Homeಮುಖಪುಟಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ

ಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ

- Advertisement -
- Advertisement -

ವಿರೋಧ ಪಕ್ಷಗಳು ಮತ್ತು ಮಹಿಳಾ ಸಂಘಟನೆಗಳ ನಂತರ, ಬಜರಂಗದಳ ಸೇರಿದಂತೆ ಬಲಪಂಥೀಯ ಗುಂಪುಗಳು ಮೇ 10 ರಿಂದ 31 ರವರೆಗೆ ಹೈದರಾಬಾದ್‌ನಲ್ಲಿ ನಿಗದಿಯಾಗಿರುವ 72 ನೇ ವಿಶ್ವ ಸುಂದರಿ ಸ್ಪರ್ಧೆಯನ್ನು ವಿರೋಧಿಸಿವೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ “ಯುದ್ಧದಂತಹ ಪರಿಸ್ಥಿತಿ”ಯ ನಡುವೆಯೂ ಸೌಂದರ್ಯ ಸ್ಪರ್ಧೆಯನ್ನು ನಡೆಸಲಾಗುತ್ತಿದೆ ಎಂದು ಬಜರಂಗದಳ ವಿರೋಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

ತೆಲಂಗಾಣ ಬಜರಣ್ ದಳದ ಸಂಚಾಲಕ ಶಿವ ರಾಮ್ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ಜನರಲ್ಲಿ ರಾಷ್ಟ್ರೀಯತೆಯ ಭಾವನೆಗಳನ್ನು ಉತ್ತೇಜಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಅವರು ಹೇಳಿದರು.

ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲುವ ಬದಲು ಸರ್ಕಾರ ಅಂತಹ ಕಾರ್ಯಕ್ರಮವನ್ನು ನಡೆಸಿದರೆ ಜನರು ಸುಮ್ಮನಿರುವುದಿಲ್ಲ ಎಂದು ಅವರು ಎಚ್ಚರಿಸಿದರು.

ಸರ್ಕಾರಿ ನೌಕರರ ಬೇಡಿಕೆಗಳನ್ನು ಪೂರೈಸಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಭಜರಂಗದಳ ನಾಯಕ ಮಿಸ್ ವರ್ಲ್ಡ್ ನಡೆಸಲು ಅದು ಹೇಗೆ ಹಣವನ್ನು ಸಂಗ್ರಹಿಸಿತು ಎಂದು ಪ್ರಶ್ನಿಸಿದ್ದಾರೆ.

“ರಾಜ್ಯವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ನೀವು ಹೇಳುತ್ತಿದ್ದೀರಿ. ಆದರೆ, ಈ ಅಂತರರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯನ್ನು ಆಯೋಜಿಸಲು ನಿಮಗೆ ಹಣ ಹೇಗೆ ಸಿಕ್ಕಿತು” ಎಂದು ಅವರು ಕೇಳಿದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕೂಡ ಸೌಂದರ್ಯ ಸ್ಪರ್ಧೆಯನ್ನು ವಿರೋಧಿಸಿದೆ. ದೇವಾಲಯಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದ್ದಕ್ಕಾಗಿ ಸರ್ಕಾರವನ್ನು ಟೀಕಿಸಿತು. ಇದನ್ನು ‘ಸಾಂಸ್ಕೃತಿಕ ಜಿಹಾದ್’ ಎಂದು ಕರೆದಿದೆ.

ರಾಮಪ್ಪ ದೇವಸ್ಥಾನ, ಯಾದಗಿರಿಗುಟ್ಟ ಮತ್ತು ಅನಂತಗಿರಿ ಬೆಟ್ಟಗಳಂತಹ ಪವಿತ್ರ ಸ್ಥಳಗಳಲ್ಲಿ ಸ್ಪರ್ಧೆಗಳನ್ನು ನಡೆಸುವ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕೆಂದು ಸಂಘಟನೆ ಒತ್ತಾಯಿಸಿದೆ.

ಮಹಿಳಾ ಗುಂಪುಗಳು ಸಹ ಈ ಕಾರ್ಯಕ್ರಮವನ್ನು ಬಲವಾಗಿ ವಿರೋಧಿಸಿವೆ. ಇದು ಸೂಕ್ತವಲ್ಲ ಮತ್ತು ಮಹಿಳೆಯರನ್ನು ಅವಮಾನಿಸುವಂತಿದೆ ಎಂದು ಅವರು ಕರೆದಿದ್ದಾರೆ.

