Homeಮುಖಪುಟಹೈದರಾಬಾದ್ - ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ರೈಲ್ವೇ ಹಳಿಯಲ್ಲಿ ಶವವಾಗಿ...

ಹೈದರಾಬಾದ್ – ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆ

- Advertisement -
- Advertisement -

ಸೆಪ್ಟೆಂಬರ್ 9 ರಂದು ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಶಂಕಿಲಾಗಿರುವ, ಸೈದಾಬಾದ್ ಅತ್ಯಾಚಾರ ಪ್ರಕರಣದ ಆರೋಪಿ ತೆಲಂಗಾಣದ ಘಾನಾಪುರ ರೈಲು ನಿಲ್ದಾಣದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.

“ಆರೋಪಿ ಸಾವನ್ನಪ್ಪಿರುವುದು ನಿಜ. ನಾನು ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಯೊಂದಿಗೆ ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳಬೇಕು. ಪೊಲೀಸರು ಆತನನ್ನು ಹಿಂಬಾಲಿಸುತ್ತಿದ್ದಾರೆ ಎಂದು ತಿಳಿಯುತ್ತಿದ್ದಂತೆ, ಅವರ ಎಚ್ಚರಿಕೆಯ ಹೊರತಾಗಿಯು ರೈಲಿಗೆ ಹಾರಿದ್ದಾನೆ ಎಂದು ನನಗೆ ತಿಳಿಸಲಾಗಿದೆ. ಎಲ್ಲಾ ವಿವರಗಳನ್ನು ಖಚಿತಪಡಿಸಿಕೊಂಡ ನಂತರ ಅದನ್ನು ಮಾಧ್ಯಮದೊಂದಿಗೆ ಹಂಚಿಕೊಳ್ಳಲಾಗುತ್ತದೆ” ಎಂದು ಹೈದರಾಬಾದ್ ಪೂರ್ವ ವಲಯದ ಉಪ ಪೊಲೀಸ್ ಆಯುಕ್ತರು (ಡಿಸಿಪಿ) ರಮೇಶ್ ಹೇಳಿದ್ದಾರೆಂದು ದಿ ನ್ಯೂಸ್ ಮಿನಿಟ್‌ ವರದಿ ಮಾಡಿದೆ.

ಇದನ್ನೂ ಓದಿ: ಹೈದರಾಬಾದ್ – 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಪರಾರಿ

ಪೊಲೀಸರು 30 ವರ್ಷದ ರಾಜು ಎಂಬವರನ್ನು ಆರೋಪಿ ಎಂದು ಗುರುತಿಸಿದ್ದರು. ಘಟನೆ ವರದಿಯಾದಾಗಿನಿಂದ ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸಲು ಪೊಲೀಸರು ಒಂಬತ್ತು ವಿಶೇಷ ತಂಡಗಳನ್ನು ರಚಿಸಿದ್ದರು. ಜೊತೆಗೆ ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನವನ್ನೂ ಪೊಲೀಸರು ಘೋಷಿಸಿದ್ದರು.

ಸೆಪ್ಟೆಂಬರ್‌ 9 ರ ಗುರುವಾರದಂದು ಹೈದರಾಬಾದ್‌ನ ಸೈದಾಬಾದ್‌ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಚಾರ ಮಾಡಿ ಕೊಲೆ ಮಾಡಲಾಗಿತ್ತು. ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಬಾಲಕಿಯನ್ನು, ಪೋಷಕರು ರಾತ್ರಿವರೆಗೂ ಹುಡುಕಾಡಿದರೂ ಪತ್ತೆಯಾಗದೆ ಇದ್ದದ್ದರಿಂದ ಸೈದಾಬಾದ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ಇದನ್ನೂ ಓದಿ: ಹೈದರಾಬಾದ್ ಪಾಲಿಕೆ ಚುನಾವಣೆಯಲ್ಲಿ ಹಿಂದುತ್ವ ಶಕ್ತಿಗಳು ಮೇಲುಗೈ ಪಡೆದಿದ್ದು ಹೇಗೆ?

ಪೊಲೀಸರಿಗೆ ದೂರು ನೀಡಿದ ನಂತರ, ನೆರೆ ಮನೆಯ ವ್ಯಕ್ತಿ ಕೂಡಾ ಕಾಣೆಯಾಗಿದ್ದು ಅನುಮಾನ ಬಂದಿದ್ದರಿಂದ, ಪೊಲೀಸರೊಂದಿಗೆ ಹೋಗಿ ಅಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಬೆಡ್‌ಶೀಟ್‌ನಲ್ಲಿ ಸುತ್ತಿರುವುದನ್ನು ಕಂಡುಬಂದಿದೆ. ಪೊಲೀಸರು ಆರೋಪಿಯ ವಿರುದ್ದ ಪೋಕ್ಸೊ ಕಾಯ್ದೆಯಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿದ್ದರು.

ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಶವಪರೀಕ್ಷೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿಪಟ್ಟಿದೆ. ಜೊತೆಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದೆ. ಈ ಘಟನೆಯ ನಂತರ, ಭಾರೀ ಪ್ರತಿಭಟನೆಗಳು ಭುಗಿಲೆದ್ದು, ಕಲ್ಲು ತೂರಾಟವೂ ನಡೆದಿತ್ತು. ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ಹೈದರಾಬಾದ್: ಅತಿಕ್ರಮಣ ಪ್ರವೇಶ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...