Homeರಾಜಕೀಯಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

ಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

- Advertisement -
- Advertisement -

 ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕುರಿತೋದದೆಯುಂ ಕಾವ್ಯ ಪ್ರಯೋಗ ಪರಿಣಿತಮತಿಗಳ್ ಎಂದು ಅಮೋಘ ವರ್ಷನಿಂದ ಬಣ್ಣಿಸಲ್ಪಟ್ಟ ಜನಪದವನ್ನೊಳಗೊಂಡ ಹೈದರಾಬಾದ್ ಕರ್ನಾಟಕದ ವಸ್ತುಸ್ಥಿತಿ ತಿಳಿಯಬೇಕೆಂದರೆ ನಂಜುಡಪ್ಪ ವರದಿಯತ್ತ ಒಮ್ಮೆ ಕಣ್ಣಾಡಿಸಬೇಕು. ಈ ವರದಿಯ ಪ್ರಕಾರ ಹೈ.ಕ.ದ ಒಟ್ಟು 31 ತಾಲೂಕುಗಳಲ್ಲಿ 21 ಅತ್ಯಂತ ಹಿಂದುಳಿದ, 5 ಅತಿ ಹಿಂದುಳಿದ, 2 ಹಿಂದುಳಿದ ಹಾಗು ಕೇವಲ 3 ಮುಂದುವರಿದ ತಾಲೂಕುಗಳಿವೆ. ಈ ಹಿಂದೆ ಹೈದರಾಬಾದ್ ನಿಜಾಮರ ಕಾಲದಲ್ಲಿ ಫ್ಯೂಡಲ್ ಲ್ಯಾಂಡ್ ಲಾರ್ಡ್‍ಗಳ ದಬ್ಬಾಳಿಕೆಗೊಳಗಾಗಿದ್ದ ಈ ಭಾಗದ ಜನ ಸ್ವಾತಂತ್ರ್ಯವನ್ನೂ ಒಂದು ವರ್ಷ ತಡವಾಗಿಯೇ ಪಡೆದರು.ನಂತರ1956 ರಲ್ಲಿ ಕರ್ನಾಟಕ ಏಕೀಕರಣದ ಫಲವಾಗಿ ಮೈಸೂರು ರಾಜ್ಯಕ್ಕೆ ಸೇರ್ಪಡೆಯಾದರು. ಹೈ.ಕರ್ನಾಟಕದ ಆರ್ಥಿಕತೆ ಮುಖ್ಯವಾಗಿ ಕೃಷಿಯನ್ನು ಅವಲಂಬಿಸಿದೆ. ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಮಧ್ಯದ ಫಲವತ್ತಾದ ದೋ- ಅಬ್ ಪ್ರದೇಶವನ್ನೊಳಗೊಂಡಿದ್ದರೂ ಮಳೆಯ ಕೊರತೆ, ಸತತ ಬರಗಾಲ ಹಾಗೂ ನೀರಾವರಿ ಯೋಜನೆಗಳ ಕುಂಟುವಿಕೆಯಿಂದಾಗಿ ನಿರೀಕ್ಷಿತ ಪ್ರಮಾಣದ ಕೃಷಿ ಉತ್ಪಾದನೆ ಸಾಧ್ಯವಾಗದೇ ಜನ ಪದೇಪದೇ ಮುಂಬಯಿ, ಪುಣೆ ಹಾಗೂ ಗೋವಾಗಳಿಗೆ ಗುಳೆ ಹೋಗುವಂತಾಗಿದೆ.ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರಾರಂಭವಾದ ತುಂಗಭದ್ರಾ ಆಣೆಕಟ್ಟು ಹೊರತುಪಡಿಸಿದರೆ ಸ್ವಾತಂತ್ರ್ಯ ಬಂದ ಐದು ದಶಕಗಳಲ್ಲಿ ಒಂದೇ ಒಂದು ನೀರಾವರಿ ಯೋಜನೆಯೂ ಅನುಷ್ಠಾನಕ್ಕೆ ಬರಲಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಕಬಿನಿ,ಹೇಮಾವತಿಯಂಥಾ ಹಲವಾರು ನೀರಾವರಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ಬಂದವು.ಕಳೆದೆರಡು ದಶಕಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಲ್ಪ ಸ್ವಲ್ಪ ಅನುಷ್ಠಾನದಿಂದಾಗಿ ಐದಾರು ತಾಲ್ಲೂಕಿನ ರೈತರು ಇತ್ತೀಚೆಗೆ ನೀರಾವರಿಯ ರುಚಿ ನೋಡುತ್ತಿದ್ದಾರೆ.
ಇನ್ನು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು , ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ನಿರಾಸಕ್ತಿ ತೋರಿದ ಕಾರಣ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣಕ್ಕಾಗಿ ಹೈದರಾಬಾದ್, ಧಾರವಾಡ, ಬೆಳಗಾವಿ ಹಾಗೂ ಬೆಂಗಳೂರಿಗೆ ಹೋಗುವ ಪರಿಸ್ಥಿತಿ ಇತ್ತೀಚಿನವರೆಗೂ ಇತ್ತು.
