Homeಮುಖಪುಟಹೈದರಾಬಾದ್ ಪಾಲಿಕೆ ಚುನಾವಣೆ: 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ

ಹೈದರಾಬಾದ್ ಪಾಲಿಕೆ ಚುನಾವಣೆ: 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ

ಈಗಾಗಲೇ ಬಿಜೆಪಿ ನಾಯಕರು ಹೈದರಾಬಾದ್ ಪಾಲಿಕೆಯಲ್ಲಿ ತಾವೇ ಗೆದ್ದೆವು ಎಂದು ಟ್ವೀಟ್ ಮಾಡುತ್ತಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಉಚ್ಛರಿಸಿದ್ದಾರೆ.

- Advertisement -
- Advertisement -

ಹೈದರಾಬಾದ್ ಪಾಲಿಕೆ ಚುನಾವಣೆ ಈ ಬಾರಿ ದೇಶಾದ್ಯಂತ ಭಾರಿ ಕುತೂಹಲಕ್ಕ ಕಾರಣವಾಗಿತ್ತು. ಪಾಲಿಕೆ ಚುನಾವಣೆ ಪ್ರಚಾರಕ್ಕೆ ಬಿಜೆಪಿಯ ಘಟಾನುಘಟಿ ನಾಯಕರೇ ಕಣಕ್ಕಿಳಿದಿದ್ದರು. ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌’ (GHMC) ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ಫಲಿತಾಂಶ ಇಂದು ಹೊರ ಬೀಳಲಿದೆ.

150 ವಾರ್ಡ್‌ಗಳ ಹೈದರಾಬಾದ್ ಪಾಲಿಕೆ ಚುನಾವಣೆಗೆ ಡಿ.1ರಂದು ಮತದಾನ ನಡೆದಿತ್ತು. ಇಂದು ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾದ್ದು, ಸದ್ಯದ ವರದಿ ಪ್ರಕಾರ ಈವರೆಗೆ 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (TRS‌) 32 ಕ್ಷೇತ್ರಗಳಲ್ಲಿ ಮತ್ತು ಅಸಾದುದ್ದೀನ್ ಓವೈಸಿ ನೇತೃತ್ವದ  ಎಐಎಂಐಎಂ 17 ವಾರ್ಡ್‌‌ಗಳಲ್ಲಿ ಮುನ್ನಡೆ ಸಾಧಿಸಿವೆ. ಒಟ್ಟು 1,122 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇದನ್ನೂ ಓದಿ: ಹೈದರಾಬಾದ್: ಅತಿಕ್ರಮಣ ಪ್ರವೇಶ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ!

ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಹೈದರಾಬಾದ್‌ ಅನ್ನು ಭಾಗ್ಯನಗರವಾಗಿ ಮರುನಾಮಕರಣ ಮಾಡುವ ವಿಚಾರಗಳು, ಮತದಾರರ ಪಟ್ಟಿಯಲ್ಲಿ 30,000 ರಿಂದ 40,000 ರೋಹಿಂಗ್ಯಾಗಳಿದ್ದಾರೆ ಎಂಬ ಆರೋಪ,  ತೇಜಸ್ವಿ ಸೂರ್ಯ ಓವೈಸಿ ಅವರನ್ನು ಜಿನ್ನಾ ಅವರಿಗೆ ಹೋಲಿಸಿದ್ದರು.

ಸದ್ಯ 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿರುಬ ಬಗ್ಗೆ ತೆಲಂಗಾಣ ಬಿಜೆಪಿ ಸಂಸದ ಡಿ ಅರವಿಂದ್, ಜನ ಬದಲಾವಣೆ ಬಯಸಿದ್ದಾರೆ ಎಂಬುದರ ಸ್ಪಷ್ಟ ಸಂದೇಶ ಇದು ಎಂದಿದ್ದಾರೆ.

“ತೆಲಂಗಾಣದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶ, ದುಬ್ಬಾಕಾ ಉಪಚುನಾವಣೆ ಫಲಿತಾಂಶವನ್ನು ನೀವು ನೋಡಿದ್ದೀರಿ. ಈಗ ಪಾಲಿಕೆ ಸರದಿ. ಜನರು ಬದಲಾವಣೆಯನ್ನು ಬಯಸಿದ್ದಾರೆ ಎಂಬುದು ಟಿಆರ್‌ಎಸ್‌ಗೆ ಸ್ಪಷ್ಟ ಸಂದೇಶವಾಗಿದೆ. ನಾವು ಸಂಜೆಯವರೆಗೆ ಕಾಯೋಣ” ಎಂದು ತೆಲಂಗಾಣ ಬಿಜೆಪಿ ಸಂಸದ ಡಿ ಅರವಿಂದ್ ಹೇಳಿಕೆ ನೀಡಿದ್ದಾರೆ.

ಈಗಾಗಲೇ ಬಿಜೆಪಿ ನಾಯಕರು ಹೈದರಾಬಾದ್ ಪಾಲಿಕೆಯಲ್ಲಿ ತಾವೇ ಗೆದ್ದೆವು ಎಂದು ಟ್ವೀಟ್ ಮಾಡುತ್ತಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಉಚ್ಛರಿಸಿದ್ದಾರೆ.

2016ರ ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ ಚುನಾವಣೆಯಲ್ಲಿ ಟಿಆರ್‌ಎಸ್‌ 99, ಎಐಎಂಐಎಂ 44 ಗೆದ್ದರೆ ಉಳಿದ ಬಿಜೆಪಿ 4, ಕಾಂಗ್ರೆಸ್ 2 ಮತ್ತು ಟಿಡಿಪಿ 1 ಸ್ಥಾನಕ್ಕೆ ತೃಪ್ತಿ ಪಟ್ಟಿದ್ದವು.


ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...