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನ್ (ಎಐಎಂಎಸ್ಎಸ್) ಮತ್ತು ಭಾರತೀಯ ಮಹಿಳಾ ರಾಷ್ಟ್ರೀಯ ಒಕ್ಕೂಟ (ಎನ್‌ಎಫ್‌ಐಡಬ್ಲ್ಯೂ) ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳು, ಕೆಲವು ವಿದ್ಯಾರ್ಥಿ ಸಂಘಗಳು ಮತ್ತು ಯುವ ಸಂಘಟನೆಗಳೊಂದಿಗೆ ಹೈದರಾಬಾದ್‌ನಲ್ಲಿ ರ‍್ಯಾಲಿ ನಡೆಸಿ, ಸರ್ಕಾರವು ಈ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

ಮುಖ್ಯ ವಿರೋಧ ಪಕ್ಷವಾದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದೆ. ಆರ್ಥಿಕ ಸಂಕಷ್ಟದ ಸಮಯದಲ್ಲಿ ಸರ್ಕಾರವು ದುಂದು ವೆಚ್ಚ ಮಾಡಿದೆ ಎಂದು ಅದು ಆರೋಪಿಸಿದೆ.

ಸರ್ಕಾರಿ ನೌಕರರ ವೇತನ, ಪಿಂಚಣಿ ಮತ್ತು ಕಲ್ಯಾಣ ಯೋಜನೆಗಳಂತಹ ನಿರ್ಣಾಯಕ ಆರ್ಥಿಕ ಬಾಧ್ಯತೆಗಳನ್ನು ಪೂರೈಸಲು ತನ್ನ ಬಳಿ ಹಣವಿಲ್ಲ ಎಂದು ಹೇಳಿಕೊಂಡರೂ, ಈ ಕಾರ್ಯಕ್ರಮಕ್ಕಾಗಿ ಸರ್ಕಾರವು ರೂ.200 ಕೋಟಿ ಖರ್ಚು ಮಾಡುತ್ತಿದೆ ಎಂದು ಬಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ. ರಾಮರಾವ್ ಟೀಕಿಸಿದರು.

ಮಿಸ್ ವರ್ಲ್ಡ್ ಅನ್ನು ಯಶಸ್ವಿಯಾಗಿ ನಡೆಸಲು ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೋಮವಾರ ಅಧಿಕಾರಿಗಳಿಗೆ ಆದೇಶಿಸಿದರು.

116 ದೇಶಗಳ ಸ್ಪರ್ಧಿಗಳು ಭಾಗವಹಿಸುವ ಸೌಂದರ್ಯ ಸ್ಪರ್ಧೆಗೆ ಪೊಲೀಸರು ಕಣ್ಗಾವಲು ಹೆಚ್ಚಿಸಬೇಕು, ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಅವರು ಕೇಳಿದರು.

ಮೇ 10 ರಂದು ಗಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯಿಂದ ಮೇ 31 ರಂದು ನಡೆಯುವ ಗ್ರ್ಯಾಂಡ್ ಫಿನಾಲೆಯವರೆಗಿನ ಪ್ರತಿಯೊಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಕರೆ ನೀಡಿದರು.

ಮಿಸ್ ವರ್ಲ್ಡ್ ಸ್ಪರ್ಧಿಗಳು ಚಾರ್ಮಿನಾರ್, ಲಾಡ್ ಬಜಾರ್, ಸೆಕ್ರೆಟರಿಯೇಟ್‌ನಲ್ಲಿರುವ ತೆಲಂಗಾಣ ಥಲ್ಲಿ ಪ್ರತಿಮೆ ಮತ್ತು ರಾಜ್ಯದ ಇತರ ಅನೇಕ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಅಗತ್ಯವಾದ ಸಾರಿಗೆ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೈದರಾಬಾದ್| ಹಲವು ತಿಂಗಳಿಂದ ಕಿರುಕುಳ; ಆತ್ಮಹತ್ಯೆಗೆ ಶರಣಾದ ನೊಂದ ಶಾಲಾ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -