Homeರಾಜಕೀಯಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

ಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

- Advertisement -
- Advertisement -

 ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕುರಿತೋದದೆಯುಂ ಕಾವ್ಯ ಪ್ರಯೋಗ ಪರಿಣಿತಮತಿಗಳ್ ಎಂದು ಅಮೋಘ ವರ್ಷನಿಂದ ಬಣ್ಣಿಸಲ್ಪಟ್ಟ ಜನಪದವನ್ನೊಳಗೊಂಡ ಹೈದರಾಬಾದ್ ಕರ್ನಾಟಕದ ವಸ್ತುಸ್ಥಿತಿ ತಿಳಿಯಬೇಕೆಂದರೆ ನಂಜುಡಪ್ಪ ವರದಿಯತ್ತ ಒಮ್ಮೆ ಕಣ್ಣಾಡಿಸಬೇಕು. ಈ ವರದಿಯ ಪ್ರಕಾರ ಹೈ.ಕ.ದ ಒಟ್ಟು 31 ತಾಲೂಕುಗಳಲ್ಲಿ 21 ಅತ್ಯಂತ ಹಿಂದುಳಿದ, 5 ಅತಿ ಹಿಂದುಳಿದ, 2 ಹಿಂದುಳಿದ ಹಾಗು ಕೇವಲ 3 ಮುಂದುವರಿದ ತಾಲೂಕುಗಳಿವೆ. ಈ ಹಿಂದೆ ಹೈದರಾಬಾದ್ ನಿಜಾಮರ ಕಾಲದಲ್ಲಿ ಫ್ಯೂಡಲ್ ಲ್ಯಾಂಡ್ ಲಾರ್ಡ್‍ಗಳ ದಬ್ಬಾಳಿಕೆಗೊಳಗಾಗಿದ್ದ ಈ ಭಾಗದ ಜನ ಸ್ವಾತಂತ್ರ್ಯವನ್ನೂ ಒಂದು ವರ್ಷ ತಡವಾಗಿಯೇ ಪಡೆದರು.ನಂತರ1956 ರಲ್ಲಿ ಕರ್ನಾಟಕ ಏಕೀಕರಣದ ಫಲವಾಗಿ ಮೈಸೂರು ರಾಜ್ಯಕ್ಕೆ ಸೇರ್ಪಡೆಯಾದರು. ಹೈ.ಕರ್ನಾಟಕದ ಆರ್ಥಿಕತೆ ಮುಖ್ಯವಾಗಿ ಕೃಷಿಯನ್ನು ಅವಲಂಬಿಸಿದೆ. ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಮಧ್ಯದ ಫಲವತ್ತಾದ ದೋ- ಅಬ್ ಪ್ರದೇಶವನ್ನೊಳಗೊಂಡಿದ್ದರೂ ಮಳೆಯ ಕೊರತೆ, ಸತತ ಬರಗಾಲ ಹಾಗೂ ನೀರಾವರಿ ಯೋಜನೆಗಳ ಕುಂಟುವಿಕೆಯಿಂದಾಗಿ ನಿರೀಕ್ಷಿತ ಪ್ರಮಾಣದ ಕೃಷಿ ಉತ್ಪಾದನೆ ಸಾಧ್ಯವಾಗದೇ ಜನ ಪದೇಪದೇ ಮುಂಬಯಿ, ಪುಣೆ ಹಾಗೂ ಗೋವಾಗಳಿಗೆ ಗುಳೆ ಹೋಗುವಂತಾಗಿದೆ.ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರಾರಂಭವಾದ ತುಂಗಭದ್ರಾ ಆಣೆಕಟ್ಟು ಹೊರತುಪಡಿಸಿದರೆ ಸ್ವಾತಂತ್ರ್ಯ ಬಂದ ಐದು ದಶಕಗಳಲ್ಲಿ ಒಂದೇ ಒಂದು ನೀರಾವರಿ ಯೋಜನೆಯೂ ಅನುಷ್ಠಾನಕ್ಕೆ ಬರಲಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಕಬಿನಿ,ಹೇಮಾವತಿಯಂಥಾ ಹಲವಾರು ನೀರಾವರಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ಬಂದವು.ಕಳೆದೆರಡು ದಶಕಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಲ್ಪ ಸ್ವಲ್ಪ ಅನುಷ್ಠಾನದಿಂದಾಗಿ ಐದಾರು ತಾಲ್ಲೂಕಿನ ರೈತರು ಇತ್ತೀಚೆಗೆ ನೀರಾವರಿಯ ರುಚಿ ನೋಡುತ್ತಿದ್ದಾರೆ.
ಇನ್ನು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು , ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ನಿರಾಸಕ್ತಿ ತೋರಿದ ಕಾರಣ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣಕ್ಕಾಗಿ ಹೈದರಾಬಾದ್, ಧಾರವಾಡ, ಬೆಳಗಾವಿ ಹಾಗೂ ಬೆಂಗಳೂರಿಗೆ ಹೋಗುವ ಪರಿಸ್ಥಿತಿ ಇತ್ತೀಚಿನವರೆಗೂ ಇತ್ತು.
