Homeಮುಖಪುಟಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ

ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ

ಆರೋಪಿಗಳು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಸಿದು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಸುಳ್ಳಾಗಿದ್ದು, 10 ಕ್ಕೂ ಹೆಚ್ಚು ಪೊಲೀಸರ ವಿರುದ್ಧ ಕೊಲೆ ಪ್ರಕರಣ ಹೊರಿಸಲು ಆಯೋಗ ಶಿಫಾರಸು ಮಾಡಿದೆ

- Advertisement -
- Advertisement -

ತೆಲಂಗಾಣದ ಹೈದರಾಬಾದ್‌ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ಆರೋಪಿಗಳ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸುತ್ತಿರುವ ಸುಪ್ರೀಂಕೋರ್ಟ್ ನೇಮಿಸಿದ ತನಿಖಾ ಆಯೋಗ, ತನ್ನ ವರದಿಯಲ್ಲಿ ಎನ್‌ಕೌಂಟರ್ ಅನ್ನು ‘ನಕಲಿ’ ಎಂದು ಎಂದು ಶುಕ್ರವಾರ ಹೇಳಿದೆ. ಆರೋಪಿಗಳನ್ನು “ಉದ್ದೇಶಪೂರ್ವಕವಾಗಿ ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಗುಂಡು ಹಾರಿಸಲಾಗಿದೆ” ಎಂದು ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ.

ಎನ್‌ಕೌಂಟರ್‌ ಬಗ್ಗೆ ತನಿಖೆಗೆ ರಚಿಸಲಾಗಿರುವ ಸಿರ್ಪುರ್ಕರ್ ಆಯೋಗದ ವರದಿಯು, “ನಾವು ಪರಿಗಣಿಸಿದ ಅಭಿಪ್ರಾಯದಲ್ಲಿ, ಆರೋಪಿಗಳ ಮೇಲೆ ಉದ್ದೇಶಪೂರ್ವಕವಾಗಿ ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಗುಂಡು ಹಾರಿಸಿದ್ದಾರೆ. ಜೊತೆಗೆ ಗುಂಡಿನ ದಾಳಿಯಿಂದ ಅವರು ಸಾವಿಗೀಡಾಗುತ್ತಾರೆ ಎಂದು ತಿಳಿದೆ ಇದು ನಡೆದಿದೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರದಿ ಸಲ್ಲಿಕೆಯಾದ ನಂತರ, ಆಯೋಗದ ವರದಿಯ ಮೇಲೆ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ತಪ್ಪು ಮಾಡಿದವರನ್ನು ಎನ್‌ಕೌಂಟರ್‌ ಮಾಡುತ್ತೇವೆ: ತೆಲಂಗಾಣ ಸಚಿವರ ಎಚ್ಚರಿಕೆ

26 ವರ್ಷದ ಪಶುವೈದ್ಯೆಯೊಬ್ಬರು ಕ್ಲಿನಿಕ್‌ಗೆ ಭೇಟಿ ನೀಡಿ ಮನೆಗೆ ತೆರಳುತ್ತಿದ್ದಾಗ ಶಾದ್‌ನಗರದಲ್ಲಿ ಅತ್ಯಾಚಾರ ನಡೆಸಿ ಅವರನ್ನು ಸಜೀವ ದಹನ ಮಾಡಲಾಗಿದೆ ಎಂದು ವರದಿಯಾಗಿತ್ತು. ವೈದ್ಯೆಯ ಶವ ಹೆದ್ದಾರಿಯ ಅಂಡರ್‌ಪಾಸ್‌ನಲ್ಲಿ ಪತ್ತೆಯಾಗಿತ್ತು.

ಇದರ ನಂತರ ಬಂಧನಕ್ಕೆ ಒಳಗಾಗಿದ್ದ ನಾಲ್ವರು ಆರೋಪಿಗಳಾದ ಜೊಲ್ಲು ಶಿವ, ಮೊಹಮ್ಮದ್ ಆರಿಫ್, ಜೊಲ್ಲು ನವೀನ್ ಮತ್ತು ಚೆನ್ನಕೇಶವುಲು ಅವರು 2019 ರಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟಿದ್ದರು. ಆಪಾದಿತ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೂರು ಸದಸ್ಯರ ಆಯೋಗವನ್ನು ನೇಮಿಸಿತ್ತು. ಆಯೋಗವು ತನ್ನ ವರದಿಯಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದೆ.

