Homeಮುಖಪುಟಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ

ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ

ಆರೋಪಿಗಳು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಸಿದು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಸುಳ್ಳಾಗಿದ್ದು, 10 ಕ್ಕೂ ಹೆಚ್ಚು ಪೊಲೀಸರ ವಿರುದ್ಧ ಕೊಲೆ ಪ್ರಕರಣ ಹೊರಿಸಲು ಆಯೋಗ ಶಿಫಾರಸು ಮಾಡಿದೆ

- Advertisement -
- Advertisement -

ತೆಲಂಗಾಣದ ಹೈದರಾಬಾದ್‌ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ಆರೋಪಿಗಳ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸುತ್ತಿರುವ ಸುಪ್ರೀಂಕೋರ್ಟ್ ನೇಮಿಸಿದ ತನಿಖಾ ಆಯೋಗ, ತನ್ನ ವರದಿಯಲ್ಲಿ ಎನ್‌ಕೌಂಟರ್ ಅನ್ನು ‘ನಕಲಿ’ ಎಂದು ಎಂದು ಶುಕ್ರವಾರ ಹೇಳಿದೆ. ಆರೋಪಿಗಳನ್ನು “ಉದ್ದೇಶಪೂರ್ವಕವಾಗಿ ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಗುಂಡು ಹಾರಿಸಲಾಗಿದೆ” ಎಂದು ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ.

ಎನ್‌ಕೌಂಟರ್‌ ಬಗ್ಗೆ ತನಿಖೆಗೆ ರಚಿಸಲಾಗಿರುವ ಸಿರ್ಪುರ್ಕರ್ ಆಯೋಗದ ವರದಿಯು, “ನಾವು ಪರಿಗಣಿಸಿದ ಅಭಿಪ್ರಾಯದಲ್ಲಿ, ಆರೋಪಿಗಳ ಮೇಲೆ ಉದ್ದೇಶಪೂರ್ವಕವಾಗಿ ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಗುಂಡು ಹಾರಿಸಿದ್ದಾರೆ. ಜೊತೆಗೆ ಗುಂಡಿನ ದಾಳಿಯಿಂದ ಅವರು ಸಾವಿಗೀಡಾಗುತ್ತಾರೆ ಎಂದು ತಿಳಿದೆ ಇದು ನಡೆದಿದೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರದಿ ಸಲ್ಲಿಕೆಯಾದ ನಂತರ, ಆಯೋಗದ ವರದಿಯ ಮೇಲೆ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ತಪ್ಪು ಮಾಡಿದವರನ್ನು ಎನ್‌ಕೌಂಟರ್‌ ಮಾಡುತ್ತೇವೆ: ತೆಲಂಗಾಣ ಸಚಿವರ ಎಚ್ಚರಿಕೆ

26 ವರ್ಷದ ಪಶುವೈದ್ಯೆಯೊಬ್ಬರು ಕ್ಲಿನಿಕ್‌ಗೆ ಭೇಟಿ ನೀಡಿ ಮನೆಗೆ ತೆರಳುತ್ತಿದ್ದಾಗ ಶಾದ್‌ನಗರದಲ್ಲಿ ಅತ್ಯಾಚಾರ ನಡೆಸಿ ಅವರನ್ನು ಸಜೀವ ದಹನ ಮಾಡಲಾಗಿದೆ ಎಂದು ವರದಿಯಾಗಿತ್ತು. ವೈದ್ಯೆಯ ಶವ ಹೆದ್ದಾರಿಯ ಅಂಡರ್‌ಪಾಸ್‌ನಲ್ಲಿ ಪತ್ತೆಯಾಗಿತ್ತು.

ಇದರ ನಂತರ ಬಂಧನಕ್ಕೆ ಒಳಗಾಗಿದ್ದ ನಾಲ್ವರು ಆರೋಪಿಗಳಾದ ಜೊಲ್ಲು ಶಿವ, ಮೊಹಮ್ಮದ್ ಆರಿಫ್, ಜೊಲ್ಲು ನವೀನ್ ಮತ್ತು ಚೆನ್ನಕೇಶವುಲು ಅವರು 2019 ರಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟಿದ್ದರು. ಆಪಾದಿತ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೂರು ಸದಸ್ಯರ ಆಯೋಗವನ್ನು ನೇಮಿಸಿತ್ತು. ಆಯೋಗವು ತನ್ನ ವರದಿಯಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದೆ.