ರಾಜಕೀಯವಾಗಿ ಹೇಳುವುದಾದರೆ ವೀರೇಂದ್ರ ಪಾಟೀಲ್ ಹಾಗೂ ಧರಂಸಿಂಗ್ ಈ ಭಾಗದಿಂದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿಯೂ ಸಹ ಇಲ್ಲಿನ ಜನ ಪ್ರತಿನಿಧಿಗಳ ಇಚ್ಛಾಶಕ್ತಿ ಮತ್ತು ಬದ್ಧತೆಯ ಕೊರತೆಯಿಂದಾಗಿ ಯಾವುದೇ ಮಹತ್ವದ ಯೋಜನೆಗಳನ್ನು ರೂಪಿಸಲಾಗಲಿಲ್ಲ.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂಬ ನಾಮಕಾವಸ್ಥೆ ಸಂಸ್ಥೆಯನ್ನು ಸ್ಥಾಪಿಸಿದರೂ ಸರಿಯಾದ ಮಾರ್ಗಸೂಚಿಗಳಿಲ್ಲದೆ ಕೇವಲ ರಸ್ತೆ, ಕಟ್ಟಡಗಳನ್ನು ನಿರ್ಮಿಸುವ ಇನ್ನೊಂದು ಏಜೆನ್ಸಿಯಾಗಿ ಮಾರ್ಪಾಡಾಯಿತು. ರಾಜ್ಯದಲ್ಲಿರುವ ನಾಲ್ಕು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಎರಡು ಹೈದರಾಬಾದ್ ಕರ್ನಾಟಕದಲ್ಲಿವೆ.(ಬಳ್ಳಾರಿ ಮತ್ತು ರಾಯಚೂರು) ಬೇಸಿಗೆಯಲ್ಲಿ 42 ಡಿಗ್ರಿಗೂ ಅಧಿಕ ತಾಪಮಾನವಿರುವ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೂ ಜನರು ಹಲ್ಲು ಕಚ್ಚಿ ಸಹಿಸಿಕೊಂಡು ಹೋಗುತ್ತಾರೆ.( ಮೈಸೂರಿನ ಚಾಮಲಾಪುರದ ಉಷ್ಣ ವಿದ್ಯುತ್ ಸ್ಥಾವರಕ್ಕೆ ಬಂದ ಪ್ರತಿರೋಧವನ್ನು ನೆನಪಿಸಿಕೊಳ್ಳಿ) ಬಹುಶಃ ಕಲ್ಯಾಣ ಕರ್ನಾಟಕದ ಶರಣರು ಮತ್ತು ತತ್ವಪದಕಾರರ ವಾರಸತ್ವದಿಂದಾಗಿ ಈ ಭಾಗದ ಜನರು ಪಡೆದುಕೊಂಡಿರುವ ಸಹಿಷ್ಣುತೆ ಹಾಗೂ ಸ್ಥಿತಪ್ರಜ್ಞತೆಗಳೇ ಇಲ್ಲಿನ ಜನಪ್ರತಿನಿಧಿಗಳಿಗೆ ವರವಾಗಿ ಪರಿಣಮಿಸಿವೆ. ಹಾಗಾಗಿ ಅವರು ಪರ್ಸೆಂಟೇಜ್ ಅಭಿವೃದ್ಧಿಯಲ್ಲಿ ಮುಳುಗಿ ತಮ್ಮ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳಿಗಾಗುವಷ್ಟು ಸಂಪತ್ತು ಗಳಿಸುವುದರಲ್ಲಿ ತಲ್ಲೀನರಾಗಿ ಜನಹಿತವನ್ನೇ ಮರೆತಿದ್ದಾರೆ.ಶೋಷಿತ ಸಮುದಾಯದಿಂದ ಬಂದ ನಾಯಕರುಗಳು ಕೂಡಾ ತಾವು ಬದುಕಿರುವಾಗಲೇ ಮಕ್ಕಳು ಮರಿಗಳಿಗೆ ಎಮ್.ಎಲ್.ಎ, ಎಂ.ಎಲ್.ಸಿ.ಹಾಗೂ ಮಂತ್ರಿ ಪದವಿಗಳನ್ನು ಕೊಡಿಸುವ ಮೂಲಕ ಅವರಿಗೊಂದು ನೆಲೆ ಕಲ್ಪಿಸುವ ಅತ್ಯವಸರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಒಟ್ಟಾರೆ ಹೇಳುವುದಾದರೆ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ , (ಶಾಸನ ರಚನೆಯ ಅಧಿಕಾರವನ್ನು ಹೊರತುಪಡಿಸಿ ಹಣಕಾಸು, ಕಾರ್ಯ ನಿರ್ವಾಹಕ, ಆಡಳಿತಾತ್ಮಕ ಹೀಗೆ ಎಲ್ಲಾ ಅಧಿಕಾರಗಳನ್ನೊಳಗೊಂಡ) ಸ್ವಾಯತ್ತ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯನ್ನಾಗಿ ಪುನರ್‍ರಚನೆ ಮಾಡುವುದರ ಮೂಲಕ ಮಾತ್ರ ಈ ಭಾಗದ ಸರ್ವಾಂಗೀಣ ಪ್ರಗತಿ ಸಾಧ್ಯ. ಅದುವರೆಗೂ 371ಜೆ ಎಂಬ ಮೂಗಿಗೆ ಸವರಿದ ತುಪ್ಪದ ವಾಸನೆಯಲ್ಲಿಯೇ ತೃಪ್ತಿ ಪಡಬೇಕಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...