Homeಮುಖಪುಟಹೈದರಾಬಾದ್ ಗ್ಯಾಂಗ್ ರೇಪ್: ಇಬ್ಬರ ಬಂಧನ, ಮೂವರು ಅಪ್ರಾಪ್ತರ ಪತ್ತೆ

ಹೈದರಾಬಾದ್ ಗ್ಯಾಂಗ್ ರೇಪ್: ಇಬ್ಬರ ಬಂಧನ, ಮೂವರು ಅಪ್ರಾಪ್ತರ ಪತ್ತೆ

- Advertisement -
- Advertisement -

ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರಗೈದಿರುವ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಸಿಟಿವಿ ಫೂಟೆಜ್‌ಗಳ ಆಧಾರದಲ್ಲಿ ಐವರು ಆರೋಪಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಮೂವರು ಅಪ್ರಾಪ್ತ ಬಾಲಕರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ ಈ ಅಮಾನವೀಯ ಕೃತ್ಯ ಜರುಗಿದ್ದು, ಆರೋಪಿಗಳೆಲ್ಲರು ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಗೃಹ ಸಚಿವರ ಮೊಮ್ಮಗ ಭಾಗಿಯಾಗಿಲ್ಲ ಎಂದಿರುವ ಪೊಲೀಸರು, ಬಾಲಕಿಯ ಹೇಳಿಕೆ ಆಧರಿಸಿ IPC ಸೆಕ್ಷನ್ 354 ಮತ್ತು 323 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

“ಆರೋಪಿ ಸಾದುದ್ದೀನ್ ಮಲಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುರುತಿಸಲಾದ ಐದು ಜನರಲ್ಲಿ ಮೂವರು ಅಪ್ರಾಪ್ತರು” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ ವಲಯ) ಜೋಯಲ್ ಡೇವಿಸ್ ತಿಳಿಸಿದ್ದಾರೆ.

ಶನಿವಾರ ಸಂಜೆ 17 ವರ್ಷದ ಬಾಲಕಿಯೊಬ್ಬಳು ತನ್ನ ಸ್ನೇಹಿತನ ಜೊತೆ ಪಬ್ ಒಂದಕ್ಕೆ ತೆರಳಿದ್ದಾಳೆ. ಆದರೆ ಆತ ಬೇಗನೇ ಪಬ್‌ನಿಂದ ತೆರಳಿದ್ದಾನೆ. ಅಲ್ಲಿಂದ ಆರೋಪಿ ಬಾಲಕರು ಡ್ರಾಪ್ ಕೊಡುವುದಾಗಿ ಹೇಳಿ ಬಾಲಕಿಯೊಂದಿಗೆ ಸ್ನೇಹ ಸಾಧಿಸಿದ್ದು ಕಾರ್‌ನಲ್ಲಿ ತೆರಳಿದ್ದಾರೆ. ದಾರಿ ಮಧ್ಯೆ ಬೇಕರಿಗೂ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿದೆ.

ಆ ಐದು ಬಾಲಕರು ಕಾರನ್ನು ಪ್ರತಿಷ್ಟಿತ ಜ್ಯುಬಿಲಿ ಹಿಲ್ಸ್ ಎಂಬಲ್ಲಿ ನಿಲ್ಲಿಸಿ, ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಹೊರಗೆ ನಿಂತು ಕಾವಲು ಕಾದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಶಾಸಕನ ಮಗನೂ ಸಹ ಭಾಗಿಯಾಗಿದ್ದು, ಆದರೆ ಅತ್ಯಾಚಾರ ನಡೆಯುವ ಮುನ್ನವೇ ಕಾರಿನಿಂದ ಇಳಿದು ಹೋಗಿದ್ದಾನೆ ಎನ್ನಲಾಗಿದೆ. ಸಂಪೂರ್ಣ ವಿಚಾರಣೆಯ ಬಳಿಕವಷ್ಟೇ ಸತ್ಯ ಹೊರಬೀಳಲಿದೆ.

ಬಾಲಕಿ ಸದ್ಯ ಶಾಕ್‌ನಲ್ಲಿದ್ದಾಳೆ. ಪೂರ್ತಿ ವಿವರ ನೀಡುವ ಪರಿಸ್ಥಿತಿಯಲ್ಲಿಲ್ಲ. ಸದ್ಯಕ್ಕೆ ಸಿಕ್ಕಿರುವ ಮಾಹಿತಿಯ ಆಧಾರದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳು ಸೇರಿ ಇನ್ನಿತರ ತಾಂತ್ರಿಕ ಸಾಕ್ಷಿಗಳ ಆಧಾರದಲ್ಲಿ ತನಿಖೆ ನಡೆಸುತ್ತಿದ್ದೇವೆ. ಅಪ್ರಾಪ್ತರಿಗೆ ಕ್ಲಬ್‌ನಲ್ಲಿ ಹೇಗೆ ಪ್ರವೇಶ ನೀಡಲಾಯಿತು ಎನ್ನುವುದರ ಕುರಿತೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಜೋಲ್ ಡೇವಿಸ್ ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಐಟಿ ಸಚಿವ ಕೆಟಿ ರಾಮರಾವ್ ಅವರು ರಾಜ್ಯ ಗೃಹ ಸಚಿವ ಮೊಹಮ್ಮದ್ ಮಹಮೂದ್ ಅಲಿ, ಡಿಜಿಪಿ ಮತ್ತು ಹೈದರಾಬಾದ್ ನಗರ ಪೊಲೀಸ್ ಕಮಿಷನರ್‌ರವರಲ್ಲಿ ಮನವಿ ಮಾಡಿದ್ದಾರೆ. “ಆರೋಪಿಗಳ ಸ್ಥಾನಮಾನಗಳು ಅಥವಾ ಸಂಬಂಧಗಳನ್ನು ಲೆಕ್ಕಿಸದೆ ಯಾರನ್ನೂ ಬಿಡಬೇಡಿ” ಎಂದು ವಿನಂತಿಸಿದ್ದಾರೆ.

“ಅಪ್ರಾಪ್ತ ಬಾಲಕಿಯ ಅತ್ಯಾಚಾರದ ದುಃಖ ಮತ್ತು ನಾಚಿಕೆಗೇಡಿನ ಘಟನೆಯಲ್ಲಿ ನಾವು ಆ ಕುಟುಂಬದ ಬೆಂಬಲಕ್ಕೆ ನಿಂತಿದ್ದೇವೆ. ತೆಲಂಗಾಣ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ. ಮಹಿಳಾ ಸುರಕ್ಷತೆಯ ವಿಷಯದಲ್ಲಿ ನಾವು ಜೀರೋ ಸಹಿಷ್ಣುತೆಯ ದಾಖಲೆಯನ್ನು ಹೊಂದಿದ್ದೇವೆ” ಎಂದು ತೆಲಂಗಾಣ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಹೇಳಿದ್ದಾರೆ.

ಇದನ್ನೂ ಓದಿ: 8 ವರ್ಷಗಳ ನರೇಂದ್ರ ಮೋದಿ ಸರ್ಕಾರದ ವಿಚ್ಛಿದ್ರಕಾರಿ ಸಾಧನೆಗಳು

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...