Homeಮುಖಪುಟಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ

ಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ

- Advertisement -
- Advertisement -

ವಿರೋಧ ಪಕ್ಷಗಳು ಮತ್ತು ಮಹಿಳಾ ಸಂಘಟನೆಗಳ ನಂತರ, ಬಜರಂಗದಳ ಸೇರಿದಂತೆ ಬಲಪಂಥೀಯ ಗುಂಪುಗಳು ಮೇ 10 ರಿಂದ 31 ರವರೆಗೆ ಹೈದರಾಬಾದ್‌ನಲ್ಲಿ ನಿಗದಿಯಾಗಿರುವ 72 ನೇ ವಿಶ್ವ ಸುಂದರಿ ಸ್ಪರ್ಧೆಯನ್ನು ವಿರೋಧಿಸಿವೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ “ಯುದ್ಧದಂತಹ ಪರಿಸ್ಥಿತಿ”ಯ ನಡುವೆಯೂ ಸೌಂದರ್ಯ ಸ್ಪರ್ಧೆಯನ್ನು ನಡೆಸಲಾಗುತ್ತಿದೆ ಎಂದು ಬಜರಂಗದಳ ವಿರೋಧಿಸಿದೆ.

ತೆಲಂಗಾಣ ಬಜರಣ್ ದಳದ ಸಂಚಾಲಕ ಶಿವ ರಾಮ್ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ಜನರಲ್ಲಿ ರಾಷ್ಟ್ರೀಯತೆಯ ಭಾವನೆಗಳನ್ನು ಉತ್ತೇಜಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಅವರು ಹೇಳಿದರು.

ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲುವ ಬದಲು ಸರ್ಕಾರ ಅಂತಹ ಕಾರ್ಯಕ್ರಮವನ್ನು ನಡೆಸಿದರೆ ಜನರು ಸುಮ್ಮನಿರುವುದಿಲ್ಲ ಎಂದು ಅವರು ಎಚ್ಚರಿಸಿದರು.

ಸರ್ಕಾರಿ ನೌಕರರ ಬೇಡಿಕೆಗಳನ್ನು ಪೂರೈಸಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಭಜರಂಗದಳ ನಾಯಕ ಮಿಸ್ ವರ್ಲ್ಡ್ ನಡೆಸಲು ಅದು ಹೇಗೆ ಹಣವನ್ನು ಸಂಗ್ರಹಿಸಿತು ಎಂದು ಪ್ರಶ್ನಿಸಿದ್ದಾರೆ.

“ರಾಜ್ಯವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ನೀವು ಹೇಳುತ್ತಿದ್ದೀರಿ. ಆದರೆ, ಈ ಅಂತರರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯನ್ನು ಆಯೋಜಿಸಲು ನಿಮಗೆ ಹಣ ಹೇಗೆ ಸಿಕ್ಕಿತು” ಎಂದು ಅವರು ಕೇಳಿದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕೂಡ ಸೌಂದರ್ಯ ಸ್ಪರ್ಧೆಯನ್ನು ವಿರೋಧಿಸಿದೆ. ದೇವಾಲಯಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದ್ದಕ್ಕಾಗಿ ಸರ್ಕಾರವನ್ನು ಟೀಕಿಸಿತು. ಇದನ್ನು ‘ಸಾಂಸ್ಕೃತಿಕ ಜಿಹಾದ್’ ಎಂದು ಕರೆದಿದೆ.

ರಾಮಪ್ಪ ದೇವಸ್ಥಾನ, ಯಾದಗಿರಿಗುಟ್ಟ ಮತ್ತು ಅನಂತಗಿರಿ ಬೆಟ್ಟಗಳಂತಹ ಪವಿತ್ರ ಸ್ಥಳಗಳಲ್ಲಿ ಸ್ಪರ್ಧೆಗಳನ್ನು ನಡೆಸುವ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕೆಂದು ಸಂಘಟನೆ ಒತ್ತಾಯಿಸಿದೆ.

ಮಹಿಳಾ ಗುಂಪುಗಳು ಸಹ ಈ ಕಾರ್ಯಕ್ರಮವನ್ನು ಬಲವಾಗಿ ವಿರೋಧಿಸಿವೆ. ಇದು ಸೂಕ್ತವಲ್ಲ ಮತ್ತು ಮಹಿಳೆಯರನ್ನು ಅವಮಾನಿಸುವಂತಿದೆ ಎಂದು ಅವರು ಕರೆದಿದ್ದಾರೆ.