ಆರೋಪಿಗಳು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಸುಳ್ಳು ಎಂದು ಆಯೋಗವು ಹೇಳಿದ್ದು, 10 ಕ್ಕೂ ಹೆಚ್ಚು ಪೊಲೀಸರ ವಿರುದ್ಧ ಕೊಲೆ ಆರೋಪಗಳನ್ನು ಹೊರಿಸಲು ಶಿಫಾರಸು ಮಾಡಿದೆ.

ಇದನ್ನೂ ಓದಿ: ತೆಲಂಗಾಣ ಎನ್‌ಕೌಂಟರ್‌: ಶವಗಳನ್ನು ರಕ್ಷಿಸಲು ಶೀತಲ ಪೆಟ್ಟಿಗೆಗಳ ಕೊರತೆ – ವೈದ್ಯರ ಪರದಾಟ

“ದಾಖಲೆಯಲ್ಲಿರುವ ಸಂಪೂರ್ಣ ವಿಷಯವನ್ನು ಪರಿಗಣಿಸಿದ ನಂತರ, ಮೃತರು 06.12.2019 ರ ಘಟನೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳುವುದು, ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವುದು, ಪೊಲೀಸರ ಮೇಲೆ ಹಲ್ಲೆ ಮತ್ತು ಗುಂಡು ಹಾರಿಸುವುದು ಮುಂತಾದ ಯಾವುದೇ ಅಪರಾಧವನ್ನು ಮಾಡಿಲ್ಲ ಎಂದು ನಾವು ತೀರ್ಮಾನಿಸುತ್ತೇವೆ” ಎಂದು ತನಿಖಾ ಆಯೋಗದ ವರದಿ ಹೇಳಿದೆ.

ನ್ಯಾಯಮೂರ್ತಿ ಸಿರ್ಪುರ್ಕರ್ ನೇತೃತ್ವದ ಆಯೋಗವು ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ‘ಸುಗಮಗೊಳಿಸಲು’ ಕೂಡಾ ಶಿಫಾರಸುಗಳನ್ನು ಮಾಡಿದೆ. ಎಫ್‌ಐಆರ್ ನೋಂದಣಿ, ಬಂಧನ ಪ್ರಕ್ರಿಯೆಗಳಿಗೆ ಸಂಬಂಧಿಸಿದ ಕಾನೂನುಗಳ ಕಡ್ಡಾಯ ಅನುಸರಣೆ, ಬಾಡಿ ಕ್ಯಾಮೆರಾಗಳ ಬಳಕೆ ಮತ್ತು ಎಲ್ಲಾ ತನಿಖಾ ಪ್ರಕ್ರಿಯೆಗಳ ಕಡ್ಡಾಯ ವೀಡಿಯೊಗ್ರಫಿಗೆ ಸಂಬಂಧಿಸಿದಂತೆ ಶಿಫಾರಸುಗಳನ್ನು ಮಾಡಲಾಗಿದೆ.

ತನಿಖೆ ಪೂರ್ಣಗೊಂಡು ಅಂತಿಮ ವರದಿಯನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಸಲ್ಲಿಸುವವರೆಗೆ ಯಾವುದೇ ಪೊಲೀಸ್ ಅಧಿಕಾರಿಯು ತನಿಖೆಯಲ್ಲಿರುವ ಅಪರಾಧಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ನಡೆಸಬಾರದು ಎಂದು ಅದು ಸೂಚಿಸಿದೆ.

ಇದನ್ನೂ ಓದಿ: ತೆಲಂಗಾಣ ಎನ್‌ಕೌಂಟರ್‌ನಲ್ಲಿ ಭಾಗಿಯಾದ ಪೊಲೀಸರ ವಿರುದ್ಧ ಸುಪ್ರೀಂನಲ್ಲಿ ದೂರು ದಾಖಲು

ಪೊಲೀಸ್ ಠಾಣೆಯು ತನಿಖೆಯ ಕುರಿತು ಅಪ್‌ಡೇಟ್‌ಗಳನ್ನು ಪತ್ರಿಕಾ ಟಿಪ್ಪಣಿಯನ್ನು ನೀಡಬಹುದು, ಆದರೆ ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಬಹಿರಂಗಪಡಿಸಬಾರದು ಎಂದು ಅದು ಹೇಳಿದೆ. ಜೊತೆಗೆ ಸುಳ್ಳು ಸಾಕ್ಷಿ – ಸುಳ್ಳು ಸಾಕ್ಷ್ಯ ನೀಡಿದವರಿಗೆ ಶಿಕ್ಷಿಸಲು ಪರಿಣಾಮಕಾರಿ ಕ್ರಮವನ್ನು ರಚಿಸಲು ಆಯೋಗವು ಶಿಫಾರಸು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...