Homeಮುಖಪುಟಹೈದರಾಬಾದ್ ಗ್ಯಾಂಗ್ ರೇಪ್: ಗರಿಷ್ಠ ಶಿಕ್ಷೆಗಾಗಿ ಅಪ್ರಾಪ್ತ ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ಪೊಲೀಸರ ಮನವಿ

ಹೈದರಾಬಾದ್ ಗ್ಯಾಂಗ್ ರೇಪ್: ಗರಿಷ್ಠ ಶಿಕ್ಷೆಗಾಗಿ ಅಪ್ರಾಪ್ತ ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ಪೊಲೀಸರ ಮನವಿ

- Advertisement -
- Advertisement -

ಜುಬ್ಲಿ ಹಿಲ್ಸ್‌ನ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಇದರಲ್ಲಿ 18 ವರ್ಷದೊಳಗಿನ ಐವರು ಆರೋಪಿಗಳನ್ನು ವಯಸ್ಕರಂತೆ ವಿಚಾರಣೆಗೆ ಒಳಪಡಿಸಲು ಪೊಲೀಸರು ಒತ್ತಾಯಿಸಿದ್ದಾರೆ. ಇದರಿಂದಾಗಿ ಈ ಐವರು ಗರಿಷ್ಠ ಶಿಕ್ಷೆಗೆ ಗುರಿಯಾಗುತ್ತಾರೆ ಎಂಬುದು ಪೊಲೀಸರ ಮನವಿ.

ಹೈದರಾಬಾದ್ ಪೊಲೀಸರ ಮೇಲ್ಮನವಿಯನ್ನು ಸ್ವೀಕರಿಸುವುದು ಅಥವಾ ತಿರಸ್ಕರಿಸುವುದು ಬಾಲ ನ್ಯಾಯ ಮಂಡಳಿಯ ವಿವೇಚನೆಗೆ ಬಿಟ್ಟಿದೆ. ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಪೊಲೀಸರ ಉದ್ದೇಶವನ್ನು ತಿಳಿಸಿದ್ದಾರೆ. ಪೊಲೀಸರ ಈ ಮನವಿ ರಾಜಕೀಯ ವಲಯದಲ್ಲಿ ಬಿರುಗಾಳಿ ಬೀಸಿದೆ.

ಜುವೆನೈಲ್ ಜಸ್ಟೀಸ್ ಆಕ್ಟ್‌ಗೆ 2015 ರ ತಿದ್ದುಪಡಿಯ ಪ್ರಕಾರ 16-18 ವರ್ಷ ವಯಸ್ಸಿನ ಆರೋಫಿ “ಘೋರ ಅಪರಾಧ”ಕ್ಕಾಗಿ ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಪಡೆಯುತ್ತಾರೆ. ಇಲ್ಲದಿದ್ದರೆ, ಬಾಲಾಪರಾಧಿಗೆ ಮೂರು ವರ್ಷಗಳಿಗಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲಾಗುವುದಿಲ್ಲ.

ಈ ಪ್ರಕರಣದಲ್ಲಿ ಆರೋಪಿಗಳಿಗೆ “ಗರಿಷ್ಠ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು” ಪೊಲೀಸರು ನ್ಯಾಯಾಲಯಕ್ಕೆ ಈ ಮನವಿಯನ್ನು ಮಾಡಿದ್ದಾರೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಮಗನ ಮೃತದೇಹ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ 50 ಸಾವಿರಕ್ಕೆ ಬೇಡಿಕೆ, ಹಣಕ್ಕಾಗಿ ಭಿಕ್ಷೆ ಎತ್ತಿದ ವೃದ್ಧ ದಂಪತಿ

ಪ್ರಕರಣದಲ್ಲಿ ಎಲ್ಲಾ ಐದು ಕಿರಿಯರು 16 ಮತ್ತು 18 ವರ್ಷಗಳ ನಡುವೆ ಇದ್ದಾರೆ. ಅವರಲ್ಲಿ ಒಬ್ಬ ಆರೋಪಿಗೆ 18 ವರ್ಷ ತುಂಬಲು ಕೇವಲ ಒಂದು ತಿಂಗಳ ಕಡಿಮೆಯಿದೆ. ಇವರೆಲ್ಲರೂ ಪ್ರಭಾವಿ ರಾಜಕೀಯ ಕುಟುಂಬಗಳಿಂದ ಬಂದವರು ಅಥವಾ ಪ್ರಬಲ ರಾಜಕೀಯ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.

ಅಪ್ರಾಪ್ತ ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸುವ ಮೊದಲು ನ್ಯಾಯಾಲಯವು ಮೂರು ಮಾನದಂಡಗಳನ್ನು ಅನುಸರಿಸುತ್ತದೆ. ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ, ಮುಂದಿನ ಪರಿಣಾಮಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಅಪರಾಧದ ಸಂದರ್ಭಗಳನ್ನು ಗಣನೆಗೆ ತೆಗೆದುಕೊಂಡು ನಿಧಾಋ ತೆಗೆದುಕೊಳ್ಳುತ್ತದೆ.

18 ವರ್ಷದ ವಯಸ್ಕ ಆರೋಪಿ ಸದುದ್ದೀನ್ ಮಲಿಕ್ ಸೇರಿದಂತೆ ಮೊದಲ ಐವರು ಆರೋಪಿಗಳ ಮೇಲೆ ಸಾಮೂಹಿಕ ಅತ್ಯಾಚಾರ, ಅಪಹರಣ, ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು ಮತ್ತು POCSO ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.  ಆರನೇ ಆರೋಪಿ ಅತ್ಯಾಚಾರದಲ್ಲಿ ಭಾಗಿಯಾಗಿಲ್ಲ ಆದರೂ ಲೈಂಗಿಕ ದೌರ್ಜನ್ಯ ನಡೆಸಿರುವುದರಿಂದ ಆತನ ವಿರುದ್ಧ ಐಪಿಸಿ ಸೆಕ್ಷನ್ 354 (ಮಹಿಳೆಯ ವಿರುದ್ಧ ಅಪರಾಧ ಪ್ರಕರಣ) ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್‌ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದರು.

ಮೇ 28 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ ಪ್ರದೇಶದಲ್ಲಿ ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದಾಗ 17 ವರ್ಷದ ಬಾಲಕಿಯ ಮೇಲೆ ರಾಜಕೀಯ ಕುಟುಂಬಗಳ ಅಪ್ರಾಪ್ತ ವಯಸ್ಕರು ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.


ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್: AIMIM ಶಾಸಕನ ಪುತ್ರ ಸೇರಿದಂತೆ ಎಲ್ಲ ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...