ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶುಕ್ರವಾರದಂದು ಹೈದರಾಬಾದ್ನಲ್ಲಿ ಭಾಗವಹಿಸಿದ ಕಾರ್ಯಕ್ರಮದ ವೇದಿಕೆಯೊಂದಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿದ್ದು, ಭದ್ರತಾ ವೈಫಲ್ಯ ಘಟನೆ ನಡೆದಿದೆ. ವ್ಯಕ್ತಿಯನ್ನು ವೇದಿಕೆಯಲ್ಲಿ ಇದ್ದವರು ಅವರನ್ನು ಕೆಳಗೆ ಎಳೆದುಕೊಂಡು ಹೋಗಿದ್ದು, ಪೊಲೀಸರ ವಶಕ್ಕೆ ನೀಡಿದ್ದಾರೆ.
ಮುಖ್ಯಮಂತ್ರಿಯಿದ್ದ ವೇದಿಕೆಯ ಮೇಲೆ ಬಿಜೆಪಿಯ ನಾಯಕರೊಬ್ಬರು ಮೈಕ್ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ನುಗ್ಗಿದ ವ್ಯಕ್ತಿ, ಅವರಿಂದ ಮೈಕ್ ಅನ್ನು ಕಿತ್ತು ಮಾತನಾಡದಂತೆ ತಡೆದಿದ್ದಾರೆ. ನಂತರ ಮುಖ್ಯಮಂತ್ರಿಯತ್ತ ತಿರುಗಿ ಅವರೊಂದಿಗೆ ಮಾತಿಗೆ ಇಳಿಯುತ್ತಾರೆ. ಈ ವೇಳೆ ವೇದಿಕೆಯಲ್ಲಿ ಇದ್ದವರು ಅವರನ್ನು ಕೆಳಗೆ ಕರೆದುಕೊಂಡು ಹೋಗುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಅಪರಿಚಿತ ವ್ಯಕ್ತಿಯು ತೆಲಂಗಾಣದ ಆಡಳಿತರೂಢ ಪಕ್ಷವಾದ ಟಿಆರ್ಎಸ್ ಪಕ್ಷವನ್ನು ಪ್ರತಿನಿಧಿಸುವ ಶಾಲನ್ನು ಕತ್ತಿಗೆ ಧರಿಸಿಕೊಂಡಿದ್ದರು. ಅಸ್ಸಾಂ ಮುಖ್ಯಮಂತ್ರಿ ಗಣೇಶ ಹಬ್ಬ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ಭಾಗವಹಿಸಲು ಹೈದರಾಬಾದ್ ಆಗಮಿಸಿದ್ದರು.
#Telangana: Man confronts #Assam CM Himanta, tries to dismantle mike on stage at rally in #Hyderabad | Catch the day's latest news here: https://t.co/lbEmHCOkWw pic.twitter.com/WLoJzTXWvK
— Economic Times (@EconomicTimes) September 9, 2022
ಮುಂಜಾನೆ ನಗರದ ಪ್ರಮುಖ ದೇವಸ್ಥಾನವೊಂದಕ್ಕೆ ಭೇಟಿ ನೀಡಿದ ಅಸ್ಸಾಂ ಮುಖ್ಯಮಂತ್ರಿ, ತೆಲಂಗಾಣ ಮುಖ್ಯಮಂತ್ರಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದನ್ನೂ ಓದಿ: ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ
“ಮುಖ್ಯಮಂತ್ರಿ ಕೆಸಿಆರ್ ಅವರು ಬಿಜೆಪಿ ಮುಕ್ತ ರಾಜಕೀಯದ ಬಗ್ಗೆ ಮಾತನಾಡುತ್ತಾರೆ. ಆದರೆ ನಾವು ಕುಟುಂಬ ರಾಜಕಾರಣ ಮುಕ್ತ ರಾಜಕೀಯದ ಬಗ್ಗೆ ಮಾತನಾಡುತ್ತೇವೆ. ಹೈದರಾಬಾದ್ನಲ್ಲಿ ಇನ್ನೂ ಅವರ ಮಗ ಮತ್ತು ಮಗಳ ಚಿತ್ರಗಳನ್ನು ನೋಡುತ್ತಿದ್ದೇವೆ. ದೇಶದ ರಾಜಕೀಯವು ಕುಟುಂಬ ರಾಜಕಾರಣದಿಂದ ಮುಕ್ತವಾಗಿರಬೇಕು” ಎಂದು ಹಿಮಂತ ಶರ್ಮಾ ಹೇಳಿದ್ದಾರೆ.
On Camera, Man Moves Mic Away, Confronts Himanta Sarma On Hyderabad Stage https://t.co/MXLbWm4bTc
NDTV's Uma Sudhir reports pic.twitter.com/yal0CfzhSj
— NDTV (@ndtv) September 9, 2022
ಬಿಜೆಪಿ ಮತ್ತು ಟಿಆರ್ಎಸ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗಳು ಮತ್ತು 2024 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿವೆ. ಎರಡೂ ಪಕ್ಷಗಳು ಇತ್ತೀಚಿನ ತಿಂಗಳುಗಳಲ್ಲಿ ಪರಸ್ಪರ ದಾಳಿಗಳನ್ನು ಹೆಚ್ಚಿಸುತ್ತಿವೆ.
ಇದನ್ನೂ ಓದಿ: ತೆಲಂಗಾಣ: ಪ್ರವಾದಿ ಮುಹಮ್ಮದ್ರನ್ನು ನಿಂದಿಸಿದ್ದ ಶಾಸಕನನ್ನು ಅಮಾನತು ಮಾಡಿದ ಬಿಜೆಪಿ
ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಲು ಮತ್ತು ಸಾರ್ವತ್ರಿಕ ಚುನಾವಣೆಗೆ ಐಕ್ಯರಂಗವನ್ನು ರೂಪಿಸಲು ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಅವರು ಪ್ರಯತ್ನಿಸುತ್ತಿದ್ದಾರೆ.