Homeಮುಖಪುಟಹೈದರಾಬಾದ್ ಗ್ಯಾಂಗ್‌ರೇಪ್: ನಾಲ್ವರು ಆರೋಪಿಗಳು ಅಪ್ರಾಪ್ತರು - ಜಾಮೀನು ಮಂಜೂರು

ಹೈದರಾಬಾದ್ ಗ್ಯಾಂಗ್‌ರೇಪ್: ನಾಲ್ವರು ಆರೋಪಿಗಳು ಅಪ್ರಾಪ್ತರು – ಜಾಮೀನು ಮಂಜೂರು

ಇದೇ ಹೈದರಾಬಾದ್‌ನಲ್ಲಿ 2019ರಲ್ಲಿ ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ನಕಲಿ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿತ್ತು!

- Advertisement -
- Advertisement -

ಹೈದರಾಬಾದ್‌ನಲ್ಲಿ ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ರಾಜಕಾರಣಿಗಳು ಮತ್ತು ಪ್ರಭಾವಿಗಳ ಪುತ್ರರು ಸೇರಿ ನಡೆಸಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಅಪ್ರಾಪ್ತರು ಎಂದು ಪರಿಗಣಿಸಿರುವ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂಬ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದರು. 18 ವರ್ಷದ ವಯಸ್ಕ ಆರೋಪಿ ಸದುದ್ದೀನ್ ಮಲಿಕ್ ಸೇರಿದಂತೆ ಮೊದಲ ಐವರು ಆರೋಪಿಗಳ ಮೇಲೆ ಸಾಮೂಹಿಕ ಅತ್ಯಾಚಾರ, ಅಪಹರಣ, ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು ಮತ್ತು POCSO ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿತ್ತು.

ಪ್ರಕರಣದಲ್ಲಿ ಎಲ್ಲಾ ಐದು ಆರೋಪಿಗಳು ಕಿರಿಯರು 16 ಮತ್ತು 18 ವರ್ಷಗಳ ನಡುವೆ ಇದ್ದಾರೆ. ಅವರಲ್ಲಿ ಒಬ್ಬ ಆರೋಪಿಗೆ 18 ವರ್ಷ ತುಂಬಲು ಕೇವಲ ಒಂದು ತಿಂಗಳ ಕಡಿಮೆಯಿದೆ. ಇವರೆಲ್ಲರೂ ಪ್ರಭಾವಿ ರಾಜಕೀಯ ಕುಟುಂಬಗಳಿಂದ ಬಂದವರು ಅಥವಾ ಪ್ರಬಲ ರಾಜಕೀಯ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.

ಇದರಲ್ಲಿ 18 ವರ್ಷದೊಳಗಿನ ಐವರು ಆರೋಪಿಗಳನ್ನು ವಯಸ್ಕರಂತೆ ವಿಚಾರಣೆಗೆ ಒಳಪಡಿಸಲು ಪೊಲೀಸರು ಒತ್ತಾಯಿಸಿದ್ದರು. ಇದರಿಂದಾಗಿ ಈ ಐವರು ಗರಿಷ್ಠ ಶಿಕ್ಷೆಗೆ ಗುರಿಯಾಗುತ್ತಾರೆ ಎಂಬುದು ಪೊಲೀಸರ ವಾದವಾಗಿತ್ತು. ಆದರೆ ನ್ಯಾಯಾಲಯವು ಆ ಮನವಿಯನ್ನು ಪುರಸ್ಕರಿಸದ ಕಾರಣ ನಾಲ್ವರನ್ನು ಇಂದು ಬಿಡುಗಡೆ ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ

ಮೇ 28 ರಂದು ಈ ಘಟನೆ ನಡೆದಿತ್ತು. 17 ವರ್ಷದ ಬಾಲಕಿಯೊಬ್ಬಳು ತನ್ನ ಸ್ನೇಹಿತನ ಜೊತೆ ಪಬ್ ಒಂದಕ್ಕೆ ತೆರಳಿದ್ದಾಳೆ. ಆದರೆ ಆತ ಬೇಗನೇ ಪಬ್‌ನಿಂದ ತೆರಳಿದ್ದಾನೆ. ಅಲ್ಲಿಂದ ಆರೋಪಿ ಬಾಲಕರು ಡ್ರಾಪ್ ಕೊಡುವುದಾಗಿ ಹೇಳಿ ಬಾಲಕಿಯೊಂದಿಗೆ ಸ್ನೇಹ ಸಾಧಿಸಿದ್ದು ಕಾರ್‌ನಲ್ಲಿ ತೆರಳಿದ್ದಾರೆ. ಆ ಐದು ಬಾಲಕರು ಕಾರನ್ನು ಪ್ರತಿಷ್ಟಿತ ಜ್ಯುಬಿಲಿ ಹಿಲ್ಸ್ ಎಂಬಲ್ಲಿ ನಿಲ್ಲಿಸಿ, ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಹೊರಗೆ ನಿಂತು ಕಾವಲು ಕಾದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಶಾಸಕನ ಮಗನೂ ಸಹ ಭಾಗಿಯಾಗಿದ್ದು, ಆದರೆ ಅತ್ಯಾಚಾರ ನಡೆಯುವ ಮುನ್ನವೇ ಕಾರಿನಿಂದ ಇಳಿದು ಹೋಗಿದ್ದಾನೆ ಎನ್ನಲಾಗಿತ್ತು.