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನ್ (ಎಐಎಂಎಸ್ಎಸ್) ಮತ್ತು ಭಾರತೀಯ ಮಹಿಳಾ ರಾಷ್ಟ್ರೀಯ ಒಕ್ಕೂಟ (ಎನ್‌ಎಫ್‌ಐಡಬ್ಲ್ಯೂ) ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳು, ಕೆಲವು ವಿದ್ಯಾರ್ಥಿ ಸಂಘಗಳು ಮತ್ತು ಯುವ ಸಂಘಟನೆಗಳೊಂದಿಗೆ ಹೈದರಾಬಾದ್‌ನಲ್ಲಿ ರ‍್ಯಾಲಿ ನಡೆಸಿ, ಸರ್ಕಾರವು ಈ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

ಮುಖ್ಯ ವಿರೋಧ ಪಕ್ಷವಾದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದೆ. ಆರ್ಥಿಕ ಸಂಕಷ್ಟದ ಸಮಯದಲ್ಲಿ ಸರ್ಕಾರವು ದುಂದು ವೆಚ್ಚ ಮಾಡಿದೆ ಎಂದು ಅದು ಆರೋಪಿಸಿದೆ.

ಸರ್ಕಾರಿ ನೌಕರರ ವೇತನ, ಪಿಂಚಣಿ ಮತ್ತು ಕಲ್ಯಾಣ ಯೋಜನೆಗಳಂತಹ ನಿರ್ಣಾಯಕ ಆರ್ಥಿಕ ಬಾಧ್ಯತೆಗಳನ್ನು ಪೂರೈಸಲು ತನ್ನ ಬಳಿ ಹಣವಿಲ್ಲ ಎಂದು ಹೇಳಿಕೊಂಡರೂ, ಈ ಕಾರ್ಯಕ್ರಮಕ್ಕಾಗಿ ಸರ್ಕಾರವು ರೂ.200 ಕೋಟಿ ಖರ್ಚು ಮಾಡುತ್ತಿದೆ ಎಂದು ಬಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ. ರಾಮರಾವ್ ಟೀಕಿಸಿದರು.

ಮಿಸ್ ವರ್ಲ್ಡ್ ಅನ್ನು ಯಶಸ್ವಿಯಾಗಿ ನಡೆಸಲು ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೋಮವಾರ ಅಧಿಕಾರಿಗಳಿಗೆ ಆದೇಶಿಸಿದರು.

116 ದೇಶಗಳ ಸ್ಪರ್ಧಿಗಳು ಭಾಗವಹಿಸುವ ಸೌಂದರ್ಯ ಸ್ಪರ್ಧೆಗೆ ಪೊಲೀಸರು ಕಣ್ಗಾವಲು ಹೆಚ್ಚಿಸಬೇಕು, ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಅವರು ಕೇಳಿದರು.

ಮೇ 10 ರಂದು ಗಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯಿಂದ ಮೇ 31 ರಂದು ನಡೆಯುವ ಗ್ರ್ಯಾಂಡ್ ಫಿನಾಲೆಯವರೆಗಿನ ಪ್ರತಿಯೊಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಕರೆ ನೀಡಿದರು.

ಮಿಸ್ ವರ್ಲ್ಡ್ ಸ್ಪರ್ಧಿಗಳು ಚಾರ್ಮಿನಾರ್, ಲಾಡ್ ಬಜಾರ್, ಸೆಕ್ರೆಟರಿಯೇಟ್‌ನಲ್ಲಿರುವ ತೆಲಂಗಾಣ ಥಲ್ಲಿ ಪ್ರತಿಮೆ ಮತ್ತು ರಾಜ್ಯದ ಇತರ ಅನೇಕ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಅಗತ್ಯವಾದ ಸಾರಿಗೆ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೈದರಾಬಾದ್| ಹಲವು ತಿಂಗಳಿಂದ ಕಿರುಕುಳ; ಆತ್ಮಹತ್ಯೆಗೆ ಶರಣಾದ ನೊಂದ ಶಾಲಾ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...