Homeಮುಖಪುಟಹೈದರಾಬಾದ್‌: ಮುನಾವರ್‌ ಫಾರೂಖಿ ಕಾರ್ಯಕ್ರಮ ನಡೆಯದಂತೆ ನೋಡಿಕೊಳ್ಳಲು ಕಾರ್ಯಕರ್ತರಿಗೆ ಬಿಜೆಪಿ ಕರೆ

ಹೈದರಾಬಾದ್‌: ಮುನಾವರ್‌ ಫಾರೂಖಿ ಕಾರ್ಯಕ್ರಮ ನಡೆಯದಂತೆ ನೋಡಿಕೊಳ್ಳಲು ಕಾರ್ಯಕರ್ತರಿಗೆ ಬಿಜೆಪಿ ಕರೆ

- Advertisement -
- Advertisement -

ಜನವರಿ 9 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಖ್ಯಾತ ಸ್ಟಾಂಡ್‌‌ಅಪ್‌‌‌‌‌ ಕಾಮೇಡಿಯನ್‌‌‌‌‌ ಮುನಾವರ್ ಫಾರೂಖಿ ಅವರ ಕಾರ್ಯಕ್ರಮ ನಡೆಯಲು ಬಿಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಿಜೆವೈಎಂ (ಭಾರತೀಯ ಜನತಾ ಯುವ ಮೋರ್ಚಾ) ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

ಶನಿವಾರ ಹೈದರಾಬಾದ್‌ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಸಂದರ್ಭದಲ್ಲಿ ಬಿಜೆಪಿ ಮತ್ತು ಬಿಜೆವೈಎಂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಜಯ್ ಕುಮಾರ್, ’ಐಟಿ ಮತ್ತು ಕೈಗಾರಿಕಾ ಸಚಿವ ಕೆಟಿ ರಾಮರಾವ್ ಅವರು ವಿವಾದಾತ್ಮಕ ಸ್ಟಾಂಡ್‌‌ಅಪ್‌‌‌‌‌ ಕಾಮೇಡಿಯನ್‌‌‌‌‌ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ’ ಎಂದು ಕಿಡಿಕಾರಿದ್ದಾರೆ.

’ಸ್ಟಾಂಡ್‌‌ಅಪ್‌‌‌‌‌ ಕಾಮೇಡಿಯನ್‌‌‌‌‌ ಮುನಾವರ್ ಫಾರೂಖಿ ತಮ್ಮ ಕಾರ್ಯಕ್ರಮಗಳಲ್ಲಿ ಹಿಂದೂ ದೇವರುಗಳು ಮತ್ತು ದೇವತೆಗಳನ್ನು ಅವಮಾನಿಸಿದ ಆರೋಪದ ಮೇಲೆ ಅನೇಕ ರಾಜ್ಯಗಳು ಈಗಾಗಲೇ ಅವರ ಕಾರ್ಯಕ್ರಮಗಳನ್ನು ನಿಷೇಧಿಸಿವೆ. ಹೀಗಿರುವಾಗ ಇವರು ನಗರಕ್ಕೆ ಆಹ್ವಾನಿಸಿದ್ದಾರೆ’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

“ಮುನಾವರ್ ಫಾರೂಖಿ ತಮ್ಮ ಶೋಗಳಲ್ಲಿ ದುರ್ಗಾ, ಸೀತೆ, ರಾಮ, ರಾಮಾಯಣ ಮತ್ತು ಭಗವದ್ಗೀತೆಯನ್ನು ಅವಮಾನಿಸಿದ್ದಾರೆ. ಅಂತಹದರಲ್ಲಿ ಈ ಜನ ಅವರನ್ನು ಇಲ್ಲಿ ಸ್ವಾಗತಿಸುತ್ತಿದ್ದಾರೆ. ನಮಗೆ ಎಂಥಹ ಜನ ರಾಜ್ಯ ನಡೆಸುತ್ತಿದ್ದಾರೆ ಎಂಬುದು ಎಲ್ಲವೂ ನಮಗೆ ಅರ್ಥವಾಗುತ್ತಿದೆ” ಎಂದಿದ್ದಾರೆ.

ಜೊತೆಗೆ ಹೈದರಾಬಾದ್‌ನಲ್ಲಿ ಮುನಾವರ್ ಫಾರೂಖಿ ಅವರ ಕಾರ್ಯಕ್ರಮ ನಡೆಯದಂತೆ ನೋಡಿಕೊಳ್ಳಬೇಕು ಎಂದು ಯುವ ಮೋರ್ಚಾದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಈಗಾಗಲೇ ಬಿಜೆಪಿಯ ಒತ್ತಡದಿಂದಾಗಿ ದೇಶದ ಹಲವೆಡೆ ಮುನಾವರ್‌ ಫಾರೂಖಿ ಕಾರ್ಯಕ್ರಮಗಳು ರದ್ದಾಗಿವೆ. ಈ ಸುದ್ದಿ ವೈರಲ್‌ ಆದ ಬಳಿಕ ಹಲವು ಸಂಘಟನೆಗಳು, ರಾಜಕೀಯ ನಾಯಕರು ಕಾರ್ಯಕ್ರಮ ಆಯೋಜಿಸುವುದಾಗಿ ಹೇಳಿದ್ದಾರೆ.

ಈ ನಡುವೆ ನಟ, ಜನವರಿ 16 ರಂದು ಕೊಲ್ಕತ್ತಾದಲ್ಲಿ ಪ್ರದರ್ಶನ ನೀಡುವುದಾಗಿ ಹೇಳಿದ್ದಾರೆ. ‘ಧಂಧೋ’ ಎಂಬ ತನ್ನ ಎರಡು ಗಂಟೆಗಳ ಕಾರ್ಯಕ್ರಮದ ಪೋಸ್ಟರ್ ಅನ್ನು ಮತ್ತು ಟಿಕೆಟ್‌ಗಳನ್ನು ಕಾಯ್ದಿರಿಸುವ ಲಿಂಕ್‌‌‌‌ ಅನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...