Homeಮುಖಪುಟಹೈದರಾಬಾದ್: ಅಸ್ಸಾಂ ಸಿಎಂ ಇದ್ದ ವೇದಿಕೆಗೆ ನುಗ್ಗಿ ಮೈಕ್‌ ಕಿತ್ತ ಅಪರಿಚಿತ ವ್ಯಕ್ತಿ

ಹೈದರಾಬಾದ್: ಅಸ್ಸಾಂ ಸಿಎಂ ಇದ್ದ ವೇದಿಕೆಗೆ ನುಗ್ಗಿ ಮೈಕ್‌ ಕಿತ್ತ ಅಪರಿಚಿತ ವ್ಯಕ್ತಿ

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶುಕ್ರವಾರದಂದು ಹೈದರಾಬಾದ್‌ನಲ್ಲಿ ಭಾಗವಹಿಸಿದ ಕಾರ್ಯಕ್ರಮದ ವೇದಿಕೆಯೊಂದಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿದ್ದು, ಭದ್ರತಾ ವೈಫಲ್ಯ ಘಟನೆ ನಡೆದಿದೆ. ವ್ಯಕ್ತಿಯನ್ನು ವೇದಿಕೆಯಲ್ಲಿ ಇದ್ದವರು ಅವರನ್ನು ಕೆಳಗೆ ಎಳೆದುಕೊಂಡು ಹೋಗಿದ್ದು, ಪೊಲೀಸರ ವಶಕ್ಕೆ ನೀಡಿದ್ದಾರೆ.

ಮುಖ್ಯಮಂತ್ರಿಯಿದ್ದ ವೇದಿಕೆಯ ಮೇಲೆ ಬಿಜೆಪಿಯ ನಾಯಕರೊಬ್ಬರು ಮೈಕ್‌ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ನುಗ್ಗಿದ ವ್ಯಕ್ತಿ, ಅವರಿಂದ ಮೈಕ್‌ ಅನ್ನು ಕಿತ್ತು ಮಾತನಾಡದಂತೆ ತಡೆದಿದ್ದಾರೆ. ನಂತರ ಮುಖ್ಯಮಂತ್ರಿಯತ್ತ ತಿರುಗಿ ಅವರೊಂದಿಗೆ ಮಾತಿಗೆ ಇಳಿಯುತ್ತಾರೆ. ಈ ವೇಳೆ ವೇದಿಕೆಯಲ್ಲಿ ಇದ್ದವರು ಅವರನ್ನು ಕೆಳಗೆ ಕರೆದುಕೊಂಡು ಹೋಗುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪರಿಚಿತ ವ್ಯಕ್ತಿಯು ತೆಲಂಗಾಣದ ಆಡಳಿತರೂಢ ಪಕ್ಷವಾದ ಟಿಆರ್‌ಎಸ್‌‌ ಪಕ್ಷವನ್ನು ಪ್ರತಿನಿಧಿಸುವ ಶಾಲನ್ನು ಕತ್ತಿಗೆ ಧರಿಸಿಕೊಂಡಿದ್ದರು. ಅಸ್ಸಾಂ ಮುಖ್ಯಮಂತ್ರಿ ಗಣೇಶ ಹಬ್ಬ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ಭಾಗವಹಿಸಲು ಹೈದರಾಬಾದ್‌ ಆಗಮಿಸಿದ್ದರು.

ಮುಂಜಾನೆ ನಗರದ ಪ್ರಮುಖ ದೇವಸ್ಥಾನವೊಂದಕ್ಕೆ ಭೇಟಿ ನೀಡಿದ ಅಸ್ಸಾಂ ಮುಖ್ಯಮಂತ್ರಿ, ತೆಲಂಗಾಣ ಮುಖ್ಯಮಂತ್ರಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

“ಮುಖ್ಯಮಂತ್ರಿ ಕೆಸಿಆರ್ ಅವರು ಬಿಜೆಪಿ ಮುಕ್ತ ರಾಜಕೀಯದ ಬಗ್ಗೆ ಮಾತನಾಡುತ್ತಾರೆ. ಆದರೆ ನಾವು ಕುಟುಂಬ ರಾಜಕಾರಣ ಮುಕ್ತ ರಾಜಕೀಯದ ಬಗ್ಗೆ ಮಾತನಾಡುತ್ತೇವೆ. ಹೈದರಾಬಾದ್‌ನಲ್ಲಿ ಇನ್ನೂ ಅವರ ಮಗ ಮತ್ತು ಮಗಳ ಚಿತ್ರಗಳನ್ನು ನೋಡುತ್ತಿದ್ದೇವೆ. ದೇಶದ ರಾಜಕೀಯವು ಕುಟುಂಬ ರಾಜಕಾರಣದಿಂದ ಮುಕ್ತವಾಗಿರಬೇಕು” ಎಂದು ಹಿಮಂತ ಶರ್ಮಾ ಹೇಳಿದ್ದಾರೆ.

ಬಿಜೆಪಿ ಮತ್ತು ಟಿಆರ್‌ಎಸ್‌ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗಳು ಮತ್ತು 2024 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿವೆ. ಎರಡೂ ಪಕ್ಷಗಳು ಇತ್ತೀಚಿನ ತಿಂಗಳುಗಳಲ್ಲಿ ಪರಸ್ಪರ ದಾಳಿಗಳನ್ನು ಹೆಚ್ಚಿಸುತ್ತಿವೆ.

ಇದನ್ನೂ ಓದಿ: ತೆಲಂಗಾಣ: ಪ್ರವಾದಿ ಮುಹಮ್ಮದ್‌ರನ್ನು ನಿಂದಿಸಿದ್ದ ಶಾಸಕನನ್ನು ಅಮಾನತು ಮಾಡಿದ ಬಿಜೆಪಿ

ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಲು ಮತ್ತು ಸಾರ್ವತ್ರಿಕ ಚುನಾವಣೆಗೆ ಐಕ್ಯರಂಗವನ್ನು ರೂಪಿಸಲು  ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಅವರು ಪ್ರಯತ್ನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....