Homeಮುಖಪುಟಹೈದರಾಬಾದ್ ಗ್ಯಾಂಗ್ ರೇಪ್: AIMIM ಶಾಸಕನ ಪುತ್ರ ಸೇರಿದಂತೆ ಎಲ್ಲ ಆರೋಪಿಗಳ ಬಂಧನ

ಹೈದರಾಬಾದ್ ಗ್ಯಾಂಗ್ ರೇಪ್: AIMIM ಶಾಸಕನ ಪುತ್ರ ಸೇರಿದಂತೆ ಎಲ್ಲ ಆರೋಪಿಗಳ ಬಂಧನ

- Advertisement -
- Advertisement -

ದೇಶದಲ್ಲಿ ಭಾರಿ ಆಕ್ರೋಶಕ್ಕೆ ಮತ್ತು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾದ ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಒಬ್ಬ ವಯಸ್ಕ ಮತ್ತು ಐವರು ಅಪ್ರಾಪ್ತರು ಸೇರಿದಂತೆ ಎಲ್ಲ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಎಐಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಶಾಸಕನ ಅಪ್ರಾಪ್ತ ಪುತ್ರನನ್ನು ಆರೋಪಿ ಎಂದು ಹೆಸರಿಸಲಾಗಿದ್ದು, ಆತನನ್ನು ಆರನೇ ಆರೋಪಿಯಾಗಿ ಬಂಧಿಸಲಾಗಿದೆ.

18 ವರ್ಷದ ವಯಸ್ಕ ಆರೋಪಿ ಸದುದ್ದೀನ್ ಮಲಿಕ್ ಸೇರಿದಂತೆ ಮೊದಲ ಐವರು ಆರೋಪಿಗಳ ಮೇಲೆ ಸಾಮೂಹಿಕ ಅತ್ಯಾಚಾರ, ಅಪಹರಣ, ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು ಮತ್ತು POCSO ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕನಿಷ್ಠವೆಂದರೂ 20 ವರ್ಷಗಳ ಜೈಲು ಅಥವಾ ಜೀವಮಾನದ ಜೈಲು ಶಿಕ್ಷೆ ವಿಧಿಸಬಹುದು.

ಆರನೇ ಆರೋಪಿ ಅತ್ಯಾಚಾರದಲ್ಲಿ ಭಾಗಿಯಾಗಿಲ್ಲ ಆದರೂ ಲೈಂಗಿಕ ದೌರ್ಜನ್ಯ ನಡೆಸಿರುವುದರಿಂದ ಆತನ ವಿರುದ್ಧ ಐಪಿಸಿ ಸೆಕ್ಷನ್ 354 (ಮಹಿಳೆಯ ವಿರುದ್ಧ ಅಪರಾಧ ಪ್ರಕರಣ) ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್‌ ಅಡಿ ಪ್ರಕರಣ ದಾಖಲಿಸಲಾಗಿದೆ. ಆತನಿಗೂ 5–7 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ.

ಇದನ್ನೂ ಓದಿ: ಹೈದರಾಬಾದ್: ಬಾಲಕಿ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬೆಳಕಿಗೆ ಬಂದ ಮತ್ತಷ್ಟು ಕೇಸ್‌ಗಳು

ಕಳೆದ ವಾರ, ಬಿಜೆಪಿ ಶಾಸಕ ರಘುನಂದನ್ ರಾವ್, ಎಐಎಂಐಎಂ ಶಾಸಕರ ಮಗ ಕೂಡ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಸಂತ್ರಸ್ತ ಬಾಲಕಿಯ ಜೊತೆಗಿರುವ ವಿಡಿಯೋ ಕ್ಲಿಪ್ ಮತ್ತು ಫೋಟೋಗಳನ್ನು ಬಿಡುಗಡೆ ಮಾಡಿದ್ದರು. ಶಾಸಕರ ಮಗ ಕಾರಿನಲ್ಲಿ ಇದ್ದರೂ, ಪೊಲೀಸರು ಮರೆ ಮಾಚುತ್ತಿದ್ದಾರೆ ಎಂದು ಆರೋಪಿಸಿದರು.

ಈಗ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಬಿಜೆಪಿ ಶಾಸಕ ರಘುನಂದನ್ ರಾವ್ ವಿರುದ್ಧ ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಕೂಡ ಆರಂಭದಲ್ಲಿ, ಸ್ಥಳೀಯ ಪೇಸ್ಟ್ರಿ ಅಂಗಡಿಯಲ್ಲಿ ಇವರನ್ನು ಬಿಟ್ಟು ಶಾಸಕರ ಮಗ ಹೊರಟು ಹೋಗಿದ್ದರಿಂದ ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.”ಆರನೇ ಆರೋಪಿ ಇನ್ನೋವಾದಲ್ಲಿ (ಕಾರು) ಸ್ವಲ್ಪ ದೂರ ಪ್ರಯಾಣಿಸಿದ್ದಾರೆ. ನಂತರ ಫೋನ್ ಕರೆ ಬಂದಿದ್ದರಿಂದ ಹಿಂತಿರುಗಿದ ಬಳಿಕ ಐದು ಜನರು ಅತ್ಯಾಚಾರ ಎಸಗಿದ್ದಾರೆ” ಎಂದು ಕಮಿಷನರ್ ತಿಳಿಸಿದ್ದಾರೆ.

“ಮಧ್ಯಾಹ್ನ 3 ಗಂಟೆ ಸುಮಾರಿಗೆ ಪಬ್‌ನಲ್ಲಿಯೇ ಬಾಲಕಿಗೆ ಕಿರುಕುಳ ನೀಡಲು ಆರಂಭವಾಗಿದೆ. ಆಕೆಯ ಸ್ನೇಹಿತ ಹೋದ ನಂತರ ಸಂಜೆ 5:40 ರ ಸುಮಾರಿಗೆ ಆರೋಪಿಗಳು ಪಬ್‌ನ ಹೊರಗೆ ಇವರ ಕೈಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಾಗಿದ್ದು, “ರಾಜಕೀಯವಾಗಿ ಪ್ರಭಾವಿ” ಕುಟುಂಬಕ್ಕೆ ಸೇರಿದವರು” ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ.

ಪೊಲೀಸರ ಕೈಗೆ ಸಿಕ್ಕಿಬಿದ್ದ ಅಪ್ರಾಪ್ತರಲ್ಲಿ ಒಬ್ಬರು ರಾಜ್ಯದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯ ಸ್ಥಳೀಯ ನಾಯಕರೊಬ್ಬರ ಪುತ್ರ. ಇನ್ನೋರ್ವ ಅಪ್ರಾಪ್ತ ಸಂಗ ರೆಡ್ಡಿಯ ಟಿಆರ್‌ಎಸ್ ಮುಖಂಡರೊಬ್ಬರ ಪುತ್ರರಾಗಿದ್ದಾರೆ.

ಮೇ 28 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ ಪ್ರದೇಶದಲ್ಲಿ ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದಾಗ 17 ವರ್ಷದ ಬಾಲಕಿಯ ಮೇಲೆ ರಾಜಕೀಯ ಕುಟುಂಬಗಳ ಅಪ್ರಾಪ್ತ ವಯಸ್ಕರು ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.


ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ : ಸಂತ್ರಸ್ತೆಯ ವಿಡಿಯೋ ಹಂಚಿಕೊಂಡಿದ್ದ ಬಿಜೆಪಿ ಶಾಸಕನ ಮೇಲೆ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...