Homeಮುಖಪುಟಹೈದರಾಬಾದ್ ಗ್ಯಾಂಗ್‌ರೇಪ್: ನಾಲ್ವರು ಆರೋಪಿಗಳು ಅಪ್ರಾಪ್ತರು - ಜಾಮೀನು ಮಂಜೂರು

ಹೈದರಾಬಾದ್ ಗ್ಯಾಂಗ್‌ರೇಪ್: ನಾಲ್ವರು ಆರೋಪಿಗಳು ಅಪ್ರಾಪ್ತರು – ಜಾಮೀನು ಮಂಜೂರು

ಇದೇ ಹೈದರಾಬಾದ್‌ನಲ್ಲಿ 2019ರಲ್ಲಿ ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ನಕಲಿ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿತ್ತು!

- Advertisement -
- Advertisement -

ಹೈದರಾಬಾದ್‌ನಲ್ಲಿ ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ರಾಜಕಾರಣಿಗಳು ಮತ್ತು ಪ್ರಭಾವಿಗಳ ಪುತ್ರರು ಸೇರಿ ನಡೆಸಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಅಪ್ರಾಪ್ತರು ಎಂದು ಪರಿಗಣಿಸಿರುವ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂಬ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದರು. 18 ವರ್ಷದ ವಯಸ್ಕ ಆರೋಪಿ ಸದುದ್ದೀನ್ ಮಲಿಕ್ ಸೇರಿದಂತೆ ಮೊದಲ ಐವರು ಆರೋಪಿಗಳ ಮೇಲೆ ಸಾಮೂಹಿಕ ಅತ್ಯಾಚಾರ, ಅಪಹರಣ, ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು ಮತ್ತು POCSO ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿತ್ತು.

ಪ್ರಕರಣದಲ್ಲಿ ಎಲ್ಲಾ ಐದು ಆರೋಪಿಗಳು ಕಿರಿಯರು 16 ಮತ್ತು 18 ವರ್ಷಗಳ ನಡುವೆ ಇದ್ದಾರೆ. ಅವರಲ್ಲಿ ಒಬ್ಬ ಆರೋಪಿಗೆ 18 ವರ್ಷ ತುಂಬಲು ಕೇವಲ ಒಂದು ತಿಂಗಳ ಕಡಿಮೆಯಿದೆ. ಇವರೆಲ್ಲರೂ ಪ್ರಭಾವಿ ರಾಜಕೀಯ ಕುಟುಂಬಗಳಿಂದ ಬಂದವರು ಅಥವಾ ಪ್ರಬಲ ರಾಜಕೀಯ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.

ಇದರಲ್ಲಿ 18 ವರ್ಷದೊಳಗಿನ ಐವರು ಆರೋಪಿಗಳನ್ನು ವಯಸ್ಕರಂತೆ ವಿಚಾರಣೆಗೆ ಒಳಪಡಿಸಲು ಪೊಲೀಸರು ಒತ್ತಾಯಿಸಿದ್ದರು. ಇದರಿಂದಾಗಿ ಈ ಐವರು ಗರಿಷ್ಠ ಶಿಕ್ಷೆಗೆ ಗುರಿಯಾಗುತ್ತಾರೆ ಎಂಬುದು ಪೊಲೀಸರ ವಾದವಾಗಿತ್ತು. ಆದರೆ ನ್ಯಾಯಾಲಯವು ಆ ಮನವಿಯನ್ನು ಪುರಸ್ಕರಿಸದ ಕಾರಣ ನಾಲ್ವರನ್ನು ಇಂದು ಬಿಡುಗಡೆ ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ

ಮೇ 28 ರಂದು ಈ ಘಟನೆ ನಡೆದಿತ್ತು. 17 ವರ್ಷದ ಬಾಲಕಿಯೊಬ್ಬಳು ತನ್ನ ಸ್ನೇಹಿತನ ಜೊತೆ ಪಬ್ ಒಂದಕ್ಕೆ ತೆರಳಿದ್ದಾಳೆ. ಆದರೆ ಆತ ಬೇಗನೇ ಪಬ್‌ನಿಂದ ತೆರಳಿದ್ದಾನೆ. ಅಲ್ಲಿಂದ ಆರೋಪಿ ಬಾಲಕರು ಡ್ರಾಪ್ ಕೊಡುವುದಾಗಿ ಹೇಳಿ ಬಾಲಕಿಯೊಂದಿಗೆ ಸ್ನೇಹ ಸಾಧಿಸಿದ್ದು ಕಾರ್‌ನಲ್ಲಿ ತೆರಳಿದ್ದಾರೆ. ಆ ಐದು ಬಾಲಕರು ಕಾರನ್ನು ಪ್ರತಿಷ್ಟಿತ ಜ್ಯುಬಿಲಿ ಹಿಲ್ಸ್ ಎಂಬಲ್ಲಿ ನಿಲ್ಲಿಸಿ, ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಹೊರಗೆ ನಿಂತು ಕಾವಲು ಕಾದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಶಾಸಕನ ಮಗನೂ ಸಹ ಭಾಗಿಯಾಗಿದ್ದು, ಆದರೆ ಅತ್ಯಾಚಾರ ನಡೆಯುವ ಮುನ್ನವೇ ಕಾರಿನಿಂದ ಇಳಿದು ಹೋಗಿದ್ದಾನೆ ಎನ್ನಲಾಗಿತ್ತು.

