Homeಮುಖಪುಟಹೈದರಾಬಾದ್ ಪಾಲಿಕೆ ಚುನಾವಣೆ: 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ

ಹೈದರಾಬಾದ್ ಪಾಲಿಕೆ ಚುನಾವಣೆ: 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ

ಈಗಾಗಲೇ ಬಿಜೆಪಿ ನಾಯಕರು ಹೈದರಾಬಾದ್ ಪಾಲಿಕೆಯಲ್ಲಿ ತಾವೇ ಗೆದ್ದೆವು ಎಂದು ಟ್ವೀಟ್ ಮಾಡುತ್ತಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಉಚ್ಛರಿಸಿದ್ದಾರೆ.

- Advertisement -
- Advertisement -

ಹೈದರಾಬಾದ್ ಪಾಲಿಕೆ ಚುನಾವಣೆ ಈ ಬಾರಿ ದೇಶಾದ್ಯಂತ ಭಾರಿ ಕುತೂಹಲಕ್ಕ ಕಾರಣವಾಗಿತ್ತು. ಪಾಲಿಕೆ ಚುನಾವಣೆ ಪ್ರಚಾರಕ್ಕೆ ಬಿಜೆಪಿಯ ಘಟಾನುಘಟಿ ನಾಯಕರೇ ಕಣಕ್ಕಿಳಿದಿದ್ದರು. ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌’ (GHMC) ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ಫಲಿತಾಂಶ ಇಂದು ಹೊರ ಬೀಳಲಿದೆ.

150 ವಾರ್ಡ್‌ಗಳ ಹೈದರಾಬಾದ್ ಪಾಲಿಕೆ ಚುನಾವಣೆಗೆ ಡಿ.1ರಂದು ಮತದಾನ ನಡೆದಿತ್ತು. ಇಂದು ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾದ್ದು, ಸದ್ಯದ ವರದಿ ಪ್ರಕಾರ ಈವರೆಗೆ 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (TRS‌) 32 ಕ್ಷೇತ್ರಗಳಲ್ಲಿ ಮತ್ತು ಅಸಾದುದ್ದೀನ್ ಓವೈಸಿ ನೇತೃತ್ವದ  ಎಐಎಂಐಎಂ 17 ವಾರ್ಡ್‌‌ಗಳಲ್ಲಿ ಮುನ್ನಡೆ ಸಾಧಿಸಿವೆ. ಒಟ್ಟು 1,122 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇದನ್ನೂ ಓದಿ: ಹೈದರಾಬಾದ್: ಅತಿಕ್ರಮಣ ಪ್ರವೇಶ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ!

ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಹೈದರಾಬಾದ್‌ ಅನ್ನು ಭಾಗ್ಯನಗರವಾಗಿ ಮರುನಾಮಕರಣ ಮಾಡುವ ವಿಚಾರಗಳು, ಮತದಾರರ ಪಟ್ಟಿಯಲ್ಲಿ 30,000 ರಿಂದ 40,000 ರೋಹಿಂಗ್ಯಾಗಳಿದ್ದಾರೆ ಎಂಬ ಆರೋಪ,  ತೇಜಸ್ವಿ ಸೂರ್ಯ ಓವೈಸಿ ಅವರನ್ನು ಜಿನ್ನಾ ಅವರಿಗೆ ಹೋಲಿಸಿದ್ದರು.

ಸದ್ಯ 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿರುಬ ಬಗ್ಗೆ ತೆಲಂಗಾಣ ಬಿಜೆಪಿ ಸಂಸದ ಡಿ ಅರವಿಂದ್, ಜನ ಬದಲಾವಣೆ ಬಯಸಿದ್ದಾರೆ ಎಂಬುದರ ಸ್ಪಷ್ಟ ಸಂದೇಶ ಇದು ಎಂದಿದ್ದಾರೆ.

“ತೆಲಂಗಾಣದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶ, ದುಬ್ಬಾಕಾ ಉಪಚುನಾವಣೆ ಫಲಿತಾಂಶವನ್ನು ನೀವು ನೋಡಿದ್ದೀರಿ. ಈಗ ಪಾಲಿಕೆ ಸರದಿ. ಜನರು ಬದಲಾವಣೆಯನ್ನು ಬಯಸಿದ್ದಾರೆ ಎಂಬುದು ಟಿಆರ್‌ಎಸ್‌ಗೆ ಸ್ಪಷ್ಟ ಸಂದೇಶವಾಗಿದೆ. ನಾವು ಸಂಜೆಯವರೆಗೆ ಕಾಯೋಣ” ಎಂದು ತೆಲಂಗಾಣ ಬಿಜೆಪಿ ಸಂಸದ ಡಿ ಅರವಿಂದ್ ಹೇಳಿಕೆ ನೀಡಿದ್ದಾರೆ.

ಈಗಾಗಲೇ ಬಿಜೆಪಿ ನಾಯಕರು ಹೈದರಾಬಾದ್ ಪಾಲಿಕೆಯಲ್ಲಿ ತಾವೇ ಗೆದ್ದೆವು ಎಂದು ಟ್ವೀಟ್ ಮಾಡುತ್ತಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಉಚ್ಛರಿಸಿದ್ದಾರೆ.

2016ರ ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ ಚುನಾವಣೆಯಲ್ಲಿ ಟಿಆರ್‌ಎಸ್‌ 99, ಎಐಎಂಐಎಂ 44 ಗೆದ್ದರೆ ಉಳಿದ ಬಿಜೆಪಿ 4, ಕಾಂಗ್ರೆಸ್ 2 ಮತ್ತು ಟಿಡಿಪಿ 1 ಸ್ಥಾನಕ್ಕೆ ತೃಪ್ತಿ ಪಟ್ಟಿದ್ದವು.


ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...