ನಾ ಮಾಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.


ಇದನ್ನೂ ಓದಿ: ನಿಮ್ಮ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸಪ್ತಪದಿ ತುಳಿಯಿರಿ: ಇದು ತಮಾಷೆಯಲ್ಲ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...