ರಾಜಕೀಯವಾಗಿ ಹೇಳುವುದಾದರೆ ವೀರೇಂದ್ರ ಪಾಟೀಲ್ ಹಾಗೂ ಧರಂಸಿಂಗ್ ಈ ಭಾಗದಿಂದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿಯೂ ಸಹ ಇಲ್ಲಿನ ಜನ ಪ್ರತಿನಿಧಿಗಳ ಇಚ್ಛಾಶಕ್ತಿ ಮತ್ತು ಬದ್ಧತೆಯ ಕೊರತೆಯಿಂದಾಗಿ ಯಾವುದೇ ಮಹತ್ವದ ಯೋಜನೆಗಳನ್ನು ರೂಪಿಸಲಾಗಲಿಲ್ಲ.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂಬ ನಾಮಕಾವಸ್ಥೆ ಸಂಸ್ಥೆಯನ್ನು ಸ್ಥಾಪಿಸಿದರೂ ಸರಿಯಾದ ಮಾರ್ಗಸೂಚಿಗಳಿಲ್ಲದೆ ಕೇವಲ ರಸ್ತೆ, ಕಟ್ಟಡಗಳನ್ನು ನಿರ್ಮಿಸುವ ಇನ್ನೊಂದು ಏಜೆನ್ಸಿಯಾಗಿ ಮಾರ್ಪಾಡಾಯಿತು. ರಾಜ್ಯದಲ್ಲಿರುವ ನಾಲ್ಕು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಎರಡು ಹೈದರಾಬಾದ್ ಕರ್ನಾಟಕದಲ್ಲಿವೆ.(ಬಳ್ಳಾರಿ ಮತ್ತು ರಾಯಚೂರು) ಬೇಸಿಗೆಯಲ್ಲಿ 42 ಡಿಗ್ರಿಗೂ ಅಧಿಕ ತಾಪಮಾನವಿರುವ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೂ ಜನರು ಹಲ್ಲು ಕಚ್ಚಿ ಸಹಿಸಿಕೊಂಡು ಹೋಗುತ್ತಾರೆ.( ಮೈಸೂರಿನ ಚಾಮಲಾಪುರದ ಉಷ್ಣ ವಿದ್ಯುತ್ ಸ್ಥಾವರಕ್ಕೆ ಬಂದ ಪ್ರತಿರೋಧವನ್ನು ನೆನಪಿಸಿಕೊಳ್ಳಿ) ಬಹುಶಃ ಕಲ್ಯಾಣ ಕರ್ನಾಟಕದ ಶರಣರು ಮತ್ತು ತತ್ವಪದಕಾರರ ವಾರಸತ್ವದಿಂದಾಗಿ ಈ ಭಾಗದ ಜನರು ಪಡೆದುಕೊಂಡಿರುವ ಸಹಿಷ್ಣುತೆ ಹಾಗೂ ಸ್ಥಿತಪ್ರಜ್ಞತೆಗಳೇ ಇಲ್ಲಿನ ಜನಪ್ರತಿನಿಧಿಗಳಿಗೆ ವರವಾಗಿ ಪರಿಣಮಿಸಿವೆ. ಹಾಗಾಗಿ ಅವರು ಪರ್ಸೆಂಟೇಜ್ ಅಭಿವೃದ್ಧಿಯಲ್ಲಿ ಮುಳುಗಿ ತಮ್ಮ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳಿಗಾಗುವಷ್ಟು ಸಂಪತ್ತು ಗಳಿಸುವುದರಲ್ಲಿ ತಲ್ಲೀನರಾಗಿ ಜನಹಿತವನ್ನೇ ಮರೆತಿದ್ದಾರೆ.ಶೋಷಿತ ಸಮುದಾಯದಿಂದ ಬಂದ ನಾಯಕರುಗಳು ಕೂಡಾ ತಾವು ಬದುಕಿರುವಾಗಲೇ ಮಕ್ಕಳು ಮರಿಗಳಿಗೆ ಎಮ್.ಎಲ್.ಎ, ಎಂ.ಎಲ್.ಸಿ.ಹಾಗೂ ಮಂತ್ರಿ ಪದವಿಗಳನ್ನು ಕೊಡಿಸುವ ಮೂಲಕ ಅವರಿಗೊಂದು ನೆಲೆ ಕಲ್ಪಿಸುವ ಅತ್ಯವಸರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಒಟ್ಟಾರೆ ಹೇಳುವುದಾದರೆ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ , (ಶಾಸನ ರಚನೆಯ ಅಧಿಕಾರವನ್ನು ಹೊರತುಪಡಿಸಿ ಹಣಕಾಸು, ಕಾರ್ಯ ನಿರ್ವಾಹಕ, ಆಡಳಿತಾತ್ಮಕ ಹೀಗೆ ಎಲ್ಲಾ ಅಧಿಕಾರಗಳನ್ನೊಳಗೊಂಡ) ಸ್ವಾಯತ್ತ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯನ್ನಾಗಿ ಪುನರ್‍ರಚನೆ ಮಾಡುವುದರ ಮೂಲಕ ಮಾತ್ರ ಈ ಭಾಗದ ಸರ್ವಾಂಗೀಣ ಪ್ರಗತಿ ಸಾಧ್ಯ. ಅದುವರೆಗೂ 371ಜೆ ಎಂಬ ಮೂಗಿಗೆ ಸವರಿದ ತುಪ್ಪದ ವಾಸನೆಯಲ್ಲಿಯೇ ತೃಪ್ತಿ ಪಡಬೇಕಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...