ಆರೋಪಿಗಳು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಸುಳ್ಳು ಎಂದು ಆಯೋಗವು ಹೇಳಿದ್ದು, 10 ಕ್ಕೂ ಹೆಚ್ಚು ಪೊಲೀಸರ ವಿರುದ್ಧ ಕೊಲೆ ಆರೋಪಗಳನ್ನು ಹೊರಿಸಲು ಶಿಫಾರಸು ಮಾಡಿದೆ.

ಇದನ್ನೂ ಓದಿ: ತೆಲಂಗಾಣ ಎನ್‌ಕೌಂಟರ್‌: ಶವಗಳನ್ನು ರಕ್ಷಿಸಲು ಶೀತಲ ಪೆಟ್ಟಿಗೆಗಳ ಕೊರತೆ – ವೈದ್ಯರ ಪರದಾಟ

“ದಾಖಲೆಯಲ್ಲಿರುವ ಸಂಪೂರ್ಣ ವಿಷಯವನ್ನು ಪರಿಗಣಿಸಿದ ನಂತರ, ಮೃತರು 06.12.2019 ರ ಘಟನೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳುವುದು, ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವುದು, ಪೊಲೀಸರ ಮೇಲೆ ಹಲ್ಲೆ ಮತ್ತು ಗುಂಡು ಹಾರಿಸುವುದು ಮುಂತಾದ ಯಾವುದೇ ಅಪರಾಧವನ್ನು ಮಾಡಿಲ್ಲ ಎಂದು ನಾವು ತೀರ್ಮಾನಿಸುತ್ತೇವೆ” ಎಂದು ತನಿಖಾ ಆಯೋಗದ ವರದಿ ಹೇಳಿದೆ.

ನ್ಯಾಯಮೂರ್ತಿ ಸಿರ್ಪುರ್ಕರ್ ನೇತೃತ್ವದ ಆಯೋಗವು ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ‘ಸುಗಮಗೊಳಿಸಲು’ ಕೂಡಾ ಶಿಫಾರಸುಗಳನ್ನು ಮಾಡಿದೆ. ಎಫ್‌ಐಆರ್ ನೋಂದಣಿ, ಬಂಧನ ಪ್ರಕ್ರಿಯೆಗಳಿಗೆ ಸಂಬಂಧಿಸಿದ ಕಾನೂನುಗಳ ಕಡ್ಡಾಯ ಅನುಸರಣೆ, ಬಾಡಿ ಕ್ಯಾಮೆರಾಗಳ ಬಳಕೆ ಮತ್ತು ಎಲ್ಲಾ ತನಿಖಾ ಪ್ರಕ್ರಿಯೆಗಳ ಕಡ್ಡಾಯ ವೀಡಿಯೊಗ್ರಫಿಗೆ ಸಂಬಂಧಿಸಿದಂತೆ ಶಿಫಾರಸುಗಳನ್ನು ಮಾಡಲಾಗಿದೆ.

ತನಿಖೆ ಪೂರ್ಣಗೊಂಡು ಅಂತಿಮ ವರದಿಯನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಸಲ್ಲಿಸುವವರೆಗೆ ಯಾವುದೇ ಪೊಲೀಸ್ ಅಧಿಕಾರಿಯು ತನಿಖೆಯಲ್ಲಿರುವ ಅಪರಾಧಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ನಡೆಸಬಾರದು ಎಂದು ಅದು ಸೂಚಿಸಿದೆ.

ಇದನ್ನೂ ಓದಿ: ತೆಲಂಗಾಣ ಎನ್‌ಕೌಂಟರ್‌ನಲ್ಲಿ ಭಾಗಿಯಾದ ಪೊಲೀಸರ ವಿರುದ್ಧ ಸುಪ್ರೀಂನಲ್ಲಿ ದೂರು ದಾಖಲು

ಪೊಲೀಸ್ ಠಾಣೆಯು ತನಿಖೆಯ ಕುರಿತು ಅಪ್‌ಡೇಟ್‌ಗಳನ್ನು ಪತ್ರಿಕಾ ಟಿಪ್ಪಣಿಯನ್ನು ನೀಡಬಹುದು, ಆದರೆ ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಬಹಿರಂಗಪಡಿಸಬಾರದು ಎಂದು ಅದು ಹೇಳಿದೆ. ಜೊತೆಗೆ ಸುಳ್ಳು ಸಾಕ್ಷಿ – ಸುಳ್ಳು ಸಾಕ್ಷ್ಯ ನೀಡಿದವರಿಗೆ ಶಿಕ್ಷಿಸಲು ಪರಿಣಾಮಕಾರಿ ಕ್ರಮವನ್ನು ರಚಿಸಲು ಆಯೋಗವು ಶಿಫಾರಸು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...