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಆಡಳಿತರೂಢ ಟಿಆರ್‌ಎಸ್ ಪಕ್ಷ ಆರೋಪಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ ಸಹ ಪ್ರಕರಣದ ಸಂಪೂರ್ಣ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

ಹಿಂದೆ ನಡೆದಿತ್ತು ನಕಲಿ ಎನ್‌ಕೌಂಟರ್

ಇದೇ ಹೈದರಾಬಾದ್‌ನಲ್ಲಿ 2019ರ ನವೆಂಬರ್‌ನಲ್ಲಿ ಪಶುವೈದ್ಯೆಯ ಮೇಲೆ ನಾಲ್ವರು ಅತ್ಯಾಚಾರವೆಸಗಿ ಸುಟ್ಟು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದರು. ನಾಲ್ವರು ಆರೋಪಿಗಳಾದ ಜೊಲ್ಲು ಶಿವ, ಮೊಹಮ್ಮದ್ ಆರಿಫ್, ಜೊಲ್ಲು ನವೀನ್ ಮತ್ತು ಚೆನ್ನಕೇಶವುಲುರನ್ನು 2019ರ ಡಿಸೆಂಬರ್ 06 ರ ಮುಂಜಾನೆ 03 ಗಂಟೆಯ ಸಮಯದಲ್ಲಿ ಹೈದರಾಬಾದ್ ಪೊಲೀಸರು ಗುಂಡಿಟ್ಟು ಕೊಂದಿದ್ದರು. ಅದನ್ನು ಎನ್‌ಕೌಂಟರ್ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದರು.

ಆದರೆ ಸುಪ್ರೀಂಕೋರ್ಟ್ ನೇಮಿಸಿದ ತನಿಖಾ ಆಯೋಗ, ತನ್ನ ವರದಿಯಲ್ಲಿ ಎನ್‌ಕೌಂಟರ್ ಅನ್ನು ‘ನಕಲಿ’ ಎಂದು ಕರೆದಿದೆ. ಆರೋಪಿಗಳನ್ನು “ಉದ್ದೇಶಪೂರ್ವಕವಾಗಿ ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಗುಂಡು ಹಾರಿಸಲಾಗಿದೆ” ಎಂದು ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ.

ಆರೋಪಿಗಳು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಸುಳ್ಳು ಎಂದು ಆಯೋಗವು ಹೇಳಿದ್ದು, 10 ಕ್ಕೂ ಹೆಚ್ಚು ಪೊಲೀಸರ ವಿರುದ್ಧ ಕೊಲೆ ಆರೋಪಗಳನ್ನು ಹೊರಿಸಲು ಶಿಫಾರಸು ಮಾಡಿದೆ.

ಪ್ರಸ್ತುತ ಅಪ್ರಾಪ್ತ ಬಾಲಕರ ಪ್ರಕರಣದಲ್ಲಿ ಅವರಿಗೆ ಕೇವಲ ಎರಡು ತಿಂಗಳಿನಲ್ಲಿ ಜಾಮೀನು ದೊರೆತು ಬಿಡುಗಡೆಗೊಂಡಿದ್ದಾರೆ. ಅಪ್ರಾಪ್ತರಾದ ಕಾರಣ ಅವರಿಗೆ ಜಾಮೀನು ನೀಡಿರುವುದು ಸಮರ್ಪಕ ಎನಿಸಿಕೊಂಡರು ಅವರು ಪ್ರಭಾವಿ ರಾಜಕೀಯ ಹಿನ್ನೆಲೆಯಿಂದ ಬಂದ ಕಾರಣಕ್ಕೆ ಜಾಮೀನು ದೊರೆತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಪಶು ವೈದ್ಯೆಯ ಪ್ರಕರಣದಲ್ಲಿ ಆರೋಪಿಗಳು ತಳಸಮುದಾಯ, ಬಡವರಾದ ಕಾರಣಕ್ಕೆ ಸಮರ್ಪಕ ವಿಚಾರಣೆ ಸಹ ನಡೆಸದೇ 10 ದಿನಗಳಲ್ಲಿಯೇ ಕೊಂದು ಹಾಕಲಾಯಿತು. ಇದೇ ವಿಷಯವನ್ನು ಆಧರಿಸಿ ಮಲೆಯಾಳಂನಲ್ಲಿ ಜನಗಣಮನ ಎಂಬ ಸಿನಿಮಾ ಸಹ ತಯಾರಾಗಿ ಸಾಕಷ್ಟು ಗಮನ ಸೆಳೆದಿದೆ.

ಇದನ್ನೂ ಓದಿ: ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...