Homeಮುಖಪುಟಹೈದರಾಬಾದ್ ಪಾಲಿಕೆ ಚುನಾವಣೆ: 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ

ಹೈದರಾಬಾದ್ ಪಾಲಿಕೆ ಚುನಾವಣೆ: 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ

ಈಗಾಗಲೇ ಬಿಜೆಪಿ ನಾಯಕರು ಹೈದರಾಬಾದ್ ಪಾಲಿಕೆಯಲ್ಲಿ ತಾವೇ ಗೆದ್ದೆವು ಎಂದು ಟ್ವೀಟ್ ಮಾಡುತ್ತಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಉಚ್ಛರಿಸಿದ್ದಾರೆ.

- Advertisement -
- Advertisement -

ಹೈದರಾಬಾದ್ ಪಾಲಿಕೆ ಚುನಾವಣೆ ಈ ಬಾರಿ ದೇಶಾದ್ಯಂತ ಭಾರಿ ಕುತೂಹಲಕ್ಕ ಕಾರಣವಾಗಿತ್ತು. ಪಾಲಿಕೆ ಚುನಾವಣೆ ಪ್ರಚಾರಕ್ಕೆ ಬಿಜೆಪಿಯ ಘಟಾನುಘಟಿ ನಾಯಕರೇ ಕಣಕ್ಕಿಳಿದಿದ್ದರು. ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌’ (GHMC) ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ಫಲಿತಾಂಶ ಇಂದು ಹೊರ ಬೀಳಲಿದೆ.

150 ವಾರ್ಡ್‌ಗಳ ಹೈದರಾಬಾದ್ ಪಾಲಿಕೆ ಚುನಾವಣೆಗೆ ಡಿ.1ರಂದು ಮತದಾನ ನಡೆದಿತ್ತು. ಇಂದು ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾದ್ದು, ಸದ್ಯದ ವರದಿ ಪ್ರಕಾರ ಈವರೆಗೆ 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (TRS‌) 32 ಕ್ಷೇತ್ರಗಳಲ್ಲಿ ಮತ್ತು ಅಸಾದುದ್ದೀನ್ ಓವೈಸಿ ನೇತೃತ್ವದ  ಎಐಎಂಐಎಂ 17 ವಾರ್ಡ್‌‌ಗಳಲ್ಲಿ ಮುನ್ನಡೆ ಸಾಧಿಸಿವೆ. ಒಟ್ಟು 1,122 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇದನ್ನೂ ಓದಿ: ಹೈದರಾಬಾದ್: ಅತಿಕ್ರಮಣ ಪ್ರವೇಶ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ!

ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಹೈದರಾಬಾದ್‌ ಅನ್ನು ಭಾಗ್ಯನಗರವಾಗಿ ಮರುನಾಮಕರಣ ಮಾಡುವ ವಿಚಾರಗಳು, ಮತದಾರರ ಪಟ್ಟಿಯಲ್ಲಿ 30,000 ರಿಂದ 40,000 ರೋಹಿಂಗ್ಯಾಗಳಿದ್ದಾರೆ ಎಂಬ ಆರೋಪ,  ತೇಜಸ್ವಿ ಸೂರ್ಯ ಓವೈಸಿ ಅವರನ್ನು ಜಿನ್ನಾ ಅವರಿಗೆ ಹೋಲಿಸಿದ್ದರು.

ಸದ್ಯ 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿರುಬ ಬಗ್ಗೆ ತೆಲಂಗಾಣ ಬಿಜೆಪಿ ಸಂಸದ ಡಿ ಅರವಿಂದ್, ಜನ ಬದಲಾವಣೆ ಬಯಸಿದ್ದಾರೆ ಎಂಬುದರ ಸ್ಪಷ್ಟ ಸಂದೇಶ ಇದು ಎಂದಿದ್ದಾರೆ.

“ತೆಲಂಗಾಣದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶ, ದುಬ್ಬಾಕಾ ಉಪಚುನಾವಣೆ ಫಲಿತಾಂಶವನ್ನು ನೀವು ನೋಡಿದ್ದೀರಿ. ಈಗ ಪಾಲಿಕೆ ಸರದಿ. ಜನರು ಬದಲಾವಣೆಯನ್ನು ಬಯಸಿದ್ದಾರೆ ಎಂಬುದು ಟಿಆರ್‌ಎಸ್‌ಗೆ ಸ್ಪಷ್ಟ ಸಂದೇಶವಾಗಿದೆ. ನಾವು ಸಂಜೆಯವರೆಗೆ ಕಾಯೋಣ” ಎಂದು ತೆಲಂಗಾಣ ಬಿಜೆಪಿ ಸಂಸದ ಡಿ ಅರವಿಂದ್ ಹೇಳಿಕೆ ನೀಡಿದ್ದಾರೆ.

ಈಗಾಗಲೇ ಬಿಜೆಪಿ ನಾಯಕರು ಹೈದರಾಬಾದ್ ಪಾಲಿಕೆಯಲ್ಲಿ ತಾವೇ ಗೆದ್ದೆವು ಎಂದು ಟ್ವೀಟ್ ಮಾಡುತ್ತಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಉಚ್ಛರಿಸಿದ್ದಾರೆ.

2016ರ ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ ಚುನಾವಣೆಯಲ್ಲಿ ಟಿಆರ್‌ಎಸ್‌ 99, ಎಐಎಂಐಎಂ 44 ಗೆದ್ದರೆ ಉಳಿದ ಬಿಜೆಪಿ 4, ಕಾಂಗ್ರೆಸ್ 2 ಮತ್ತು ಟಿಡಿಪಿ 1 ಸ್ಥಾನಕ್ಕೆ ತೃಪ್ತಿ ಪಟ್ಟಿದ್ದವು.


ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...