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಆಡಳಿತರೂಢ ಟಿಆರ್‌ಎಸ್ ಪಕ್ಷ ಆರೋಪಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ ಸಹ ಪ್ರಕರಣದ ಸಂಪೂರ್ಣ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

ಹಿಂದೆ ನಡೆದಿತ್ತು ನಕಲಿ ಎನ್‌ಕೌಂಟರ್

ಇದೇ ಹೈದರಾಬಾದ್‌ನಲ್ಲಿ 2019ರ ನವೆಂಬರ್‌ನಲ್ಲಿ ಪಶುವೈದ್ಯೆಯ ಮೇಲೆ ನಾಲ್ವರು ಅತ್ಯಾಚಾರವೆಸಗಿ ಸುಟ್ಟು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದರು. ನಾಲ್ವರು ಆರೋಪಿಗಳಾದ ಜೊಲ್ಲು ಶಿವ, ಮೊಹಮ್ಮದ್ ಆರಿಫ್, ಜೊಲ್ಲು ನವೀನ್ ಮತ್ತು ಚೆನ್ನಕೇಶವುಲುರನ್ನು 2019ರ ಡಿಸೆಂಬರ್ 06 ರ ಮುಂಜಾನೆ 03 ಗಂಟೆಯ ಸಮಯದಲ್ಲಿ ಹೈದರಾಬಾದ್ ಪೊಲೀಸರು ಗುಂಡಿಟ್ಟು ಕೊಂದಿದ್ದರು. ಅದನ್ನು ಎನ್‌ಕೌಂಟರ್ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದರು.

ಆದರೆ ಸುಪ್ರೀಂಕೋರ್ಟ್ ನೇಮಿಸಿದ ತನಿಖಾ ಆಯೋಗ, ತನ್ನ ವರದಿಯಲ್ಲಿ ಎನ್‌ಕೌಂಟರ್ ಅನ್ನು ‘ನಕಲಿ’ ಎಂದು ಕರೆದಿದೆ. ಆರೋಪಿಗಳನ್ನು “ಉದ್ದೇಶಪೂರ್ವಕವಾಗಿ ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಗುಂಡು ಹಾರಿಸಲಾಗಿದೆ” ಎಂದು ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ.

ಆರೋಪಿಗಳು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಸುಳ್ಳು ಎಂದು ಆಯೋಗವು ಹೇಳಿದ್ದು, 10 ಕ್ಕೂ ಹೆಚ್ಚು ಪೊಲೀಸರ ವಿರುದ್ಧ ಕೊಲೆ ಆರೋಪಗಳನ್ನು ಹೊರಿಸಲು ಶಿಫಾರಸು ಮಾಡಿದೆ.

ಪ್ರಸ್ತುತ ಅಪ್ರಾಪ್ತ ಬಾಲಕರ ಪ್ರಕರಣದಲ್ಲಿ ಅವರಿಗೆ ಕೇವಲ ಎರಡು ತಿಂಗಳಿನಲ್ಲಿ ಜಾಮೀನು ದೊರೆತು ಬಿಡುಗಡೆಗೊಂಡಿದ್ದಾರೆ. ಅಪ್ರಾಪ್ತರಾದ ಕಾರಣ ಅವರಿಗೆ ಜಾಮೀನು ನೀಡಿರುವುದು ಸಮರ್ಪಕ ಎನಿಸಿಕೊಂಡರು ಅವರು ಪ್ರಭಾವಿ ರಾಜಕೀಯ ಹಿನ್ನೆಲೆಯಿಂದ ಬಂದ ಕಾರಣಕ್ಕೆ ಜಾಮೀನು ದೊರೆತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಪಶು ವೈದ್ಯೆಯ ಪ್ರಕರಣದಲ್ಲಿ ಆರೋಪಿಗಳು ತಳಸಮುದಾಯ, ಬಡವರಾದ ಕಾರಣಕ್ಕೆ ಸಮರ್ಪಕ ವಿಚಾರಣೆ ಸಹ ನಡೆಸದೇ 10 ದಿನಗಳಲ್ಲಿಯೇ ಕೊಂದು ಹಾಕಲಾಯಿತು. ಇದೇ ವಿಷಯವನ್ನು ಆಧರಿಸಿ ಮಲೆಯಾಳಂನಲ್ಲಿ ಜನಗಣಮನ ಎಂಬ ಸಿನಿಮಾ ಸಹ ತಯಾರಾಗಿ ಸಾಕಷ್ಟು ಗಮನ ಸೆಳೆದಿದೆ.

ಇದನ್ನೂ ಓದಿ: ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...